Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡ ನಾಮಫಲಕಗಳ ಬಳಕೆಗೆ ಸ್ವ ಇಚ್ಛೆಯಿಂದ ಮುಂದಾಗಿ :  ಶಾಸಕ ವೀರೇಂದ್ರ ಪಪ್ಪಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ,ಜುಲೈ. 10 :  ಕನ್ನಡ ನಾಮಫಲಕಗಳ ಅಳವಡಿಕೆಯನ್ನು ಕನ್ನಡ ನೆಲದಲ್ಲಿ ಜೀವಿಸುತ್ತಿರುವ ಪ್ರತಿಯೊಬ್ಬರು ಸ್ವ ಇಚ್ಛೆಯಿಂದ ಖಡ್ಡಾಯಗೊಳಿಸಿಕೊಂಡು ಪಾಲನೆ ಮಾಡಬೇಕೆಂದು ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ ಕರೆ ನೀಡಿದರು. 

ನಗರದ ಒನಕೆಓಬವ್ವ ವೃತ್ತದಲ್ಲಿ  ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡ ನಾಮಫಲಕಗಳ ಅಳವಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆದೇಶ ಹೊರಡಿಸಿದ್ದಾರೆ.  ಪ್ರತಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಗೆ ಸರ್ಕಾರ ಆದೇಶಿಸಿದೆ.  ಜೊತೆಯಲ್ಲಿ ಕನ್ನಡ ನಾಡಿನಲ್ಲಿ ಇರುವಂತಹ ಎಲ್ಲಾ ವರ್ಗದ ಜನತೆ ನಾಮಫಲಕಗಳಲ್ಲಿ ಕನ್ನಡ ಬಳಕೆಯನ್ನು ಸ್ವ ಇಚ್ಛೆಯಿಂದ ಜಾರಿಗೊಳಿಸಬೇಕೆಂದು ಮನವಿ ಮಾಡಿದರು.

ಕನ್ನಡದ ಬಗ್ಗೆ ಹೋರಾಟಗಾರರಿಗೂ ತಮಗೂ, ಅಧಿಕಾರಿಗಳಿಗೂ, ಜಿಲ್ಲಾಡಳಿತಕ್ಕೂ ಅಪಾರವಾದ ಜವಾಬ್ದಾರಿ ಇದೆ.  ಕನ್ನಡ ಭಾಷೆ ಬೆಳೆಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುವುದಾಗಿ ಹೇಳಿದರು.

ಕರ್ನಾಟಕ ಜ್ಯೋತಿ ರಥಯಾತ್ರೆಯ ಕಾರ್ಯಕ್ರಮವನ್ನು ನಗರದಲ್ಲಿ ಅಧಿಕಾರಿಗಳು ಅಚ್ಚುಕಟ್ಟಾಗಿ ಸಜ್ಜುಗೊಳಿಸಿದ್ದಾರೆಂದು ಇದೇ ಸಂದರ್ಭದಲ್ಲಿ ಶಾಸಕರು ಪ್ರಶಂಸೆ ವ್ಯಕ್ತಿಪಡಿಸಿದರು.

ಕನ್ನಡ ಪರ ಹೋರಾಟಗಾರ ಶಿವಕುಮಾರ್ ಮಾತನಾಡಿ. ಕನ್ನಡ ನಾಮಫಲಕಗಳ ಅಳವಡಿಕೆಗೆ ಆಗ್ರಹಿಸಿ ಮಾಡಲಾದ ಹೋರಾಟದ ಸಂದರ್ಭದಲ್ಲಿ ನಮ್ಮ ಮೇಲೂ, ಕನ್ನಡ ಪರ ಹೋರಾಟಗಾರರ ಮೇಲೂ ಪೊಲೀಸ್ ಪ್ರಕರಣಗಳು ದಾಖಲಾಗಿವೆ.  ಇದ್ಯಾವುದಕ್ಕೂ ಜಗ್ಗದೇ ಕನ್ನಡ ಪರವಾದ ಹೋರಾಟವನ್ನು ನಿಲ್ಲಿಸುವುದಿಲ್ಲವೆಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ರಮೇಶ್, ಕರುನಾಡು ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಸೇರಿದಂತೆ ಹಲವಾರು ಕನ್ನಡಪರ ಹೋರಾಟಗಾರರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಹರಿವಾಯುಗುರು ಸೇವಾ ಟ್ರಸ್ಟ್ ವತಿಯಿಂದ ಆಚರಿಸುವ ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ

ಚಿತ್ರದುರ್ಗ | ಐಎಂಎ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಭಾರತೀಯ ವೈದ್ಯಕೀಯ ಸಂಘ (ಐಎಮ್‌ಎ) ಚಿತ್ರದುರ್ಗ ಶಾಖೆಯ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಎಲ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನಗರದ ಐಎಂಎ

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 27: ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ

error: Content is protected !!