Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಟಕಗಳನ್ನು ವೀಕ್ಷಿಸಿ, ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸಿ : ಪ್ರಕಾಶ್ ಹೆಳವರ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಆ.01): ಯೂಟೂಬ್, ಮೊಬೈಲ್, ಸಿನಿಮಾ, ಟಿ.ವಿ.ಧಾರವಾಹಿಗಳ ಅಬ್ಬರದ ನಡುವೆ ನಾಟಕಗಳನ್ನು ನೋಡುವವರ ಸಂಖ್ಯೆ ತುಂಬಾ ಕಡಿಮೆ. ಹಾಗಾಗಿ ರಂಗ ಕಲಾವಿದರ ಬದುಕು ಕಷ್ಟದಲ್ಲಿದೆ ಎಂದು ಬೆಂಗಳೂರು ಜಿಲ್ಲಾ ನ್ಯಾಯಾಧೀಶರಾದ ಪ್ರಕಾಶ್ ಹೆಳವರ್ ವಿಷಾಧಿಸಿದರು.

ಬಹುಮುಖಿ ಕಲಾ ಕೇಂದ್ರ, ಕಾರಂಜಿ ಕಲ್ಚರಲ್ ಟ್ರಸ್ಟ್ ಮದಕರಿಪುರ, ಥಿಯೇಟರ್ ಫೋರ್ಟ್ ಚಿತ್ರದುರ್ಗ ಸಹಯೋಗದೊಂದಿಗೆ ತ.ರಾ.ಸು.ರಂಗಮಂದಿರದಲ್ಲಿ ಸೋಮವಾರ ರಂಗ ಪಯಣ ತಂಡದ ಬೆಂಗಳೂರಿನ ಶ್ರವಣಪ್ರಭ ಏಕ ವ್ಯಕ್ತಿ ಪ್ರದರ್ಶನ 55 ನಿಮಿಷದ ನಾಟಕದೊಳ್ ಕರ್ನಾಟಕ ನಾಟಕವನ್ನು ತಬಲ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಕಲೆ, ಕಲಾವಿದರು ಉಳಿಯಬೇಕಾಗಿರುವುದರಿಂದ ಪ್ರತಿಯೊಬ್ಬರು ನಾಟಕವನ್ನು ವೀಕ್ಷಿಸಿ ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.

ಹಿರಿಯ ರಂಗ ನಟ ಮಲ್ಲಪ್ಪನಹಳ್ಳಿ ಮಹಲಿಂಗಯ್ಯ ಮಾತನಾಡಿ ರಾಜ್ಯದ 31 ಜಿಲ್ಲೆಗಳಲ್ಲಿ 31 ಕಲಾವಿದರು ಏಕಕಾಲಕ್ಕೆ ನಾಟಕ ಪ್ರದರ್ಶನಗೊಳಿಸುತ್ತಿರುವುದು ಸುಲಭವಲ್ಲ. 55 ನಿಮಿಷಗಳ ಈ ನಾಟಕದಲ್ಲಿ ಏಕವ್ಯಕ್ತಿ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವುದು ಒಂದು ಸಾಧನೆ ಎಂದು ಗುಣಗಾನ ಮಾಡಿದರು.

ಸಾಮಾಜಿಕ ಹೋರಾಟಗಾರ ಆರ್.ಶೇಷಣ್ಣಕುಮಾರ್ ಮಾತನಾಡುತ್ತ ರಂಗಭೂಮಿ ರಂಗಕಲಾವಿದರಿಗೆ ಪ್ರೋತ್ಸಾಹವಿಲ್ಲದಂತಾಗಿದೆ. ರಂಗಭೂಮಿ ಉಳಿಯಬೇಕಾದರೆ ಎಲ್ಲರೂ ಇಂತಹ ನಾಟಕಗಳನ್ನು ತಪ್ಪದೆ ವೀಕ್ಷಿಸಬೇಕೆಂದು ವಿನಂತಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್ ಮಾತನಾಡಿ ಅಂಗೈಯಲ್ಲೇ ಮನೋರಂಜನೆ ಸಿಗುತ್ತಿರುವುದರಿಂದ ನಾಟಕ ವೀಕ್ಷಣೆಗೆ ಬರುವವರು ತುಂಬಾ ವಿರಳ. ಮೊಬೈಲ್, ಟಿ.ವಿ. ಸಾಮಾಜಿಕ ಜಾಲತಾಣಗಳ ಹಾವಳಿ ನಡುವೆ ರಂಗಭೂಮಿ ಇನ್ನು ಜೀವಂತವಾಗಿದೆ. ಸರ್ಕಾರದಿಂದ ಧನ ಸಹಾಯವಿದೆ. ರಂಗಕಲಾವಿದರು ಪ್ರಯೋಜನ ಪಡೆದುಕೊಳ್ಳುವಂತೆ ಕೋರಿದರು.

ಹಿರಿಯ ರಂಗ ನಟ ಹಾಗೂ ರಚನಾ ಕಲಾ ಸಂಘದ ಅಧ್ಯಕ್ಷ ಎಂ.ಸಿ.ಮಂಜುನಾಥ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಪ್ರೇಕ್ಷಕರು ರಂಗ ಕಲಾವಿದರನ್ನು ಪ್ರೋತ್ಸಾಹಿಸಿ ಬೆಳೆಸಬೇಕಿದೆ. ಆಗ ಮಾತ್ರ  ರಂಗಭೂಮಿ ಉಳಿಯಲು ಸಾಧ್ಯ ಎಂದು ಹೇಳಿದರು.

ಲೇಖಕ ಹೆಚ್.ಆನಂದ್‍ಕುಮಾರ್ ಮಾತನಾಡಿ ರಂಗಭೂಮಿ ಎಲ್ಲಾ ಕಲೆಗಳಿಗೂ ತಾಯಿ ಬೇರು ಇದ್ದಂತೆ. ಕನ್ನಡ ಚಿತ್ರರಂಗದಲ್ಲಿ ಕೋಟ್ಯಾಂತರ ಅಭಿಮಾನಿಗಳ ಮನದಲ್ಲಿ ಹಚ್ಚಳಿಯದೆ ಉಳಿದಿರುವ ಡಾ.ರಾಜ್‍ಕುಮಾರ್ ರಂಗಭೂಮಿಯಿಂದಲೆ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದರು.

ಅಂತಹ ಶಕ್ತಿ ರಂಗಭೂಮಿಯಲ್ಲಿದೆ ಎಂದರು.
ಎಸ್.ಆರ್.ಎಸ್.ಕಾಲೇಜು ಕನ್ನಡ ಉಪನ್ಯಾಸಕ ಆರ್.ಗುರುರಾಜ್, ಬಹುಮುಖಿ ಕಲಾ ಕೇಂದ್ರದ ಕಾರ್ಯದರ್ಶಿ ಟಿ.ಮಧು, ರಂಗಕರ್ಮಿ ಹನುಮಂತಪ್ಪ ಪೂಜಾರ್ ವೇದಿಕೆಯಲ್ಲಿದ್ದರು. ಹನುಮಂತ, ಚನ್ನಬಸಪ್ಪ, ಓ.ಮೂರ್ತಿ ಇವರುಗಳು ರಂಗಗೀತೆ ಹಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!