ವಕ್ಫ್ ತಿದ್ದುಪಡಿ ಮಸೂದೆ ಜಾರಿ ; ರಾಜ್ಯ ಬಿಜೆಪಿ ವಿರುದ್ಧ ಹರಿಹಾಯ್ದ ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ; ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಿದೆ. ಈ ಸಂಬಂಧ ನರೇಂದ್ರ ಮೋದಿ ಸರ್ಕಾರಕ್ಕೆ ಶ್ರೀರಾಮಸೇನೆಯ ಅಧ್ಯಕ್ಷ ಮುತಾಲಿಕ್ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ ರಾಜ್ಯ ಬಿಜೆಪಿ ನಾಯಕರ ಮೇಲೆ ವಾಗ್ದಾಳಿಯನ್ನು ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಮುತಾಲಿಕ್, ವಕ್ಫ್ ತಿದ್ದುಪಡಿ ಮಸೂದೆಯನ್ನು ಜಾರಿಗೆ ತರುವ ಮೂಲಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಭಿನಂದನೀಯ ಹಾಗೂ ಸ್ವಾಗತಾರ್ಹ ಕೆಲಸ ಮಾಡಿದೆ ಎಂದಿದ್ದಾರೆ.

ದೆಹಲಿಯ ಪಾರ್ಲಿಮೆಂಟ್ ನಲ್ಲಿ ಒಂದು ಐತಿಹಾಸಿಕವಾದ ಬಿಲ್ ಬಗ್ಗೆ ಚರ್ಚೆ ಮಾಡಿ, ಮಂಡನೆ ಮಾಡಿ, ಅಂದಿನ ರಾತ್ರಿಯೇ ಪಾಸ್ ಆಗಿದ್ದು ಖುಷಿಯ ವಿಚಾರ. ವಕ್ಫ್ ಬೋರ್ಡ್ ಹೆಸರಿನಲ್ಲಿ ದಶಕಗಳಿಂದಾನು ಸರ್ಕಾರಿ ಜಾಗ, ರೈತರ ಜಾಗ, ಮಠದ ಜಾಗ, ದೇವಸ್ಥಾನದ ಜಾಗ, ದಲಿತರ ಜಾಗ, ಎಂಪಿ, ಎಂಎಲ್ಎಗಳ ಜಾಗವನ್ನು ಅತಿಕ್ರಮಣ ಮಾಡಿ ಲೂಟಿ ಮಾಡುತ್ತಾ ಇದ್ದರು. ಕಂಡ ಕಂಡವರ ಜಮೀನನ್ನು ಲೂಟಿ ಮಾಡುತ್ತಿದ್ದವರಿಗೆ ಕಡಿವಾಣ ಹಾಕಿದಂತೆ ಆಗಿದೆ. ಲೂಟಿಕೋರರ ಪರವಾಗಿ ನಿಂತುಕೊಂಡವರಿಗೆ ನಾಚಿಕೆಯಾಗಬೇಕು. ಅವರು ದೇಶದ್ರೋಹಿಗಳು. ವಕ್ಫ್ ಬೋರ್ಡಗ ಹೆಸರಿನಲ್ಲಿ ಲೂಟಿ ಮಾಡಿದವರಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಅವರ ಹೆಸರು ಕೂಡ ನಿನ್ನೆ ಸದನದಲ್ಲಿ ಉಲ್ಲೇಖವಾಗಿದೆ.

ವಕ್ಫ್ ವಿರುದ್ಧ ಬಿಲ್ ಪಾಸ್ ಮಾಡಿದ್ದು ಸಂತಸಕರವಾದದ್ದು. ಯಾರು ಇದನ್ನ ವಿರೋಧಿಸುತ್ತಾ ಇದ್ದಾರೆ ಅವರು ದೇಶದ್ರೋಹಿಗಳು. ವೋಟ್ ಬ್ಯಾಂಕಿಂಗ್ ಓಮದೇ ಅಲ್ಲ. ನಿಮ್ಮ ಅಧಿಕಾರ ಒಂದೇ ಅಲ್ಲ. ದೇಶ ಇದೆ, ಧರ್ಮ ಇದೆ, ಜನ ಇದಾರೆ. ಇವತ್ತು ವಕ್ಫ್ ಬೋರ್ಡ್ ಬಗ್ಗೆ ಮಾತನಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು ಎಂದು ಗುಡುಗಿದ್ದಾರೆ.

suddionenews

Recent Posts

ಇಂದು ದ್ವಿತೀಯ ಪಿಯುಸಿ ಫಲಿತಾಂಶ ; ಎಷ್ಟು ಗಂಟೆಗೆ ಸಿಗಲಿದೆ ರಿಸಲ್ಟ್..?

ಬೆಂಗಳೂರು; ಪರೀಕ್ಷೆ ಬರೆದು ಫಲಿತಂಶಕ್ಕಾಗಿ ಕಾಯುತ್ತಿರುವ ದ್ವಿತೀಯ ಪಿಯುಸಿ ಮಕ್ಕಳಿಗೆ ಇಂದು ಢವಢವ ಶುರುವಾಗಿದೆ. ಎಷ್ಟೇ ಚೆನ್ನಾಗಿ ಬರೆದಿದ್ದರು, ನಿರೀಕ್ಷೆ…

3 hours ago

ದಿನಕ್ಕೆ ಎಷ್ಟು ಬಾರಿ ಅನ್ನ ತಿನ್ನಬೇಕು? ಹೆಚ್ಚಾಗಿ ತಿನ್ನುವುದು ಒಳ್ಳೆಯದೇ?

ಸುದ್ದಿಒನ್ : ಸಾಂಪ್ರದಾಯಿಕವಾಗಿ, ಅನ್ನ ನಮ್ಮ ಪ್ರಧಾನ ಆಹಾರ. ಬಹುತೇಕ ಎಲ್ಲಾ ಊಟಗಳಲ್ಲಿ ಅನ್ನವು ಪ್ರಧಾನ ಆಹಾರವಾಗಿದೆ. ದಿನಕ್ಕೆ ಒಂದಕ್ಕಿಂತ…

4 hours ago

ಈ ರಾಶಿಯವರಿಗೆ ವ್ಯಾಪಾರ ವಹಿವಾಟಗಳಲ್ಲಿ ನಷ್ಟವಾಗಲು ಏನು ಕಾರಣ ಇರಬಹುದು?

ಈ ರಾಶಿಯವರಿಗೆ ವ್ಯಾಪಾರ ವಹಿವಾಟಗಳಲ್ಲಿ ನಷ್ಟವಾಗಲು ಏನು ಕಾರಣ ಇರಬಹುದು? ಲಾಭ ಗಳಿಸಲು ಏನು ಮಾಡಬೇಕು. ಮಂಗಳವಾರದ ರಾಶಿ ಭವಿಷ್ಯ…

6 hours ago

ಕೋರ್ಟ್ ನಿರ್ಬಂಧ ಸಡಿಲಿಕೆ ; ಊರಿಗೆ ಬಂದ ಭವಾನಿ ರೇವಣ್ಣರಿಗೆ ಹೂವಿನ ಸ್ವಾಗತ.. ನನಗೆ ಮುಜುಗರವಾಗುತ್ತೆ ಅಂದಿದ್ಯಾಕೆ ದೊಡ್ಡಗೌಡ್ರ ಸೊಸೆ..?

ಭವಾನಿ ರೇವಣ್ಣ ಇಂದು ಹೊಳೆನರಸೀಪುರದ ತಮ್ಮ ಸ್ವಗೃಹಕ್ಕೆ ಬಂದಿದ್ದಾರೆ. ಅವರು ಬರುತ್ತಿದ್ದಂತೆ ಹೂಗಳ ಮಳೆ ಸುರಿಸಿ ಸ್ಚಾಗತಕೋರಿದ್ದಾರೆ. ಅವರ ಅಭಿಮಾನಿಗಳು…

16 hours ago

ರಾಜ್ಯದ ಮುಂದಿನ ಸಿಎಂ ಬಗ್ಗೆ ಕೋಡಿಶ್ರೀ ಭವಿಷ್ಯ ; ಏನಂದ್ರು ಸ್ವಾಮೀಜಿ..?

ಕೋಡಿ ಮಠದ ಸ್ವಾಮೀಜಿಗಳ ಭವಿಷ್ಯದ ಬಗ್ಗೆ ಸಾಕಷ್ಟು ಕುತೂಹಲವಂತೂ ಇದ್ದೇ ಇರುತ್ತದೆ. ರಾಜ್ಯ ಮಳೆ, ಬೆಳೆ, ರಾಜಕಾರಣದ ಬಗ್ಗೆ ಭವಿಷ್ಯ…

16 hours ago

ಹಿರಿಯೂರು : ಏಪ್ರಿಲ್ 8 ರಿಂದ 10 ರವರೆಗೆ ವಿದ್ಯುತ್ ವ್ಯತ್ಯಯ

ಹಿರಿಯೂರು. ಏ.07: ಹಿರಿಯೂರು ಉಪ ವಿಭಾಗದ ವ್ಯಾಪ್ತಿಯ ಹಿರಿಯೂರು ಪಟ್ಟಣದಲ್ಲಿ ಇದೇ ಏಪ್ರಿಲ್ 8 ರಿಂದ 10 ರವರೆಗೆ ವಿದ್ಯುತ್…

17 hours ago