Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಕ್ಫ್ ಬೋರ್ಡ್ ವಿವಾದ : ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕೆಂಡಾಮಂಡಲ..!

---Advertisement---

ಚಿತ್ರದುರ್ಗ : ರಾಜ್ಯದಲ್ಲಿ ಸದ್ಯ ವಕ್ಪ್ ಬೋರ್ಡ್ ವಿವಾದ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ನೋಟೀಸ್ ವಾಪಸ್ ಪಡೆಯಲು ಸೂಚಿಸಿದ್ದಾರೆ. ಈ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕೆಂಡಾಮಂಡಲರಾಗಿದ್ದಾರೆ. ರೈತರ ಜಮೀನು ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೊಂದಲ ಸೃಷ್ಟಿಸಿದರು, ಸಚಿವ ಜಮೀರ್ ಬೆಂಕಿ ಹಚ್ಚಿದ್ರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕಿಡಿಕಾರಿದ್ದಾರೆ.

ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂ ರೈತರ ಜಮೀನುಗಳನ್ನು ಒಂದು ಕಡೆಯಾದರೆ, ಮತ್ತೊಂದು ಕಡೆ ದೇವಸ್ಥಾನಗಳು ಮಠಮಾನ್ಯಗಳ ಜಮೀನು ಕೂಡ ಒಡೆಯುತ್ತಿದ್ದಾರೆ. ಸಿದ್ದರಾಮಯ್ಯ ಮೋಸಳೆ ಕಣ್ಣೀರು ಹಾಕುತ್ತಿದ್ದಾರೆ. ಇವರಿಗೆ ತಾಕತ್ತಿದ್ರೆ ಗೆಜೆಟ್ ನೋಟಿಫಿಕೇಶನ್ ಮೊದಲು ರದ್ದು ಮಾಡಬೇಕು. ಉಪಚುನಾವಣೆ ಬಳಿಕ ನೋಟಿಸ್ ಕೊಟ್ಟು ರೈತರಿಗೆ ಅನ್ಯಾಯ ಮಾಡುತ್ತಾರೆ. ಜಮೀರ್ ಮಾಡುವ ಕೆಲಸ ಏನು, ಗೂಂಡಾ ವರ್ತನೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಸಚಿವ ಜಮೀರ್ ಅವರನ್ನು ಗಡಿಪಾರು ಮಾಡಿದ್ರೆ ರಾಜ್ಯಕ್ಕೆ ಒಳಿತಾಗುತ್ತದೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ. ವಕ್ಫ್ ಬೋರ್ಡ್ ವಿಷಯದಲ್ಲಿ ಗೊಂದಲ ಸೃಷ್ಟಿ ಮಾಡಿದ್ದು ಸಿದ್ದರಾಮಯ್ಯ, ಬೆಂಕಿ ಹಚ್ಚಿದ್ದು ಜಮೀರ್ ಅಹ್ಮದ್ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಭ್ರಷ್ಟಾಚಾರ ರಹಿತ ಆಡಳಿತ ಎಂದು ಬೊಬ್ಬೆ ಹೊಡೆಯುತ್ತಿದ್ದರು. ಆದರೆ ಇದೀಗ ಅವರ ಬಣ್ಣ ಬದಲಾಗಿದ್ದು, ಸಿಎಂ ಕುಟುಂಬ 14 ಮೂಡ ನಿವೇಶನ ದೋಚಿದೆ. ಮುಖ್ಯಮಂತ್ರಿಗಳ ಆಪ್ತ ಹಾಗೂ ಮೂಡ ಕಮಿಷನರ್ ಓಡಿ ಹೋಗಿದ್ದಾರೆ. ರಾಜ್ಯದ ಐದು ಗ್ಯಾರಂಟಿಗಳನ್ನ ಟಿಕಿಸಿರುವ ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ ಕಾರಿದ್ದರು. ಸಿಎಂ ಹೇಳಿಕೆಗೆ ಉತ್ತರಿಸಿರುವ ವಿಜಯೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡುವ ಯೋಗ್ಯತೆ ಸಿದ್ದರಾಮಯ್ಯ ಅವರಿಗೆ ಇಲ್ಲ. ಮೋದಿ ನಾಯಕತ್ವವನ್ನು ವಿಶ್ವ ಒಪ್ಪಿಕೊಂಡಿದೆ. ಅವರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ ಬಾಯಿ ಮುಚ್ಚಿಕೊಂಡು ಇದ್ರೆ ಒಳ್ಳೆಯದು ಎಂದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment