Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತದಾರರು ಪ್ರಾಮಾಣಿಕವಾಗಿ ಮತದಾನದ ಹಕ್ಕನ್ನು ಚಲಾಯಿಸಿ : ಜಿ.ಎಸ್.ಸುರೇಶ್

Facebook
Twitter
Telegram
WhatsApp

ಚಿತ್ರದುರ್ಗ, (ಏ.10) : ಭಾರತದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಶ್ರೀಮಂತ, ಬಡವ ಎಂಬ ಯಾವುದೇ ತಾರತಮ್ಯವಿಲ್ಲ ಎಲ್ಲರಿಗೂ ಮತದಾನ ಮಾಡುವ ಹಕ್ಕನ್ನು ನಮ್ಮ ಪ್ರಜಾಪ್ರಭುತ್ವ ಕಲ್ಪಿಸಿದೆ ಎಂದು ಫ್ಲೈಯಿಂಗ್ ಸ್ಕ್ವಾಡ್ ಜಿ.ಎಸ್.ಸುರೇಶ್ ಹೇಳಿದರು.

ಹೊಳಲ್ಕೆರೆ ಪಟ್ಟಣದ ಕಸಬಾ ಹೋಬಳಿ ವ್ಯಾಪ್ತಿಯ ಸಿಹಿನೀರಕಟ್ಟೆ ಗ್ರಾಮದಲ್ಲಿ ವಿಧಾನಸಭಾ ಚುನಾವಣೆ-2023 ರ ಹಿನ್ನಲೆಯಲ್ಲಿ ಮತದಾನ ಜಾಗೃತಿ ಮೂಡಿಸಿದ ಫ್ಲೈಯಿಂಗ್ ಸ್ಕ್ವಾಡ್ ಜಿ.ಎಸ್.ಸುರೇಶ್ ಮಾತನಾಡಿದರು.

ರಾಜಕೀಯಕ್ಕೂ ನಮಗೂ ನಮಗೂ ಸಂಬಂಧವಿಲ್ಲ ಎಂದು ಯಾರು ಮತದಾನದ ಪ್ರಕ್ರಿಯೆಯಿಂದ ದೂರ ಉಳಿಯಬಾರದು. ಉತ್ತಮ ಸರ್ಕಾರದ ನಿರ್ಮಾಣದಲ್ಲಿ ಪ್ರಜೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆದ್ದರಿಂದ ಪ್ರತಿಯೊಬ್ಬರು ತಪ್ಪದೇ ತಪ್ಪದೇ ಮತದಾನ ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸುವಲ್ಲಿ ಯಾರು ಹಿಂದೆ ಸರಿಯಬಾರದು. ಮತದಾನ ಎಲ್ಲೆಡೆ ಶೇ 100 ರಷ್ಟಾಗಬೇಕೆಂದು ಚುನಾವಣಾ ಆಯೋಗ ಇಂದು ಅತ್ಯಂತ ಶಿಸ್ತುಬದ್ಧವಾಗಿ ಚುನಾವಣೆ ನಡೆಸುತ್ತಿದೆ.

ಮತದಾರರು ಪ್ರಾಮಾಣಿಕವಾಗಿ ಮತಚಲಾಯಿಸಿ,ಇದು ನಿಮ್ಮ ಹಕ್ಕು ಎಂದು ಮತದಾನ ಜಾಗೃತಿಯನ್ನು ಮೂಡಿಸಿದರು.

ಹಾಗು Cvigil app ಕುರಿತು ಮಾಹಿತಿ ನೀಡಿದರು. ಚುನಾವಣೆ ಕುರಿತು ಯಾವುದೇ ಅಕ್ರಮಗಳ ಕುರಿತು ದೂರು ನೀಡಲು ಸಾಧ್ಯ ಹಣಹಂಚಿಕೆ,ಮತಕ್ಕಾಗಿ ಉಡುಗೊರೆ ಸೇರಿದಂತೆ ಇತರ ನೆರವು ನೀಡುವಿಕೆ ನಿಯಮ ಉಲ್ಲಂಘಿಸಿ ಪ್ರಚಾರ,ಬೆದರಿಕೆ,ನಿಯಮ ಉಲ್ಲಂಘಿಸಿದ ಭಾಷಣ ಸೇರಿದಂತೆ ಯಾವುದೇ ಅಕ್ರಮದ ಚಟುವಟಿಕೆ ಚುನಾವಣೆ ಆಕ್ರಮ ಕುರಿತು CVIGIL App ಮೂಲಕ ದೂರು ಸಲ್ಲಿಸಿದ 100 ನಿಮಿಷಗಳಲ್ಲಿ ಪರಿಶೀಲಿಸಿ ಪ್ರಾಥಮಿಕ ತನಿಖೆ ನಡೆಸಲು ಸ್ಥಳಕ್ಕೆ ಅಧಿಕಾರಿಗಳು ಬರುವವರು CVIGIL app ನ್ನು ಗೂಗಲ್ ಪ್ಲೇಸ್ಟೋರ್ ನಲ್ಲಿ ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದೆಂದು ಗ್ರಾಮಸ್ಥರಿಗೆ ಮತದಾನ ಮಹತ್ವದ ಮಾಹಿತಿಯನ್ನು ನೀಡಿದರು.

ಇದೇ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಸ್ಥಳದಲ್ಲಿ ಸಿಹಿನೀರು ಕಟ್ಟೆ ಗ್ರಾಮಸ್ಥರು ಹಾಗೂ ಪೋಲಿಸ್ ರಂಗಸ್ವಾಮಿ ಹೆಚ್.ಸಿ. ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!