Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಿರುವುದರಿಂದ ಮರು ಮತದಾನ ನಡೆಸುವಂತೆ ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ವಿದ್ಯುತ್ ಇಲ್ಲದೆ ರಾತ್ರಿ ಕತ್ತಲೆಯಲ್ಲಿ ಕಾಲ ಕಳೆಯುತ್ತಿರುವ ಯರೇಹಳ್ಳಿಯಲ್ಲಿ ರೈತರ ಕೃಷಿಗೆ ವಿದ್ಯುತ್ ತೊಂದರೆಯಾಗಿದೆ. ವಿದ್ಯಾರ್ಥಿಗಳು ರಾತ್ರಿ ವೇಳೆಯಲ್ಲಿ ಓದಲು ಕಷ್ಟಪಡುತ್ತಿದ್ದಾರೆ. ಮೊಬೈಲ್ ನೆಟ್‍ವರ್ಕ್ ಇಲ್ಲದ ಕಾರಣ ತುರ್ತು ಸಂದರ್ಭಗಳಲ್ಲಿ ಅಂಬ್ಯುಲೆನ್ಸ್, ಪೊಲೀಸ್‍ಗೆ ಕರೆ ಮಾಡಲು ಆಗುತ್ತಿಲ್ಲ. ಗುಡ್ಡದ ತುತ್ತ ತುದಿಗೇರಿ ಮೊಬೈಲ್‍ನಲ್ಲಿ ಮಾತನಾಡಬೇಕು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರೂ ಇನ್ನು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಮತದಾನ ಬಹಿಷ್ಕರಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

180 ಕ್ಕೂ ಹೆಚ್ಚು ಮನೆಗಳುಳ್ಳ ಈ ಗ್ರಾಮದಲ್ಲಿ 557 ಮತದಾರರಿದ್ದು, ಕೇವಲ 27 ಜನ ಮಾತ್ರ ಮತದಾನ ಮಾಡಿದ್ದಾರೆ. ಒಂದು ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸದಿದ್ದರೆ ಯರೇಹಳ್ಳಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಲಾಗುವುದೆಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಎಚ್ಚರಿಸಿದರು.

ಕರುನಾಡ ವಿಜಯಸೇನೆಯ ಯುವ ಘಟಕದ ಅಧ್ಯಕ್ಷ ನಾಗರಾಜ್‍ಮುತ್ತು, ಕಾರ್ಯದರ್ಶಿ ಅಣ್ಣಪ್ಪ, ವಿದ್ಯಾರ್ಥಿ ಘಟಕದ ಅಖಿಲೇಶ್, ಸಂಚಾಲಕ ಹರೀಶ್‍ಕುಮಾರ್ ಪಿ.ಆರ್. ರಾಜ್ಯ ಸಮಿತಿಯ ನಿಸಾರ್ ಅಹಮದ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...