Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಟಕಗಳನ್ನು ವೀಕ್ಷಿಸಿ ರಂಗಭೂಮಿ ಕಲಾವಿದರನ್ನು ಉಳಿಸಿ, ಬೆಳೆಸಿ : ಕೆ.ಎಂ.ವೀರೇಶ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 03 : ನಾಟಕಗಳನ್ನು ವೀಕ್ಷಿಸುವವರ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ರಂಗಕಲಾವಿದರ ಬದುಕು ಕಷ್ಟದಲ್ಲಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್ ವಿಷಾಧಿಸಿದರು.

ಪದ್ಮಭೂಷಣ ಪಂಡಿತ ಡಾ. ಪುಟ್ಟರಾಜ ಕವಿ ಗವಾಯಿಗಳವರ ಹದಿನಾಲ್ಕನೆ ಪುಣ್ಯಸ್ಮರಣೋತ್ಸವ ಅಂಗವಾಗಿ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಕಂದಗಲ್ಲು ಹನುಮಂತರಾಯ ಕಲಾ ಸಂಘ ಸೂಲದ ಹಳ್ಳಿ ಇವರ ನೇತೃತ್ವದಲ್ಲಿ ಚಳ್ಳಕೆರೆಯ ರಂಗಭಾರತಿ ಸಾಂಸ್ಕøತಿಕ ಕಲಾ ಸಂಘದಿಂದ ತ.ರಾ.ಸು.ರಂಗಮಂದಿರದಲ್ಲಿ ಇತ್ತೀಚೆಗೆ ಪ್ರದರ್ಶನಗೊಂಡ ಕುರುಕ್ಷೇತ್ರ ನಾಟಕದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಟಿ.ವಿ. ಮೊಬೈಲ್, ವಾಟ್ಸ್‍ಪ್, ಫೇಸ್‍ಬುಕ್‍ಗಳ ಹಾವಳಿಯಿಂದ ರಂಗಭೂಮಿ ನಶಿಸುತ್ತಿದೆ. ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ನಾಟಕಗಳನ್ನು ವೀಕ್ಷಿಸುವ ಮೂಲಕ ರಂಗಭೂಮಿ ಕಲಾವಿದರನ್ನು ಉಳಿಸಿ ಬೆಳೆಸಬೇಕಿದೆ ಎಂದು ಮನವಿ ಮಾಡಿದರು.

ಮುರುಘರಾಜೇಂದ್ರ ಮಠದ ಬಸವಕುಮಾರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ನ್ಯಾಯವಾದಿ ಸಿ.ಶಿವುಯಾದವ್, ಜಾನಪದ ಹಾಡುಗಾರ ಹರೀಶ್, ಜಂಬುನಾಥ್, ಹಾರ್ಮೋನಿಯಂ ಮಾಸ್ತರ್ ಕೆ.ತಿಪ್ಪೇಸ್ವಾಮಿ ಇನ್ನು ಅನೇಕರು ವೇದಿಕೆಯಲ್ಲಿದ್ದರು.

ಶ್ರೀಕೃಷ್ಣನ ಪಾತ್ರದಲ್ಲಿ ಟಿ.ತಿಪ್ಪೇಸ್ವಾಮಿ, ಧರ್ಮರಾಯನ ಪಾತ್ರದಲ್ಲಿ ಜಿ.ತಿಮ್ಮಾರೆಡ್ಡಿ, ಭೀಮನಾಗಿ ಎಂ.ಜಿ.ಬೋರಯ್ಯ, ದುರ್ಯೋಧನ ಹೆಚ್.ಗಂಗಾಧರಪ್ಪ, ಶಕುನಿ ಪಾತ್ರದಲ್ಲಿ ಟಿ.ಚನ್ನಕೇಶವ, ಅರ್ಜುನನಾಗಿ ವಿ.ಶಿವನಪ್ಪ, ಕರ್ಣನಾಗಿ ಬಿ.ಗೋವಿಂದರಾಜು, ದುಶ್ಯಾಸನ ಎಸ್.ಪಿ.ಸುಧೀರ್, ಅಭಿಮನ್ಯು ಪಿ.ರಾಜಣ್ಣ, ಅಶ್ವಥಾಮನಾಗಿ
ಪಿ.ರಾಜಣ್ಣ, ಸಾಲುಮನೆ ಬೊಮ್ಮಯ್ಯ ವಿಧುರ, ವಿ.ಯಶವಂತಪ್ಪ ದ್ರೋಣ, ರುದ್ರಮುನಿ ಭೀಷ್ಮ, ದೃತರಾಷ್ಟ್ರನಾಗಿ ಹನುಮಂತಪ್ಪ, ಲೋಕೇಶ್ ಶಿಖಂಡಿ, ಶ್ರೀಮತಿ ಲಕ್ಷ್ಮಿ ಶ್ರೀಧರ್ ದ್ರೌಪದಿ, ಕುಂತಿ, ಗಾಂಧಾರಿ, ಮಂಜುಶ್ರಿ ರುಕ್ಮಿಣಿ/ಉತ್ತರೆ ಪಾತ್ರದಲ್ಲಿ ಅಮೋಘವಾಗಿ ಅಭಿನಯಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

ದರ್ಶನ್ ಜಾಮೀನಿಗಾಗಿ ವಕೀಲರು ಮಂಡಿಸಿದ ವಾದವೇನು..? ಇಲ್ಲಿದೆ ಪಾಯಿಂಟ್ ಪಾಯಿಂಟ್ ಹೈಲೇಟ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿ ಬಹಳ ದಿನಗಳೇ ಕಳೆದಿವೆ. ಆದರೆ ಚಾರ್ಜ್ ಶೀಟ್ ಸಂಪೂರ್ಣವಾಗಿ ಸ್ಟಡಿ ಮಾಡುವ ಕಾರಣಕ್ಕೆ ಆಗಾಗ ದರ್ಶನ್

ದರ್ಶನ್ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ..!

ಬೆಂಗಳೂರು: ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿನ್ನೆಯಷ್ಟೇ ಬಳ್ಳಾರಿ ಜೈಲಿಗೆ ಭೇಟಿ ನೀಡಿ, ಧೈರ್ಯ ತುಂಬಿ ಹೋಗಿದ್ದರು. ಇಂದು ಜಾಮೀನು ಸಿಗುವ ಭರವಸೆಯನ್ನು ವ್ಯಕ್ತಪಡಿಸಿದ್ದರು. ಆದರೆ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್

error: Content is protected !!