Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಾಜಿ ಜೋಡೆತ್ತುಗಳ ನಡುವೆ ಮಾತಿನ ಯುದ್ಧ : ಡಿಕೆಶಿ-ಹೆಚ್ಡಿಕೆ ನಡುವೆ ಏನಿದು ಜಿದ್ದು..?

---Advertisement---

 

 

ಮೈಸೂರು: ಈ ಹಿಂದೆ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದಾಗ ಡಿಕೆ ಶಿವಕುಮಾರ್ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಜೋಡೆತ್ತುಗಳೆಂದೇ ಕರೆಯುತ್ತಿದ್ದರು. ಆದರೆ ಈಗ ಲೋಕಸಭಾ ಚುನಾವಣೆಯಿಂದ ಜೆಡಿಎಸ್, ಬಿಜೆಪಿ ಜೊತೆಗೆ ಕೈಜೋಡಿಸಿದೆ. ಅದು ಬೇರೆ ಮೋದಿ ಸಂಪುಟದಲ್ಲಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ಕೊಡುವ ತನಕ ಬಿಡಲ್ಲ ಎಂದು ಮೈಸೂರು ಚಲೋ ನಡೆಸಿದ್ದಾರೆ. ಇದರ ನಡುವೆ ಮೈಸೂರಿನಲ್ಲಿ ಕುಮಾರಸ್ವಾಮಿ ಡಿಕೆಶಿ ವಿರುದ್ಧ ಮಾತನಾಡಿದರೆ ಇತ್ತ ರಾಮನಗರದಲ್ಲಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

‘ನನ್ನ ಅಣ್ಣನ ಮಗನನ್ನು ನಾನು ಜೈಲಿಗೆ ಕಳುಹಿಸಿದ್ದೀರಿ ಅಂದಿದ್ದೀರಿ ಶಿವಕುಮಾರ್. ಮಿಸ್ಟರ್ ಶಿವಕುಮಾರ್ ನಾನು ಚಾಮುಂಡೇಶ್ವರಿ‌ ಸನ್ನಿಧಾನದಲ್ಲಿ ನಿಂತು ಮಾತನಾಡುತ್ತಿದ್ದೀನಿ. ಕಾಫಿ ಡೇ ಸಿದ್ಧಾರ್ಥ್ ಸಾವಿಗೆ ಕಾರಣ ಯಾರು ಅಂತ ಹೇಳುತ್ತೀರಾ..? ಜೇಡ್ರಳ್ಳಿ ಅಂತ ಬೆಂಗಳೂರಲ್ಲಿ ಇದೆ. ವಾಸು ಅಂತ ಇವರ ಸ್ನೇಹಿತರು, ಮ್ಯಾನ್ ಹೋಲ್ ಚೇಂಬರ್ ಗಳನ್ನು ಕದ್ದು ಮಾರಾಟ ಮಾಡ್ತಿದ್ದ ಶಿವಕುಮಾರ್ ಎಂದು ಹೆಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ಮಾತಿಗೆ ಎದುರೇಟು ನೀಡಿರುವ ಡಿಕೆ ಶಿವಕುಮಾರ್, ಯಾವ ಬಡವನ ಆಸ್ತಿ ಕಬಳಿಸಿದ್ದೀನಿ ಅಂತ ಕರ್ಕೊಂಡು ಬಂದು ನಿಲ್ಲಿಸಿ ಬಿಟ್ಟರೆ ಸಾಕು. ಬಡವರಿಗೆ ತೊಂದರೆ ಕೊಟ್ಟಿರೋದು ನನ್ನ ಜಾಯಮಾನದಲ್ಲಿಯೇ ಇಲ್ಲ. ಪಾಪ ಮೆಂಟಲ್ ಆಗಿದ್ದಾನೆ ಅಂತ ಅನ್ನಿಸುತ್ತೆ. ಕುಮಾರಸ್ವಾಮಿಯನ್ನು ಹುಚ್ಚಾಸ್ಪತ್ರೆಗೆ ಸೇರಿಸೋಣಾ. ನನ್ನ ಎಸ್.ಎಂ.ಕೃಷ್ಣ ಸಂಬಂಧ ಏನು ಅಂತ ಅವರಿಗೇನು ಗೊತ್ತಿದೆ. ಹಿತೈಶಿಗಳಿಗೋ, ಕಾರ್ಯಕರ್ತರಿಗೋ ಅವರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸೋಣಾ ಎಂದು ಹೇಳೋಣಾ ಎಂದು ಸಿದ್ದಾರ್ಥ್ ಅವರ ಸಾವಿನ ಬಗ್ಗೆ ಕುಮಾರಸ್ಯೆತ್ತಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...