Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾನಿಯಾ ಮಿರ್ಜಾಗೆ ಮೊದಲೇ ಡಿವೋರ್ಸ್ ಆಗಿತ್ತಾ..? ಇಮ್ರಾನ್ ಮಿರ್ಜಾ ಹೇಳಿದ್ದೇನು..?

Facebook
Twitter
Telegram
WhatsApp

ಸಾನಿಯಾ ಮಿರ್ಜಾ ಬದುಕಲ್ಲಿ ಬೆಂಕಿ ಬಿರುಗಾಳಿ ಎದ್ದಿದೆ. ಇದ್ದಕ್ಕಿದ್ದ ಹಾಗೇ ಸಾನಿಯಾ ಮಿರ್ಜಾ ಪತಿ, ಪಾಕಿಸ್ತಾನದ ಮಾಜಿ ಕ್ರಿಕೆಟರ್ ಶೋಯಬ್ ಮಲ್ಲಿಕ್, ಮತ್ತೊಂದು ಮದುವೆಯಾಗಿದ್ದಾರೆ. ಇದು ಸಾನಿಯಾ ಮಿರ್ಜಾ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ಇದೀಗ ಈ ವಿಚಾರವಾಗಿ ಸಾನಿಯಾ ಮಿರ್ಜಾ ತಂದೆ ಇಮ್ರಾನ್ ಮಿರ್ಜಾ, ಪ್ರತಿಕ್ರಿಯೆ ನೀಡಿದ್ದಾರೆ.

‘ನನ್ನ ಮಗಳು ಶೋಯಬ್ ಗೆ ಖುಲಾ ನೀಡಿದ್ದಾಳೆ. (ಖುಲಾ ಎಂದರೆ ಹೆಣ್ಣು ಮಕ್ಕಳು ತನ್ನ ಪತಿಯಿಂದ ಬಿಡುಗಡೆ ಕೇಳುವ ಸ್ವಾತಂತ್ರ್ಯ). ಇದು ಸಮ್ಮತಿಯ ವಿಚ್ಛೇದನವಾಗಿದೆ. ಈ ಮೂಲಕ ಮದುವೆಯ ಬಂಧದಿಂದ ತನ್ನನ್ನು ಬಿಡುಗಡೆ ಮಾಡುವಂತೆ ಪತಿಗೆ ಮಹಿಳೆ ತಿಳಿಸುವ ಕ್ರಮ ಎಂದಿದ್ದಾರೆ. ಸಾನಿಯಾ ಈ ಮೊದಲೇ ಪತಿಯಿಂದ ದೂರವಾಗಿದ್ದರು ಎಂಬುದನ್ನು ಅವರ ತಂದೆ ಸ್ಪಷ್ಟ ಪಡಿಸಿದ್ದಾರೆ.

ಪಾಕ್ ಮಾಜಿ ಕ್ರಿಕೆಟಿಕ ಶೋಯಬ್ ಮಲಿಕ್, ಸಾನಿಯಾ ಮಿರ್ಜಾ ಅವರನ್ನು ಎರಡನೇ ಮದುವೆಯಾಗಿದ್ದರು. ಸುಮಾರು 12 ವರ್ಷಗಳ ದಾಂಪತ್ಯ ಜೀವನ. ಈ ದಂಪತಿಗೆ ಒಬ್ಬ ಮಗ ಕೂಡ ಇದ್ದಾನೆ. ಆದರೆ ಶೋಯಬ್ ಜೊತೆಗೆ ಸಾನಿಯಾ ವಿಚ್ಛೇದನ ಪಡೆದಿದ್ದಾರೆ. ವಿಚ್ಛೇದನದ ಬಳಿಕ ಶೋಯಬ್, ಪಾಕ್ ನಟಿಯನ್ನು ಮದುವೆಯಾಗಿದ್ದಾರೆ. ಸನಾ ಜಾವೇದ್ ಜೊತೆಗೆ ಮತ್ತೊಂದು ಹೊಸ ಜೀವನ ಪ್ರಾರಂಭಿಸಿದ್ದಾರೆ.

ಸಾನಿಯಾ ಮಿರ್ಜಾ ಹಾಗೂ ಶೋಯೆಬ್ ಮಲಿಕ್ ನಡುವೆ ಬಿರುಕು ಮೂಡುವುದಕ್ಕೆ ಇದೇ ಸನಾ ಕಾರಣ ಎಂದು ಹೇಳಲಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಶೋಯೆಬ್ ಹಾಗೂ ಸನಾ ಡೇಟಿಂಗ್ ಮಾಡುತ್ತಿದ್ದರಂತೆ. ಈ ವಿಚಾರ ತಿಳಿದ ಬಳಿಕ ಸಾನಿಯಾ ಹಾಗೂ ಶೋಯಬ್ ನಡುವೆ ಜಗಳ ನಡೆಯುತ್ತಲೆ ಇತ್ತಂತೆ. ಅದಕ್ಕೆ ಅಂತ್ಯವೆಂಬಂತೆ ಇಬ್ಬರು ಡಿವೋರ್ಸ್ ಪಡೆದುಕೊಂಡಿದ್ದಾರೆ. ಈಗ ಶೋಯಬ್ ಮೂರನೇ ಮದುವೆಯಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!