Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂತ್ರ ಸಮಸ್ಯೆ ಇರುವವರಿಗೆ ಕಲ್ಲಂಗಡಿ ಬೀಜ ಉತ್ತಮ ಔಷಧ..!

---Advertisement---

 

ಮೂತ್ರ ವಿಸರ್ಜನೆ ಒಂದು ನೈಸರ್ಗಿಕ ಕ್ರಿಯೆ. ಮೂತ್ರ ಮಾಡಿದಾಗ ದೇಹದಲ್ಲಿನ ಕಲ್ಮಶ, ವಿಷಕಾರಿ ಅಂಶಗಳಿದ್ದರೆ ಅವುಗಳು ಹೊರಗೆ ಆ ಮೂಲಕ ಹೋಗುತ್ತವೆ. ಮೂತ್ರದಿಂದಾನೇ ನಮ್ಮ ದೇಹದ ಹಲವು ಆರೋಗ್ಯದ ಸಮಸ್ಯೆಗಳನ್ನು ತಿಳಿದುಕೊಳ್ಳಬಹುದು. ಮೂತ್ರವೇನಾದರೂ ಬೇರೆ ಬಣ್ಣದಲ್ಲಿ ಹೋಗುತ್ತಿದ್ದರೆ ದೇಹದಲ್ಲೇನೋ ವ್ಯತ್ಯಾಸವಾಗಿದೆ ಎಂದೇ ಅರ್ಥ. ಆರೋಗ್ಯದ ಕಡೆಗೆ ಗಮನ ಕೊಡಬೇಕು ಎಂದೇ ಅಲ್ಲಿಗೆ ಅರ್ಥ ಮಾಡಿಕೊಳ್ಳಬೇಕಾಗುತ್ತದೆ.

ದೇಹಕ್ಕೆ ನೀರು ಬಹಳ ಮುಖ್ಯ. ಹೆಚ್ಚು ನೀರು ಕುಡಿದರೆ ಹಲವು ಬಾರಿ ಮೂತ್ರ ವಿಸರ್ಜನೆಯನ್ನು ಮಾಡುತ್ತಾರೆ. ಆದರೆ ಅದೆಷ್ಟೋ ಜನ ನೀರು ಕುಡಿಯುವುದೇ ಬಹಳ ಕಡಿಮೆ. ಆಗ ದೇಹವೂ ನಿರ್ಜಲೀಕರಣಕ್ಕೆ ತಿರುಗುತ್ತದೆ. ಮೂತ್ರವೂ ಹಳದಿ ಬಣ್ಣಕ್ಕೆ ತಿರುಗುತ್ತದೆ. ಆದ ಕಾರಣ ಆದಷ್ಟು ಹೆಚ್ಚು ನೀರನ್ನು ಕುಡಿಯುವುದು ಉತ್ತಮ. ಇನ್ನು ಮೂತ್ರ ಮಾಡುವಾಗ ಹಲವರಲ್ಲಿ ನೋವು ಕಾಣಿಸಿಕೊಳ್ಳುತ್ತದೆ ಇದನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬೇಡಿ. ಮೂತ್ರಕೋಶದ ಅಕ್ಕಪಕ್ಕದ ಅಂಗಾಂಗಗಳಿಗೆ ಏನೋ ತೊಂದರೆಯಾಗಿರುವ ಕಾರಣಕ್ಕೇನೆ ಆ ರೀತಿಯ ನೋವು ಬರುವುದಕ್ಕೆ ಕಾರಣವಾಗುತ್ತದೆ.

ಮೂತ್ರಕೋಶದ ಹಲವು ನೋವುಗಳಿಗೆ ಕಲ್ಲಂಗಡಿ ಹಣ್ಣಿನ ಬೀಜ ಬೆಸ್ಟ್ ಮದ್ದು. ನಾವೆಲ್ಲಾ ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣನ್ನು ತಿಂದು ಅದರ ಬೀಜವನ್ನು ಬಿಸಾಡುತ್ತೇವೆ. ಆದರೆ ಅದರಿಂದಾಗುವ ಉಪಯೋಗ ತಿಳಿದುಕೊಂಡರೆ ಖಂಡಿತ ನೀವೂ ಬಿಸಾಡುವುದಿಲ್ಲ. ಹಾಗಾದ್ರೆ ಅದು ಎಷ್ಟು ಉಪಯೋಗ..? ಹೇಗೆ ಬಳಕೆ ಮಾಡಬೇಕೆಂಬ ಮಾಹಿತಿ ಇಲ್ಲಿದೆ.

ಮೂತ್ರದ ಜಾಗದಲ್ಲಿ ಕಲ್ಲು ಇದ್ದಲ್ಲಿ, ಉರಿ‌ಮೂತ್ರ, ನೋವು ಇದ್ದವರು ಕಲ್ಲಂಗಡಿ ಹಣ್ಣಿನ ಬೀಜ ಬಳಸವಹುದು. ಕಲ್ಲಂಗಡಿ ಹಣ್ಣಿನಲ್ಲಿ ನೀರಿನಂಶ ಸಾಕಷ್ಟು ಪ್ರಮಾಣದಲ್ಲಿ ಇದೆ. ಹೀಗಾಗಿ ಅದರ ಬೀಜವನ್ನು ಮೇಲಿನ ಸಿಪ್ಪೆ ಬಿಡಿಸಿ, ಒಣಗಿಸಿ ಸೇವಿಸಬಹುದು. ಇದರಿಂದ ಮೂತ್ರದ ಸಮಸ್ಯೆಗೆ ಪರಿಹಾರ ಸಿಗುತ್ತದೆ.

(ಪ್ರಮುಖ ಸೂಚನೆ: ಆರೋಗ್ಯ ತಜ್ಞರು ಮತ್ತು ಇತರ ಅಧ್ಯಯನಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ನಾವು ಈ ವಿವರಗಳನ್ನು ಒದಗಿಸುತ್ತಿದ್ದೇವೆ. ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ನಿಮಗೆ ಯಾವುದೇ ಅನುಮಾನಗಳು ಅಥವಾ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment