ತಿರುಪತಿ: ತಿರುಮಲದಲ್ಲಿ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜುಲೈ 1ರಿಂದ ವಿತರಿಸಲು ಉದ್ದೇಶಿಸಿದ್ದ ಎಸ್ಎಸ್ಡಿ (ಸರ್ವ ದರ್ಶನ) ಟೋಕನ್ಗಳ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಪ್ರಕಟಿಸಿದೆ.
ಈಗಾಗಲೇ ಲಕ್ಷಾಂತರ ಭಕ್ತರು ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಸರದಿಯಲ್ಲಿ ಕಾಯುತ್ತಿರುವ ಕಾರಣ, ಹೊಸದಾಗಿ ಟೋಕನ್ಗಳನ್ನು ವಿತರಿಸಿದರೆ ದಟ್ಟಣೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಕ್ತರ ಸುರಕ್ಷತೆ, ಅನುಕೂಲ ಹಾಗೂ ಸುಗಮ ದರ್ಶನವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಟಿಟಿಡಿ ತಿಳಿಸಿದೆ.
ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದ್ದು, ದಟ್ಟಣೆ ಕಡಿಮೆಯಾದ ಬಳಿಕ ಎಸ್ಎಸ್ಡಿ ಟೋಕನ್ ವಿತರಣೆಯನ್ನು ಪುನರಾರಂಭಿಸುವ ಕುರಿತು ಅಧಿಕೃತವಾಗಿ ಮಾಹಿತಿ ನೀಡಲಾಗುವುದು ಎಂದು ದೇವಸ್ಥಾನ ಆಡಳಿತ ಸ್ಪಷ್ಟಪಡಿಸಿದೆ.ಇದರ ಜೊತೆಗೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದೃಢೀಕರಿಸದ ಮಾಹಿತಿ ಹಾಗೂ ವದಂತಿಗಳನ್ನು ನಂಬಬಾರದು ಎಂದು ಟಿಟಿಡಿ ಭಕ್ತರಿಗೆ ಮನವಿ ಮಾಡಿದೆ. ದರ್ಶನ, ಟೋಕನ್ ಹಾಗೂ ಇತರ ಸೇವೆಗಳ ಕುರಿತು ಮಾಹಿತಿಗಾಗಿ ಕೇವಲ ಟಿಟಿಡಿಯ ಅಧಿಕೃತ ಪ್ರಕಟಣೆಗಳನ್ನೇ ಅವಲಂಬಿಸುವಂತೆ ಸೂಚಿಸಲಾಗಿದೆ.
ಪ್ರಸ್ತುತ ತಿರುಮಲದಲ್ಲಿ ಉಂಟಾಗಿರುವ ಭಾರೀ ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು, ತುರ್ತು ಅಗತ್ಯವಿಲ್ಲದಿದ್ದರೆ ಭಕ್ತರು ತಮ್ಮ ಪ್ರಯಾಣವನ್ನು ಕೆಲ ದಿನಗಳ ಕಾಲ ಮುಂದೂಡಬೇಕು ಎಂದು ಟಿಟಿಡಿ ಮನವಿ ಮಾಡಿದ್ದು, ಮುಂದಿನ ಅಧಿಕೃತ ಪ್ರಕಟಣೆ ಬರುವವರೆಗೆ ಕಾಯುವಂತೆ ಸಲಹೆ ನೀಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







