Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೀರು ಜೀವಜಲ, ಅಮೂಲ್ಯವಾಗಿ ಬಳಸಿ : ಉಮೇಶ ಕಾರಜೋಳ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ. ಮೇ. 04 : ಬಿ.ಜೆ.ಪಿ ಎಸ್.ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಅವರ ನೇತೃತ್ವದಲ್ಲಿ ಚಿತ್ರದುರ್ಗ ನಗರದ ಗಾಂಧಿ ವೃತ್ತದಲ್ಲಿ ಕುಡಿಯುವ ನೀರಿನ ಅರವಟಿಗೆಗಳನ್ನು ಸ್ಥಾಪಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಉಮೇಶ ಕಾರಜೋಳ, ಬಿಸಿಲಿನ ತೀವ್ರತೆ ಅಧಿಕವಾಗಿದೆ, ಬಿಸಿಲಿನ ತಾಪತ್ರಯ ನಲಗುವಂತೆ ಮಾಡಿದೆ, ಹೀಗಾಗಿ ಗಿಡಮರಗಳನ್ನು ನೆಟ್ಟು ಉಷ್ಣಾಂಶ ಕಡಿಮೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ, ಪರಿಸರ ರಕ್ಷಣೆ, ಗಿಡಮರಗಳ ಪೋಷಣೆಯಿಂದ ಮಾತ್ರ ಉಷ್ಣತೆ ನಿಯಂತ್ರಿಸಬಹುದಾಗಿದೆ ಎಂದರು.

ಜನರ ಅನುಕೂಲಕ್ಕಾಗಿ ಪರಿಸರ ಸ್ನೇಹಿ, ಆರೋಗ್ಯಕ್ಕೆ ಹಿತಕಾರಿಯಾದ ಮಣ್ಣಿನ ಮಡಿಕೆಗಳಲ್ಲಿ ಪ್ರತಿ ನಿತ್ಯ ನೀರನ್ನು ತುಂಬಲಾಗುತ್ತಿದೆ, ಜಲ ಬರಿ ಜಲವಲ್ಲ ಅದು ಜೀವಜಲ, ಹೀಗಾಗಿ ಹನಿ ನೀರನ್ನು ಅಮೂಲ್ಯವಾಗಿ ಬಳಸೋಣ ಎಂದರು.

ಈ ಪ್ರಾರಂಭದಲ್ಲಿ ಎರಡು ಕಡೆ ಈ ರೀತಿ ಅರವಟಿಗೆ ಆರಂಭಿಸಲಾಗಿದೆ, ನೀರಿನ ಲಭ್ಯತೆ ಆಧರಿಸಿ, ಜನರಿಗೆ ಅನುಕೂಲವಾಗುವ ಸ್ಥಳಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಹ ಈ ಅರವಟಿಗೆ ಆರಂಭಿಸುವ ಯೋಜನೆ ಇದೆ, ಪಶು ಪಕ್ಷಿಗಳಿಗೂ ಸಹ ವಿಶೇಷ ಅರವಟಿಗೆ ನಿರ್ಮಾಣಕ್ಕೆ ಅಗತ್ಯ ಯೋಜನೆ ರೂಪಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಬದ್ರಿನಾಧ್, ಅರುಣ,  ಬಿಜೆಪಿ ವಕ್ತಾರ ನಾಗರಾಜ ಬೇದ್ರೆ, ಆದರ್ಶ ಹಾಗೂ ಅನೇಕರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!