ಬೆಂಗಳೂರು: ಕಳೆದ ಕೆಲವು ದಿನಗಳಿಂದಾನೂ ವಕ್ಫ್ ಮಂಡಳಿ ಹಾಗೂ ರೈತರ ನಡುವೆ ಹೋರಾಟ ನಡೆಯುತ್ತಿದೆ. ಜಿಲ್ಲಾಧಿಕಾರಿಗಳ ಮಾತಿನಂತೆ ರೈತರು ಸದ್ಯ ಹೋರಾಟ ಕೈ ಬಿಟ್ಟಿದ್ದಾರೆ. ಈ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ್ ಅವರು ಮಾತನಾಡಿ, ವಕ್ಫ್ ಆಸ್ತಿ ವಿವಾದ ಸಂಬಂಧ ರೈತರಿಗೆ ಯಾವ ನೋಟೀಸ್ ಕೊಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಅದರಂತೆ ಈಗಾಗಲೇ ನೋಟೀಸ್ ನೀಡಿದ್ದರು ಅದನ್ನು ವಾಪಾಸ್ ತೆಗೆದುಕೊಳ್ಳಲು ತಿಳಿಸಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಸದ್ಯಕ್ಕೆ ಯಾರಿಗೂ ನೋಟೀಸ್ ಕೊಟ್ಟಿಲ್ಲ. ಇಲ್ಲಿಗೆ ಇದು ಮುಗಿದು ಹೋದ ಅಧ್ಯಾಯ. ಮುಂದೆ ಯಾವ ರೀತಿ ಬೆಳವಣಿಗೆಯಾಗುತ್ತೆ ಎಂಬುದು ಗೊತ್ತಿಲ್ಲ. ಕಂದಾಯ ಇಲಾಖೆಯ ದಾಖಲಾತಿಗಳು ಹಾಗೂ ವಕ್ಫ್ ದಾಖಲಾತಿಗಳು ಒಂದೇ ರೀತಿ ಇದ್ದಾಗ ಮಾತ್ರ ಗೊಂದಲವಾಗುವುದಿಲ್ಲ. ಕಂದಾಯ ಇಲಾಖೆಯಲ್ಲಿನ ದಾಖಲಾತಿಗಳೇ ಅಂತಿಮ ಎಂದಿದ್ದಾರೆ.
ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲು ಕೆಲಸ ಮಾಡಲ್ಲ ಎಂದಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ಅವರು ಸಿದ್ದರಾಮಯ್ಯ ಬಗ್ಗೆ ರಾಜಕೀಯ ಪುಡಾರಿ ಎಂಬ ಮಾತು ಬಳಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದಸಚಿವ ಪರಮೇಶ್ವರ್, ಈ ಬಗ್ಗೆ ಅಂದಿರೋದು ಗೊತ್ತಿಲ್ಲ. ಆದರೆ ರಾಜಕೀಯ ಪುಡಾರಿ ಅಂದಿದ್ದು ತಪ್ಪಾ..? ಸರಿನಾ..? ನಂಗೆ ಗೊತ್ತಿಲ್ಲ. ನಮ್ಮನ್ನು ಪುಡಾರಿ ಎನ್ನುತ್ತಾರೆ. ಪುಡಾರಿ ಶಬ್ಧ ಬಳಸಿದ್ದು ಸರಿನಾ ಎಂದು ಗೃಹ ಸಚಿವ ಜಿ ಪರಮೇಶ್ವರ್ ಪ್ರಶ್ನೆ ಮಾಡಿದ್ದಾರೆ. ಪ್ರಧಾನಿ ಮೋದಿ ಅವರಿ ಪುಡಾರಿ ಪದ ಬಳಸಿದ್ದಾರೆ ಎಂಬುದಕ್ಕೆ ವಿರೋಧ ವ್ಯಕ್ತವಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















