Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

3 ಕ್ಷೇತ್ರಗಳ ಉಪಚುನಾವಣೆಯ ಮತದಾನ ಆರಂಭ : ಕಣದಲ್ಲಿರೋದು ಎಷ್ಟು ಅಭ್ಯರ್ಥಿಗಳು..?

---Advertisement---

ಬಾರೀ ಕುತೂಹಲಕ್ಕೆ ಕಾರಣವಾಗಿದ್ದ ಉಪಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಇಂದು ಬೆಳಗ್ಗೆ 7 ಗಂಟೆಯಿಂದಾನೇ ಮತದಾನ ಶುರುವಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಘಟಾನುಘಟಿ ನಾಯಕರು ಅಖಾಡದಲ್ಲಿದ್ದು, ಈಗ ಅಗ್ನಿಪರೀಕ್ಷೆಗೆ ನಿಂತಿದ್ದಾರೆ. ಸಂಜೆ 6 ಗಂಟೆಯವರೆಗೂ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮತಗಟ್ಟೆಗಳ ಸುತ್ತ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.

ಆಯಾ ಕ್ಷೇತ್ರದ ಮತದಾರರು ಬೆಳಗ್ಗೆಯೇ ಮತಗಟ್ಟೆಯ ಬಳಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಮೂರು ಕ್ಷೇತ್ರದಲ್ಲೂ ಭರ್ಜರಿ ಮತದಾನ ನಡೆಯುತ್ತಿದೆ. ಘಟಾನುಘಟಿ ಅಭ್ಯರ್ಥಿಗಳು ಅಬ್ಬರದ ಪ್ರಚಾರವನ್ನು ನಡೆಸಿದ್ದಾರೆ. ಜನರ ಮನೆ ಮನೆ ಬಾಗಿಲಿಗೆ ಹೋಗಿ ಮತ ನೀಡುವಂತೆ ಮನವಿ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ನೆಕ್ ಟು ನೆಕ್ ಕಾಂಪಿಟೇಷನ್ ಇದೆ.

ಎರಡು ಬಾರಿ ಸೋತಿದ್ದಂತ ನಿಖಿಲ್ ಕುಮಾರಸ್ವಾಮಿ ಇದೀಗ ಚನ್ನಪಟ್ಟಣದಿಂ ಮೂರನೇ ಬಾರಿಗೆ ಅಗ್ನಿಪರೀಕ್ಷೆಗೆ ಇಳಿದಿದ್ದಾರೆ. ಪತಿಯ ಪರವಾಗಿ ರೇವತಿ ಅವರು ಕೂಡ ಪ್ರಚಾರದಲ್ಲಿ ಭಾಗಿಯಾಗಿ, ಈ ಒಂದು ಬಾರಿ ಅವಕಾಶ ಕೊಡಿ ಎಂದು ಮನವಿ ಮಾಡಿದ್ದರು. ಇನ್ನು ಚನ್ನಪಟ್ಟಣದಿಂದಾನೆ ಸಿಪಿ ಯೋಗೀಶ್ವರ್ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಗೆ ಬಂದಿದ್ದಾರೆ. ಇನ್ನು ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಎದುರು ಬಿಜೆಪಿಯಿಂದ ಬಂಗಾರು ಹನುಮಂತು ಅಖಾಡದಲ್ಲಿದ್ದಾರೆ. ಹಾಗೇ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ನಿಂದ ಯಾಸೀರ್ ಪಠಾಣ್ ಸ್ಪರ್ಧೆ ಮಾಡಿದ್ರೆ, ಬಿಜೆಪಿಯಿಂದ ಭರತ್ ಬೊಮ್ಮಾಯಿ ಸ್ಪರ್ಧೆ ಮಾಡಿದ್ದಾರೆ. ಉಳಿದಂತೆ ಮೂರು ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ 45 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment