Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಯಕನಹಟ್ಟಿ ಚಿಕ್ಕಕೆರೆಗೆ ಹರಿದು ಬರುತ್ತಿರುವ ನೀರು : ರೈತರ ಮೊಗದಲ್ಲಿ ಸಂತಸ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ ಆ.22 : ಕಳೆದ ಕೆಲವು ದಿನಗಳಿಂದ ಬೆಂಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ, ಕಟ್ಟೆಗಳು, ಜಲಾಶಯಗಳು ತುಂಬುತ್ತಿವೆ. ಇದೇ ನಾಡಿನ ಜನತೆಗೆ ಹರ್ಷ ತರುವಂತೆ ಮಾಡಿದೆ. ಅದರಲ್ಲೂ ಐತಿಹಾಸಿಕ ಕೆರೆಗಳು ತುಂಬಿವೆ. ನಾಯಕನಹಟ್ಟಿ ಪಟ್ಟಣದಲ್ಲಿ ಚಿಕ್ಕಕೆರೆ ಇದೆ. ಅದನ್ನು ಮಧ್ಯ ಕರ್ನಾಟಕದ ಐತಿಹಾಸಿಕ ಪವಾಡ ಪುರುಷ ಮಾಡಿದಷ್ಟು ಬಿಕ್ಷೆ ನೀಡಿ ಎಂಬ ವಚನ ನುಡಿದಿರುವ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಗಳು ನಿರ್ಮಿಸಿದ್ದರು. ಇದೀಗ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಚಿಕ್ಕಕೆರೆಗೆ ನೀರು ಬಂದಿದೆ. ಕೆರೆಗೆ ನೀರು ಬಂದು ರೈತರ ಮೊಗದಲ್ಲಿ ಮಂದಹಾಸವನ್ನು ಮೂಡಿಸಿದೆ.

ಹಲವು ವರ್ಷಗಳಿಂದ ಈ ಕೆರೆ ನೀರಿಲ್ಲದೆ ಬರಿದಾಗಿತ್ತು. ಕೆರೆಯ ಮೂಲ ಹಳ್ಳಗಳಲ್ಲಿ ಗೋಕಟ್ಟೆಗಳ ನಿರ್ಮಾಣದಿಂದಾಗಿ ಕೆರೆಗೆ ನೀರು ಬರುವ ಸಾಧ್ಯತೆ ಕಡಿಮೆ ಇತ್ತು. ಆದರೆ ಸುರಿದ ಮಳೆಯಿಂದಾಗಿ ಎಲ್ಲಾ ಗೋಕಟ್ಟುಗಳು ತುಂಬಿ, ಕೆರೆಗೆ ನೀರು ಬಂದಿದ್ದು ಅಕ್ಕ ಪಕ್ಕದ ರೈತರ ಜಮೀನುಗಳಲ್ಲಿ ನೀರಿನ ಕೊರತೆ ಉಂಟಾಗದಂತೆ ಈ ಕೆರೆ ನೋಡಿಕೊಳ್ಳುತ್ತದೆ. ಆದ್ದರಿಂದ ರೈತರು ಮೊಗದಲ್ಲಿ ಸಂತೋಷ ಉಂಟಾಗಿದೆ. ಚಿಕ್ಕಕೆರೆ ತುಂಬಿದರೆ ಸುತ್ತಮುತ್ತ ಹಳ್ಳಿನ ಜನರಿಗೆ ಅಂತರ್ಜಲ ವೃದ್ಧಿಯಾಗುತ್ತದೆ
ಸುಮಾರು ಹತ್ತು ವರ್ಷಗಳಿಂದ ಚಿಕ್ಕಕೆರೆಯಲ್ಲಿ ನೀರು ಇಲ್ಲದೆ ಸೊರಗುತ್ತಿತ್ತು.

ಆದರೆ ಮಳೆರಾಯ ಕೊನೆಗೂ ನಮ್ಮನ್ನು ಕೈ ಬಿಡಲಿಲ್ಲ.
ಕೊನೆಗೂ ವರುಣ ದೇವನಿಗೆ ರೈತರು ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ನಾಯಕನಹಟ್ಟಿ ಪಟ್ಟಣದ ಧಾರ್ಮಿಕ ಕೇಂದ್ರ 15 ಸಾವಿರ ಹೆಚ್ಚು ಜನಸಂಖ್ಯೆ ಹೊಂದಿದೆ. ಇಲ್ಲಿನ ಜನಗಳಿಗೆ ಚಿಕ್ಕಕೆರೆ ಜೀವನಾಡಿ, ಹಸುಗಳಿಗೆ ನೀರಿನ ಮೂಲ ಇದಾಗಿದೆ. ಅಂತರ್ಜಲಕ್ಕೆ ಪ್ರಮುಖ ಆಸರೆಯಾಗಿದೆ. ಶ್ರೀ ಗುರು ತಿಪ್ಪೇರುದ್ರಸ್ವಾಮಿ ಸುಮಾರು 300 ವರ್ಷಗಳ ಹಿಂದೆ ಈ ಕೆರೆಯನ್ನು ನಿರ್ಮಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!