ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ಫ್ರೀಯಾಗಿ ಬಸ್ ಸೇವೆಯನ್ನು ನೀಡಿದೆ. ಆದ್ರೆ ಪುರುಷರಿಗೆ ಯಾವಿದೇ ರೀತಿಯ ಉಚಿತ ಸೇವೆ ನೀಡಿಲ್ಲ. ಇದರ ನಡುವೆ ಬಸ್ ಟಿಕೆಟ್ ದರವನ್ನು ಹೆಚ್ಚಿಸುವುದಕ್ಕೆ ಸರ್ಕಾರ ಅನುಮತಿ ನೀಡಿದೆ. ಶೇಕಡ 15 ರಷ್ಟು ಹೆಚ್ಚಳ ಮಾಡಲಾಗುತ್ತಿದೆ. ಈ ಸಂಬಂಧ ಇದೀಗ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ನಾಯಕರ ಪ್ರತಿಭಟನೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ.
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಅಭಿವೃದ್ಧಿಯನ್ನು ಮರೆತಿದ್ರು. ಬಿಜೆಪಿ ಅಧಿಕಾರದಲ್ಲಿದ್ದಾಗ ಅವರು ಕೂಡ ಬಸ್ ದರ ಹೆಚ್ಚಳ ಮಾಡಿದ್ರು. ಆಗ ಜನರಿಗೆ ತೊಂದರೆಯಾಗುತ್ತೆ ಅಂತ ಅವರಿಗೆ ಗೊತ್ತಿರಲಿಲ್ವಾ. ನಮ್ಮ ಮೇಲೆ 5,900 ಕೋಟಿ ಸಾಲ ಇಟ್ಟು ಹೋಗಿದ್ದಾರೆ. ಬಿಜೆಪಿ ಸರ್ಅಕರ ನಾವೂ ಬಂದಾಗ ಅಷ್ಟು ಕೋಟಿ ಸಾಲವನ್ನ ಇಟ್ಟೋಗಿತ್ತು.
9 ವರ್ಷಗಳಿಂದ ಪೆಟ್ರೋಲ್ – ಡಿಸೇಲ್ ದರ ಇಳಿಸಿಯೇ ಇಲ್ಲ. ಗ್ಯಾಸ್ ಸಬ್ಸಿಡಿ ನಿಲ್ಲಿಸಿದಾಗ ಜನರ ಕಷ್ಟ ಗೊತ್ತಾಗ್ಲಿಲ್ವ ಆಗ. ನಾವೀಗ ದರ ಏರಿಕೆ ಮಾಡಿರೋದು ಮಾತ್ರವಲ್ಲ ಈ ಹಿಂದೆ ಬಿಜೆಪಿ ಕೂಡ ದರ ಏರಿಕೆ ಮಾಡಿತ್ತು. ಆಗ ಜನರ ಬಗ್ಗೆ ಕಾಳಜಿ ಇರಲಿಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ. ಸಾರಿಗೆ ಇಲಾಖೆಯಿಂದ ಈ ಮೊದಲೇ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಸಾರುಗೆ ದರ ಏರಿಕೆಯ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿತ್ತು. ಸರ್ಕಾರ ಕೂಡ ಆ ಬಗ್ಗೆ ಒಪ್ಪಿಗೆ ಕೊಟ್ಟ ಮೇಲೆ ಈಗ ಶೇಕಡ 15 ರಷ್ಟು ದರವನ್ನು ಹೆಚ್ಚಳ ಮಾಡಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್