Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯಲ್ಲಿ ಶುರುವಾಯ್ತು ನೀರಿನ ಅಭಾವ : 19 ಗ್ರಾಮಗಳಿಗೆ ಬರದ ಛಾಯೆ..!

---Advertisement---

ಈ ಬಾರಿ ಜನ ಸಾಮಾನ್ಯರೆಲ್ಲಾ ಬೇಸಿಗೆ ಮುನ್ನವೇ ತತ್ತರಿಸಿ ಹೋಗುತ್ತಿದ್ದಾರೆ. ಅದಕ್ಕೆಲ್ಲಾ ಕಾರಣ ಈ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿದ್ದು. ಬರದಿಂದ ಈಗಾಗಲೇ ರೈತರು ತತ್ತರಿಸಿ ಹೋಗಿದ್ದಾರೆ. ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ದಾವಣಗೆರೆಯಲ್ಲಿ ಜನ ಬೇಸಿಗೆಯಿಂದ ಬೆವರುತ್ತಿದ್ದಾರೆ. ಅಂತರ್ಜಲ ಮಟ್ಟ ಕುಸಿದಿದ್ದು, ಕೊಳವೆ ಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.

 

ದಾವಣಗೆರೆಯ ನೀರಿನ ಸಮಸ್ಯೆ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ಡಾ.ಎಂ ವಿ ವೆಂಕಟೇಶ್ ಅವರು, ತೀವ್ರ ಬಿಸಿಲು ಇರುವುದರಿಂದ ಮುಂದೆ ಸಮಸ್ಯೆಯಾಗಲಿರುವ 126 ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದ್ದು, ಇಲ್ಲಿ ಖಾಸಗಿ ಕೊಳವೆ ಗುರುತಿಸಿಟ್ಟುಕೊಳ್ಳಲಾಗಿದೆ. ಅವುಗಳು ಲಭ್ಯವಾಗದಿದ್ದಲ್ಲಿ ಸಮಸ್ಯೆಯಾದ 24 ಗಂಟೆಯೊಳಗೆ ಟ್ಯಾಂಕರ್ ಗಳ ಮೂಲಕ ನೀರು ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಗಸ್ಟ್ ತಿಂಗಳಲ್ಲಿ ಶೇಕಡ 90% ಮಳೆ‌ ಕೊರತೆ ಎದುರಿಸಲಾಗಿದೆ.ಇದರಿಂದ ಅಂತರ್ಜಲ ಮಟ್ಟ ಗಣನೀಯವಾಗಿ ಇಳಿಕೆಯಾಗಿದ್ದು, ಕೊಳವೆ ಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದಿದ್ದಾರೆ.

 

ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಪೂರೈಕೆಯಾಗುತ್ತಿರುವ ಗ್ರಾಮಗಳಿಗೆ ನೀರಿನ ಸಮಸ್ಯೆ ಇರುವುದಿಲ್ಲ. ಭದ್ರಾ ಜಲಾಶಯದ ಮೂಲಕ ತುಂಗಾ ಭದ್ರಾ ನದಿಗೆ ಹಾಗೂ ಕಾಲುವೆಗಳಿಗೆ ನೀರು ಪೂರೈಕೆಯಾಗಲಿದೆ. ಶಾಂತಿ ಸಾಗರದಿಂದ ಹಲವು ಗ್ರಾಮಗಳಿಗೆ ನೀರು ಪೂರೈಕೆಯಾಗುತ್ತಿದೆ. ಕಾಲುವೆ ಮೂಲಕ ಶಾಂತಿಸಾಗರಕ್ಕೆ ಬಿಡಿಸಲಾಗಿದೆ. ಕಾಲುವೆಯ ಕೊನೆ ಭಾಗದ ರೈತರಿಗೆ ನೀರು ತಲುಪಿಸುವ ಉದ್ದೇಶದಿಂದ ನಾಲೆಗೆ ಅಕ್ರಮವಾಗಿ ಅಳವಡಿಸಲಾಗಿದ್ದ ಪಂಪ್ ಸೆಟ್‌ಗಳ ತೆರವಿಗೂ ತಂಡ ರಚಿಸಲಾಗಿದೆ. ಸಮಸ್ಯೆಗಳು ಎದುರಾದರೆ ಅಲ್ಲಿ 144 ಸೆಕ್ಷನ್ ಜಾರಿಗೊಳಿಸಲು ತಹಶಿಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ‌ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...