ರಾಜಕೀಯ ಜೀವನದಲ್ಲಿ ಜವಾಬ್ದಾರಿ ಅರಿತು ಕೆಲಸ ಮಾಡಿದಾಗ ಮಾತ್ರ ಮತದಾರರ ಋಣ ತೀರಿಸಲು ಸಾಧ್ಯ :  ಶಾಸಕ ಎಂ.ಚಂದ್ರಪ್ಪ

ಚಿತ್ರದುರ್ಗ, (ಅ.08): ರಾಜಕೀಯ ಜೀವನದಲ್ಲಿ ಜವಾಬ್ದಾರಿ ಅರಿತು ಕೆಲಸ ಮಾಡಿದಾಗ ಮಾತ್ರ ಕ್ಷೇತ್ರದ ಜನರ ಹಾಗೂ ಸಮಾಜದ, ಮಣ್ಣಿನ ಋಣ ತೀರಿಸಲು ಸಾಧ್ಯ ಎಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಹೇಳಿದರು.

ಚಿಕ್ಕಜಾಜೂರಿನಲ್ಲಿ ಮೂರು ಕೋಟಿ ಹನ್ನೊಂದು ಲಕ್ಷ ರೂ.ವೆಚ್ಚದಲ್ಲಿ ಜಲಜೀವನ್ ಯೋಜನೆಯಡಿ ಪ್ರತಿ ಮನೆ ಮನೆಗೂ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

ರಾಜ್ಯದ ಆರುವರೆ ಕೋಟಿ ಜನಸಂಖ್ಯೆಗೆ 224 ಶಾಸಕರುಗಳಿದ್ದಾರೆ. ಹಾಗಾಗಿ ಜವಾಬ್ದಾರಿಯನ್ನು ತಿಳಿದು ಕೆಲಸ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ, ರಸ್ತೆ, ವಿದ್ಯುತ್ ಸಮಸ್ಯೆಯನ್ನು ನೀಗಿಸಿದ್ದೇನೆ. 28 ವರ್ಷಗಳ ಹಿಂದೆ ಭರಮಸಾಗರ ಕ್ಷೇತ್ರದಿಂದ ಬಾಣದ ಗುರುತಿಗೆ ಸ್ಪರ್ಧಿಸಿ ಗೆದ್ದು ಅಲ್ಲಿಂದ ಇಲ್ಲಿಯತನಕ ರಾಜಕೀಯದಲ್ಲಿ ನಿಮ್ಮ ಸೇವೆ ಮಾಡಿಕೊಂಡು ಬರುತ್ತಿದ್ದೇನೆ. ಆಗ ಭರಮಸಾಗರ, ದಾವಣಗೆರೆ, ಚಿತ್ರದುರ್ಗ ಸೇರಿ 491 ಹಳ್ಳಿಗಳಿದ್ದವು. ಅದರಲ್ಲಿ 386 ಹಳ್ಳಿಗಳಲ್ಲಿ ಮಣ್ಣಿನ  ರಸ್ತೆಗಳಿದ್ದವು. ಎಲ್ಲವನ್ನು ಟಾರ್ ರಸ್ತೆಯನ್ನಾಗಿ ಮಾಡಿದ್ದೇನೆ. ಅದರ ಪರಿಣಾಮ ಎರಡನೆ ಬಾರಿಗೆ ನಿಂತಾಗ ಯುವಕರು ನನ್ನನ್ನು ಹೆಗಲ ಮೇಲೆ ಹೊತ್ತು ಕುಣಿಸಿ ಹದಿನೆಂಟುವರೆ ಸಾವಿರ ಮತಗಳ ಅಂತರದಿಂದ ಮತ್ತೆ ಗೆಲ್ಲಿಸಿ ಎರಡನೆ ಬಾರಿಗೆ ಗೆಲ್ಲುವುದಿಲ್ಲ ಎನ್ನುವ ತಪ್ಪು ಕಲ್ಪನೆಯನ್ನು ಸುಳ್ಳಾಗಿಸಿ ರಸ್ತೆ ರಾಜ ಎಂಬ ಬಿರುದು ನೀಡಿದರು ಎನ್ನುವುದನ್ನು ಸ್ಮರಿಸಿಕೊಂಡರು.

ಚಿಕ್ಕಜಾಜೂರಿನಿಂದ ಚಿಕ್ಕಎಮ್ಮಿಗನೂರಿಗೆ 30 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿಗೆ ಪೈಪ್‍ಲೈನ್ ಆಗಿದೆ. ನಬಾರ್ಡ್‍ನಿಂದ 370 ಕೋಟಿ ರೂ.ಮಂಜೂರಾಗಿದೆ. ತೋಟಗಳನ್ನು ಉಳಿಸಿಕೊಳ್ಳಲು ರೈತರು ತಮ್ಮ ಮನೆಯಲ್ಲಿದ್ದ ಬಂಗಾರವನ್ನು ಮಾರಿದರೆ ಇನ್ನು ಕೆಲವರು ಟ್ಯಾಂಕರ್‍ಗಳಿಂದ ನೀರು ತಂದು ತೋಟಗಳನ್ನು ರಕ್ಷಣೆ ಮಾಡಿಕೊಂಡಿದ್ದನ್ನು ನೋಡಿ ಕಳೆದ ನಾಲ್ಕು ವರ್ಷದಲ್ಲಿ 300 ಕ್ಕೂ ಹೆಚ್ಚು ಚೆಕ್‍ಡ್ಯಾಂಗಳನ್ನು ಕಟ್ಟಿಸಿದ್ದರಿಂದ ಎಲ್ಲಾ ಕೆರೆಗಳು ಕೋಡಿ ಬಿದ್ದಿವೆ. ಹಿರಿಯೂರಿನ ವಿ.ವಿ.ಸಾಗರದಿಂದ ಪೈಪ್‍ಲೈನ್ ಬರುತ್ತಿದ್ದು, ಇನ್ನು ಮೂರ್ನಾಲ್ಕು ತಿಂಗಳುಗಳಲ್ಲಿ 493 ಹಳ್ಳಿಗಳಿಗೆ ನೀರು ಪೂರೈಸಲಾಗುವುದು. ಇದಕ್ಕಾಗಿ 370 ಕೋಟಿ ರೂ.ಗಳನ್ನು ನೀಡಿದ್ದು, ಹೆಚ್ಚುವರಿಯಾಗಿ ಮತ್ತೆ ನೂರು ಕೋಟಿ ರೂ.ಗಳನ್ನು ಕೊಡುವುದಾಗಿ ತಿಳಿಸಿದರು.
ಜೋಗ್‍ಫಾಲ್ಸ್‍ನಿಂದ ನೇರವಾಗಿ 270 ಮೆ.ಗಾ.ವ್ಯಾಟ್ ವಿದ್ಯುತ್ ತರಿಸಿಕೊಂಡು ಕರೆಂಟ್ ಸಮಸ್ಯೆಯಿಲ್ಲದಂತೆ ನೋಡಿಕೊಳ್ಳುತ್ತೇನೆ. ಚಿಕ್ಕಜಾಜೂರಿನಿಂದ ಚಿತ್ರಹಳ್ಳಿವರೆಗೆ ರಸ್ತೆಗೆ ಹದಿಮೂರು ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಇಡಿ ಹೊಳಲ್ಕೆರೆ ತಾಲ್ಲೂಕಿನ ಜನರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಆಸ್ಪತ್ರೆ ಕಟ್ಟಿಸಲು ಹತ್ತು ಕೋಟಿ ರೂ.ಗಳನ್ನು ನೀಡಿದ್ದೇನೆ. ಇನ್ನು ಒಂದು ತಿಂಗಳಲ್ಲಿ ಗುದ್ದಲಿ ಪೂಜೆ ನಡೆಯಲಿದೆ. ಅಧಿಕಾರ ಶಾಶ್ವತವಲ್ಲ. ಇರುವತನಕ ಮತದಾರರಿಗೆ ಅನುಕೂಲ ಮಾಡಬೇಕೆಂಬುದು ನನ್ನ ಆಸೆ. ಫುಟ್‍ಪಾತ್‍ನಲ್ಲಿ ವ್ಯಾಪಾರ ಮಾಡಿಕೊಂಡು ಜೀವಿಸುತ್ತಿದ್ದ ಬಡವರಿಗೆ ಕಾಂಪ್ಲೆಕ್ಸ್ ನಿರ್ಮಾಣಕ್ಕಾಗಿ ಒಂದುವರೆ ಕೋಟಿ ರೂ.ಗಳನ್ನು ಕೊಟ್ಟಿದ್ದೇನೆ. ಹಗಲು-ರಾತ್ರಿ ಶ್ರಮ ವಹಿಸಿ ಕ್ಷೇತ್ರದ ಮತದಾರರ ಒಳಿತಿಗೆ ಸಿದ್ದ ಎಂದು ಶಾಸಕ ಎಂ.ಚಂದ್ರಪ್ಪ ಭರವಸೆ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರಶ್ಮಿಪ್ರದೀಪ್, ಉಪಾಧ್ಯಕ್ಷ ಪಿ.ಎಸ್.ಮೂರ್ತಿ, ಪುಟ್ಟಣ್ಣ, ರಾಜಣ್ಣ, ಶ್ರೀಕಾಂತ್, ಯೋಗಣ್ಣ, ಗಂಗಣ್ಣ, ಶ್ರೀಮತಿ ವನಜಾಮೀನಾಕ್ಷಿ, ಡಿ.ಸಿ.ಮೋಹನ್, ಗ್ರಾಮ ಪಂಚಾಯಿತಿ ಸದಸ್ಯರುಗಳು ಈ ಸಂದರ್ಭದಲ್ಲಿದ್ದರು.

 

 

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

37 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago