Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡ ನಾಮಫಲಕಗಳ ಬಳಕೆಗೆ ಸ್ವ ಇಚ್ಛೆಯಿಂದ ಮುಂದಾಗಿ :  ಶಾಸಕ ವೀರೇಂದ್ರ ಪಪ್ಪಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ,ಜುಲೈ. 10 :  ಕನ್ನಡ ನಾಮಫಲಕಗಳ ಅಳವಡಿಕೆಯನ್ನು ಕನ್ನಡ ನೆಲದಲ್ಲಿ ಜೀವಿಸುತ್ತಿರುವ ಪ್ರತಿಯೊಬ್ಬರು ಸ್ವ ಇಚ್ಛೆಯಿಂದ ಖಡ್ಡಾಯಗೊಳಿಸಿಕೊಂಡು ಪಾಲನೆ ಮಾಡಬೇಕೆಂದು ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ ಕರೆ ನೀಡಿದರು. 

ನಗರದ ಒನಕೆಓಬವ್ವ ವೃತ್ತದಲ್ಲಿ  ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡ ನಾಮಫಲಕಗಳ ಅಳವಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆದೇಶ ಹೊರಡಿಸಿದ್ದಾರೆ.  ಪ್ರತಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಗೆ ಸರ್ಕಾರ ಆದೇಶಿಸಿದೆ.  ಜೊತೆಯಲ್ಲಿ ಕನ್ನಡ ನಾಡಿನಲ್ಲಿ ಇರುವಂತಹ ಎಲ್ಲಾ ವರ್ಗದ ಜನತೆ ನಾಮಫಲಕಗಳಲ್ಲಿ ಕನ್ನಡ ಬಳಕೆಯನ್ನು ಸ್ವ ಇಚ್ಛೆಯಿಂದ ಜಾರಿಗೊಳಿಸಬೇಕೆಂದು ಮನವಿ ಮಾಡಿದರು.

ಕನ್ನಡದ ಬಗ್ಗೆ ಹೋರಾಟಗಾರರಿಗೂ ತಮಗೂ, ಅಧಿಕಾರಿಗಳಿಗೂ, ಜಿಲ್ಲಾಡಳಿತಕ್ಕೂ ಅಪಾರವಾದ ಜವಾಬ್ದಾರಿ ಇದೆ.  ಕನ್ನಡ ಭಾಷೆ ಬೆಳೆಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುವುದಾಗಿ ಹೇಳಿದರು.

ಕರ್ನಾಟಕ ಜ್ಯೋತಿ ರಥಯಾತ್ರೆಯ ಕಾರ್ಯಕ್ರಮವನ್ನು ನಗರದಲ್ಲಿ ಅಧಿಕಾರಿಗಳು ಅಚ್ಚುಕಟ್ಟಾಗಿ ಸಜ್ಜುಗೊಳಿಸಿದ್ದಾರೆಂದು ಇದೇ ಸಂದರ್ಭದಲ್ಲಿ ಶಾಸಕರು ಪ್ರಶಂಸೆ ವ್ಯಕ್ತಿಪಡಿಸಿದರು.

ಕನ್ನಡ ಪರ ಹೋರಾಟಗಾರ ಶಿವಕುಮಾರ್ ಮಾತನಾಡಿ. ಕನ್ನಡ ನಾಮಫಲಕಗಳ ಅಳವಡಿಕೆಗೆ ಆಗ್ರಹಿಸಿ ಮಾಡಲಾದ ಹೋರಾಟದ ಸಂದರ್ಭದಲ್ಲಿ ನಮ್ಮ ಮೇಲೂ, ಕನ್ನಡ ಪರ ಹೋರಾಟಗಾರರ ಮೇಲೂ ಪೊಲೀಸ್ ಪ್ರಕರಣಗಳು ದಾಖಲಾಗಿವೆ.  ಇದ್ಯಾವುದಕ್ಕೂ ಜಗ್ಗದೇ ಕನ್ನಡ ಪರವಾದ ಹೋರಾಟವನ್ನು ನಿಲ್ಲಿಸುವುದಿಲ್ಲವೆಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ರಮೇಶ್, ಕರುನಾಡು ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಸೇರಿದಂತೆ ಹಲವಾರು ಕನ್ನಡಪರ ಹೋರಾಟಗಾರರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!