Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

WATCH : ಕೆನಡಾದ ಸರೋವರದಲ್ಲಿ ಗಣೇಶ ವಿಸರ್ಜನೆ ಮಾಡಿದ ಭಾರತೀಯ ಮಕ್ಕಳ ವಿಡಿಯೋ ವೈರಲ್

---Advertisement---

ಟೊರೊಂಟೊ: ಭಾರತೀಯ ಮೂಲದ ಮಕ್ಕಳು ಕೆನಡಾದ ಅತ್ಯಂತ ಸ್ವಚ್ಛ ಹಾಗೂ ಸುಂದರವಾದ ಸರೋವರವೊಂದರಲ್ಲಿ ಗಣೇಶನ ಮೂರ್ತಿಯನ್ನು ವಿಸರ್ಜನೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ವಿಡಿಯೋ ಸದ್ಯ ಇಂಟರ್ನೆಟ್‌ನಲ್ಲಿ ಸಾಂಸ್ಕೃತಿಕ ಆಚರಣೆ ಮತ್ತು ಪರಿಸರ ಕಾಳಜಿಯ ನಡುವಿನ ದೊಡ್ಡದೊಂದು ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

ಇನ್‌ ಸ್ಟಾಗ್ರಾಮ್‌ ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ, ಪುಟಾಣಿ ಮಕ್ಕಳು ಅತ್ಯಂತ ಭಕ್ತಿ ಮತ್ತು ಸಡಗರದಿಂದ ಗಣೇಶನ ಮೂರ್ತಿಯನ್ನು ಹೊತ್ತು ತಂದು, ಅಲ್ಲಿನ ನಿಶ್ಚಲವಾದ ಸರೋವರದ ನೀರಿನಲ್ಲಿ ವಿಸರ್ಜಿಸುತ್ತಿರುವುದನ್ನು ಕಾಣಬಹುದು. ಈ ಪೋಸ್ಟ್‌ ಗೆ ಚಿಕ್ಕ ಕೈಗಳು, ದೊಡ್ಡ ನಂಬಿಕೆ. ನಮ್ಮ ಮಕ್ಕಳು ಬಪ್ಪನನ್ನು ಪ್ರೀತಿ ಮತ್ತು ಸಂತೋಷದಿಂದ ನೀರಿನ ಬಳಿಗೆ ಕೊಂಡೊಯ್ದರು. ತಾಯ್ನಾಡಿನಿಂದ ದೂರವಿದ್ದರೂ ಸಂಪ್ರದಾಯ ಮುಂದುವರಿದಿದೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.ಈ ವಿಡಿಯೋ ಪ್ರಕಟವಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳ ಬಳಕೆದಾರರು ಎರಡು ಬಣಗಳಾಗಿ ವಿಭಜನೆಗೊಂಡಿದ್ದಾರೆ.

ವಿದೇಶದಲ್ಲೂ ನಮ್ಮ ಸಂಪ್ರದಾಯವನ್ನು ಉಳಿಸುವ ಪ್ರಯತ್ನವನ್ನು ಕೆಲವರು ಶ್ಲಾಘಿಸಿದರೆ, ಬಹುತೇಕರು ಪರಿಸರದ ಮೇಲಾಗುವ ಪರಿಣಾಮಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಧರ್ಮ ಯಾವುದೇ ಇರಲಿ, ಪ್ರಕೃತಿಯನ್ನು ಮಲಿನಗೊಳಿಸುವುದು ತಪ್ಪು ಎಂದು ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿದ್ದಾರೆ. ಕಟ್ಟುನಿಟ್ಟಾದ ಪರಿಸರ ನಿಯಮಗಳು ಮತ್ತು ಸಂರಕ್ಷಿತ ನೈಸರ್ಗಿಕ ಸಂಪನ್ಮೂಲಗಳನ್ನು ಹೊಂದಿರುವ ದೇಶಗಳಲ್ಲಿ ಇಂತಹ ಆಚರಣೆಗಳನ್ನು ಬದಲಾಯಿಸಿಕೊಳ್ಳಬೇಕಲ್ಲವೇ? ಎಂದು ಹಲವರು ಪ್ರಶ್ನಿಸಿದ್ದಾರೆ.

ಇನ್ನೊಂದೆಡೆ, ಈ ಕುಟುಂಬದ ಪರವಾಗಿ ಬ್ಯಾಟ್ ಬೀಸಿರುವ ಬೆಂಬಲಿಗರು, ಇದು ಹಿಂದೂ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಅಲ್ಲದೆ,ಇತ್ತೀಚಿನ ದಿನಗಳಲ್ಲಿ ಗಣೇಶನ ಮೂರ್ತಿಗಳನ್ನು ಪರಿಸರಸ್ನೇಹಿ (ಮಣ್ಣಿನ) ವಸ್ತುಗಳಿಂದ ತಯಾರಿಸಲಾಗುತ್ತಿದ್ದು, ಇವು ನೀರಿನಲ್ಲಿ ಸುಲಭವಾಗಿ ಕರಗುತ್ತವೆ ಮತ್ತು ಪರಿಸರಕ್ಕೆ ಯಾವುದೇ ಹಾನಿ ಮಾಡುವುದಿಲ್ಲ” ಎಂದು ವಾದಿಸಿದ್ದಾರೆ.

ಈ ವಿಡಿಯೋ ಕೇವಲ ಒಂದು ಘಟನೆಗೆ ಸೀಮಿತವಾಗದೆ, ವಲಸಿಗ ಸಮುದಾಯಗಳು ತಮ್ಮ ಸಂಸ್ಕೃತಿಯನ್ನು ಕಾಪಾಡಿಕೊಳ್ಳುವಾಗ, ತಾವು ವಾಸಿಸುವ ದೇಶದ ಕಾನೂನುಗಳು, ಸಂಪ್ರದಾಯಗಳು ಮತ್ತು ಪರಿಸರ ನಿಯಮಗಳಿಗೆ ಹೇಗೆ ಹೊಂದಿಕೊಳ್ಳಬೇಕು ಎಂಬ ವಿಶಾಲವಾದ ಚರ್ಚೆಗೆ ನಾಂದಿ ಹಾಡಿದೆ.

ಸಾಮಾನ್ಯವಾಗಿ ಗಣೇಶ ಚತುರ್ಥಿಯ ನಂತರ ಮೂರ್ತಿಯನ್ನು ವಿಸರ್ಜಿಸುವುದು ಭಗವಾನ್ ಗಣೇಶನು ಮರಳಿ ಕೈಲಾಸಕ್ಕೆ ಪ್ರಯಾಣ ಬೆಳೆಸುವುದನ್ನು ಸೂಚಿಸುತ್ತದೆ. ಆದರೆ, ಜಾಗತಿಕವಾಗಿ ಹೆಚ್ಚುತ್ತಿರುವ ಪರಿಸರ ಮಾಲಿನ್ಯದ ಕಾರಣದಿಂದಾಗಿ, ಇತ್ತೀಚಿನ ವರ್ಷಗಳಲ್ಲಿ ಕೃತಕ ಹೊಂಡಗಳಲ್ಲಿ ಅಥವಾ ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸಿ ಸಾಂಕೇತಿಕವಾಗಿ ವಿಸರ್ಜಿಸುವ ಪದ್ಧತಿ ಹೆಚ್ಚಾಗುತ್ತಿದೆ. ಸದ್ಯ ಈ ವೈರಲ್ ವಿಡಿಯೋ ಮಾತ್ರ ಇಂಟರ್ನೆಟ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now