Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೀರು ಜೀವಜಲ, ಅಮೂಲ್ಯವಾಗಿ ಬಳಸಿ : ಉಮೇಶ ಕಾರಜೋಳ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ. ಮೇ. 04 : ಬಿ.ಜೆ.ಪಿ ಎಸ್.ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಅವರ ನೇತೃತ್ವದಲ್ಲಿ ಚಿತ್ರದುರ್ಗ ನಗರದ ಗಾಂಧಿ ವೃತ್ತದಲ್ಲಿ ಕುಡಿಯುವ ನೀರಿನ ಅರವಟಿಗೆಗಳನ್ನು ಸ್ಥಾಪಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಉಮೇಶ ಕಾರಜೋಳ, ಬಿಸಿಲಿನ ತೀವ್ರತೆ ಅಧಿಕವಾಗಿದೆ, ಬಿಸಿಲಿನ ತಾಪತ್ರಯ ನಲಗುವಂತೆ ಮಾಡಿದೆ, ಹೀಗಾಗಿ ಗಿಡಮರಗಳನ್ನು ನೆಟ್ಟು ಉಷ್ಣಾಂಶ ಕಡಿಮೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ, ಪರಿಸರ ರಕ್ಷಣೆ, ಗಿಡಮರಗಳ ಪೋಷಣೆಯಿಂದ ಮಾತ್ರ ಉಷ್ಣತೆ ನಿಯಂತ್ರಿಸಬಹುದಾಗಿದೆ ಎಂದರು.

ಜನರ ಅನುಕೂಲಕ್ಕಾಗಿ ಪರಿಸರ ಸ್ನೇಹಿ, ಆರೋಗ್ಯಕ್ಕೆ ಹಿತಕಾರಿಯಾದ ಮಣ್ಣಿನ ಮಡಿಕೆಗಳಲ್ಲಿ ಪ್ರತಿ ನಿತ್ಯ ನೀರನ್ನು ತುಂಬಲಾಗುತ್ತಿದೆ, ಜಲ ಬರಿ ಜಲವಲ್ಲ ಅದು ಜೀವಜಲ, ಹೀಗಾಗಿ ಹನಿ ನೀರನ್ನು ಅಮೂಲ್ಯವಾಗಿ ಬಳಸೋಣ ಎಂದರು.

ಈ ಪ್ರಾರಂಭದಲ್ಲಿ ಎರಡು ಕಡೆ ಈ ರೀತಿ ಅರವಟಿಗೆ ಆರಂಭಿಸಲಾಗಿದೆ, ನೀರಿನ ಲಭ್ಯತೆ ಆಧರಿಸಿ, ಜನರಿಗೆ ಅನುಕೂಲವಾಗುವ ಸ್ಥಳಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಹ ಈ ಅರವಟಿಗೆ ಆರಂಭಿಸುವ ಯೋಜನೆ ಇದೆ, ಪಶು ಪಕ್ಷಿಗಳಿಗೂ ಸಹ ವಿಶೇಷ ಅರವಟಿಗೆ ನಿರ್ಮಾಣಕ್ಕೆ ಅಗತ್ಯ ಯೋಜನೆ ರೂಪಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಬದ್ರಿನಾಧ್, ಅರುಣ,  ಬಿಜೆಪಿ ವಕ್ತಾರ ನಾಗರಾಜ ಬೇದ್ರೆ, ಆದರ್ಶ ಹಾಗೂ ಅನೇಕರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...