Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ ಇಂದು ಸಿಎಂ ಮನೆ ಮುಂದೆ ವಾಟಾಳ್ ಪ್ರತಿಭಟನೆ..!

---Advertisement---

 

ಬೆಂಗಳೂರು: ನಿನ್ನೆಯೆಲ್ಲಾ ಕಾವೇರಿ ನೀರಿಗಾಗಿ ಬೆಂಗಳೂರು ಬಂದ್ ಮಾಡಿ, ಹೋರಾಟ ನಡೆಸಿದ್ದಾರೆ. ಆದರೂ ಕಾವೇರಿ ನೀರು ಪ್ರಾಧಿಕಾರದಿಂದ ಮತ್ತೆ ನೀರು ಬಿಡಬೇಕೆಂದು ಆದೇಶವಾಗಿದೆ. ಇದನ್ನು ಖಂಡಿಸಿ ಇಂದು ವಾಟಾಳ್ ನಾಗರಾಜ್ ಪ್ರತಿಭಟನೆ ಸಿದ್ಧರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸದ ಮುಂದೆ ಪ್ರತಿಭಟಿಸಲಿದ್ದಾರೆ.

ಮುಂದಿನ 18 ದಿನಗಳವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಬಿಡುವುದಕ್ಕೆ ಆದೇಶ ನೀಡಿದೆ. ಇದನ್ನು ಖಂಡಿಸಿ, ಶುಕ್ರವಾರ ಕರ್ನಾಟಕ ಬಂದ್ ನಡೆಸಲಿದ್ದಾರೆ. ಕರ್ನಾಟಕ ಸರ್ಕಾರ ಯಾವುದೇ ಒತ್ತಡಕ್ಕೂ ಮಣಿಯಬಾರದು, ನೀರನ್ನು ಬಿಡಬಾರದು ಎಂದೇ ವಾಟಾಳ್ ನಾಗರಾಜು ಒತ್ತಾಯಿಸಲಿದ್ದಾರೆ.

ಕಾವೇರಿ ಕೊಳ್ಳದಲ್ಲಿ ಈಗ ಜೋರು ಮಳೆ ಬಂದರೆ ಅಷ್ಟೇ ಕರ್ನಾಟಕಕ್ಕೆ‌ ಸಮಸ್ಯೆ ಆಗುವುದಿಲ್ಲ. ಆದರೆ ಈಗ ಒಂದೇ ಸಮನೆ ನೀರು ಬಿಡುತ್ತಿದ್ದೃ, ಮುಂದಿನ ದಿನಗಳಲ್ಲಿ ಕೃಷಿಗೆ ಇರಲಿ, ಕುಡಿಯುವುದಕ್ಕೂ ನೀರು ಇರುವುದಿಲ್ಲ ಎಂಬ ಆತಂಕ ನಮ್ಮ ರೈತರದ್ದು. ರಾಜ್ಯ ಸರ್ಕಾರ ಕೂಡ ಇಲ್ಲಿನ ಸಮಸ್ಯೆಯನ್ನು ಕಾವೇರಿ ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡಲು ಸಾಕಷ್ಟು ಸಲ ಪ್ರಯತ್ನ ಪಟ್ಟಿದೆ. ಆದರೂ ತಮಿಳುನಾಡಿನ ಪರವೇ ತೀರ್ಪು ಬರುತ್ತಿರುವುದು, ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...