Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಥಳೀಯ ಅಭ್ಯರ್ಥಿಗೆ ಮತ ನೀಡಿ ಕ್ಷೇತ್ರದ ಘನತೆ ಕಾಪಾಡಿ : ಹೆಚ್ ಮಹೇಶ್

Facebook
Twitter
Telegram
WhatsApp

ಹಿರಿಯೂರು, (ಏ.28) : ನಮ್ಮೂರಲ್ಲಿ ನಮ್ಮವರನ್ನ ಇಟ್ಟುಕೊಂಡು ಬೇರೆಯವರ ದಾಸರಾಗಬಾರದು ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಳೀಯ ಅಭ್ಯರ್ಥಿ ಗನ್ನಾಯಕನಹಳ್ಳಿ ಹೆಚ್. ಮಹೇಶ್ ಹೇಳಿದರು.

ತಾಲೂಕಿನ ವಾಣಿವಿಲಾಸಪುರ ಗ್ರಾಮ, ಕಣಿವೆ ಮಾರಮ್ಮ ಜಾತ್ರೆ ಮತ್ತು ಇನ್ನಿತರ ಭಾಗಗಳಲ್ಲಿ ಮತಪ್ರಚಾರ ನೆಡೆಸಿ, ಅಲ್ಲಿನ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.

ಒಬ್ಬ ವ್ಯಕ್ತಿಗೆ ಒಂದೇ ಒಂದು ಮತ ಇದೆ. ಆ ಒಂದು ಮತವನ್ನು ನೀಡಲು ಯಾಕೆ ಇಷ್ಟೊಂದು ಯೋಚನೆ ಯಾಕೆ  ಮಾಡುತ್ತೀರಾ ನನಗೆ ಅರ್ಥವಾಗುತ್ತಿಲ್ಲ, ದಯಮಾಡಿ
ಹಿರಿಯೂರು ಕ್ಷೇತ್ರವನ್ನ ಆಳ್ವಿಕೆ ಚಳ್ಳಕೆರೆ, ಶಿರಾ ಹಾಗೂ ಬೆಂಗಳೂರು ಭಾಗದಿಂದ ದಂಡೆತ್ತಿ ಬಂದಿದ್ದಾರೆ. ಅವರಿಂದ ಯಾವುದೇ ಹಿಮ್ಮೆಟ್ಟಿಸುವ ಮೂಲಕ ಈ ಮಣ್ಣಿನ ಗೌರವ ಹಾಗೂ ಸ್ವಾಭಿಮಾನಕ್ಕಾಗಿ ಸ್ಥಳೀಯ ಅಭ್ಯರ್ಥಿಗೆ ಒಂದೇ ಒಂದು ಬಾರಿ ಅವಕಾಶ ಕಲ್ಪಿಸುವ ಮೂಲಕ ಈ ಕ್ಷೇತ್ರದ ಹಿರಿಮೆಯನ್ನು ಹೆಚ್ಚಿಸಿ ಎಂದರು.

ಒಂದು ದಿನದ ಆಸೆ ಆಮಿಷಗಳಿಗೆ ಒಳಗಾಗಿ ನಿಮ್ಮ ಮತವನ್ನು ಮಾರಿಕೊಳ್ಳಬೇಡಿ. ಸ್ಥಳೀಯ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ನಮ್ಮ ತನವನ್ನು ಉಳಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಕಂಕಣ ಬದ್ಧರಾಗಿ ಶ್ರಮಿಸೋಣ.

ನನಗೆ ಭರವಸೆ ಇದೆ. ಈ ಕ್ಷೇತ್ರದ ಮತದಾರರು ನನ್ನನ್ನು ಕೈ ಹಿಡಿದು ವಿಧಾನಸೌಧಕ್ಕೆ ಕಳಿಸುತ್ತಾರೆ ಎಂಬ ಭರವಸೆ ನನಗಿದೆ ಎಂದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶರೀಫ್ ಸಾಬ್, ತಿಪ್ಪೇಸ್ವಾಮಿ, ಶಿವರುದ್ರಪ್ಪ, ಸಂತೋಷ್ ಹಾಗೂ ಕೆಆರ್ಪಿಪಿ ಪಕ್ಷದ ಕಾರ್ಯಕರ್ತರು ಸೇರಿದಂತೆ ಮತ್ತಿತರರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!