Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಕ್ಫ್ ವಿವಾದ : ಜಮೀರ್‌ ಮೇಲೆ ರೇಣುಕಾಚಾರ್ಯ ಕಿಡಿ..!

---Advertisement---

ದಾವಣಗೆರೆ: ರಾಜ್ಯದೆಲ್ಲೆಡೆ ವಕ್ಫ್ ವಿವಾದ ಜೋರಾಗಿದೆ. ರೈತರ ಜಮೀನು, ದೇವಸ್ಥಾನಗಳ ಪಹಣಿಗಳೆಲ್ಲಾ ವಕ್ಫ್ ಹೆಸರು ಸೇರ್ಪಡೆಯಾಗಿ ವಿವಾದ ಹುಟ್ಟು ಹಾಕಿದೆ. ಈ ಸಂಬಂಧ ಕೋಪಗೊಂಡ ರೇಣುಕಾಚಾರ್ಯ, ಇದೀಗ ಸಚಿವ ಜಮೀರ್ ಅಹ್ಮದ್ ವಿರುದ್ಧ ಕೆಂಡದಂತ ಕೋಪ ಹೊರ ಹಾಕಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿದ್ದು ಸರ್ಕಾರ ರಾಜ್ಯವನ್ನು ಪಾಕಿಸ್ತಾನ ಮಾಡ್ತಿದೆ. ಜಮೀರ್ ಅಹ್ಮದ್ ನಡವಳಿಕೆಯನ್ನು ಪಕ್ಷಾತೀತವಾಗಿ ಖಂಡಿಸಬೇಕಿದೆ. ಮೌನವಾಗಿದ್ದರೆ ಅದು ನಮ್ಮ ದೌರ್ಬಲ್ಯದಂತಾಗುತ್ತದೆ. ಸಿಎಂ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ತಾಳಕ್ಕೆ ಕುಣಿಯುತ್ತಾ ಇದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಅಷ್ಟೇ ನೋಟೀಸ್ ವಾಪಾಸ್ ಪಡೆಯುವುದಕ್ಕೆ ಹೇಳಿದ್ದಾರೆ ವಿನಃ, ಪಹಣಿಯಲ್ಲಿ ಬದಲಾಯಿಸಲು ಹೇಳಿಲ್ಲ. ಇದಿ ಸಿಎಂ ಸಿದ್ದರಾಮಯ್ಯ ಅವರು ಕಣ್ಣೊರೆಸುವ ತಂತ್ರ ಮಾಡುತ್ತಿದ್ದಾರೆ. ನೀವೂ ಹಿಂದೂ ಪರವಾ ಅಥವಾ ಜಮೀರ್ ಸಂತತಿ ಪರವಾ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಇನ್ನು ಇದೆ ವೇಳೆ ನಾಗೇಂದ್ರ ಅವರ ಬಗ್ಗೆ ವಾಗ್ದಾಳಿ ನಡೆಸಿ, ನಾಗೇಂದ್ರನನ್ನು ಮತ್ತೆ ಸಚಿವನಾಗುವುದಕ್ಕೆ ಬಿಜೆಪಿ ಬಿಡುವುದಿಲ್ಲ. ಸಿದ್ದರಾಮಯ್ಯ ಪ್ರಮಾಣ ವಚನದ ವೇಳೆ ನಾಡಿನ ಹಿತ ಕಾಯುವುದಾಗಿ ಹೇಳಿದ್ದೀರಿ. ಆದರೆ ಈಗ ಮಾಡುತ್ತಿರುವುದೇ ಬೇರೆ. ಜಮೀರ್ ತಾಳಕ್ಕೆ ಕುಣಿಯುತ್ತಾ ಇದ್ದಾರೆ. ವಕ್ಫ್ ದೇಶಕ್ಕೆ ಮಾರಕವಾಗಿದೆ. ಕಾಲಿಯಾ ಪದ ಬಳಕೆ ಮಾಡ್ತೀಯ ಜಮೀರ್ ನಾಚಿಕೆ ಆಗಲ್ವಾ. ಇದು ಅವರ ಕುಟುಂಬಕ್ಕೆ ಮಾಡಿದ ಅವಮಾನ ಅಲ್ವಾ. ನೀನು ಗುಜರಿ ಕೆಲಸ ಮಾಡ್ತಾ ಇದ್ದೆ. ಆದರೆ ಆಗ ನಿನ್ನನ್ನು ಶಾಸಕನನ್ನಾಗಿ ಮಾಡಿದ್ದು, ದೇವೇಗೌಡರು ಹಾಗೂ ಕುಮಾರಸ್ವಾಮಿ ಎಂದು ಜಮೀರ್ ಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment