Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾವುಗಳು ನೆಮ್ಮದಿಯಾಗಿ ಇರಲು ಪೋಲೀಸರು ಕಾರಣ : ಶ್ರೀಮತಿ ಮನಗೂಳಿ ಪ್ರೇಮಾವತಿ

Facebook
Twitter
Telegram
WhatsApp

ಚಿತ್ರದುರ್ಗ, (ಆ. 21) : ನಮ್ಮಗಳ ನೆಮ್ಮದಿಗೆ ಪೋಲಿಸರು ಕಾರಣರಾಗಿದ್ದಾರೆ, ಅವರ ಸ್ಮರಣೆಯನ್ನು ಸದಾ ಮಾಡಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಮನಗೂಳಿ ಪ್ರೇಮಾವತಿ ತಿಳಿಸಿದರು.

ನಗರದ ಜಿಲ್ಲಾ ಪೋಲಿಸ್ ಇಲಾಖೆವತಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪೋಲಿಸ್ ಹುತಾತ್ಮರ ದಿನಾಚರಣೆಯಲ್ಲಿ ಭಾಗವವಹಿಸಿ ಮಾತನಾಡಿದರು.

ಇದೊಂದು ಭಾವನಾತ್ಮಾಕವಾದ ಕಾರ್ಯಕ್ರಮವಾಗಿದೆ. ನಾವುಗಳು ನೆಮ್ಮದಿಯಾಗಿ ಇರಲು ಪೋಲೀಸರು ಕಾರಣರಾಗಿದ್ದಾರೆ ಎಂಬುದನ್ನು ಮರೆಯಬಾರದು, ಅವರು ತ್ಯಾಗ ಮತ್ತು ಬಲಿದಾನವನ್ನು ಸ್ಮರಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯವಾಗಿದೆ. ಇವರ ಸೇವೆಯನ್ನು ಎಷ್ಟು ಸ್ಮರಣೆ ಮಾಡಿದರು ಸಾಲದು, ಬಿಸಿಲು, ಮಳೆ, ಛಳಿ ಎನ್ನದೆ ನಮ್ಮನ್ನು ದೇಶದ ಒಳಗಡೆ ಪೋಲಿಸರು ಕಾಯುತ್ತಿದ್ದರೆ, ದೇಶದ ಗಡಿ ಪ್ರದೇಶದಲ್ಲಿ ಯೋಧರು ಸಹಾ ದೇಶವನ್ನು ಕಾಯುವುದರ ಮೂಲಕ ಹೂರಗಿನ ಶತೃಗಳಿಂದ ನಮ್ಮನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಪೋಲಿಸರು ಮತ್ತು ಯೋಧರ ಕರ್ತವ್ಯವನ್ನು ಸ್ಮರಣೆ ನ್ಯಾಯಾಧೀಶರು ಸ್ಮರಣೆ ಮಾಡಿದರು.

ಜಿಲ್ಲಾ ರಕ್ಷಣಾಧಿಕಾರಿ ಶ್ರೀಮತಿ ಜಿ.ರಾಧಿಕಾರವರು ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ ಕರ್ತವ್ಯ ಸಮಯದಲ್ಲಿ ಸಾವನ್ನಪ್ಪಿದ ದೇಶದ 377 ಹಾಗೂ ಕರ್ನಾಟಕದ 16 ಜನ ಪೋಲಿಸ್ ಸಿಬ್ಬಂದಿ ಮತ್ತು ಯೋಧರ ಹೆಸರನ್ನು ವಾಚಿಸಿದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ತಮ್ಮ ಎಡ ತೋಳಿಗೆ ಕಪ್ಪು ಪಟ್ಟಿಯನ್ನು ಕಟ್ಟುವುದರ ಮೂಲಕ ಮೃತರಿಗೆ ಗೌರವವನ್ನು ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಪೋಲಿಸ್ ಸಿಬ್ಬಂದಿ, ನಿವೃತ್ತ ಸಿಬ್ಬಂಧಿ, ನಾಗರೀಕರು, ಭಾಗವಹಿಸಿ ಮೃತರ ಯೋಧರಿಗೆ ಗೌರವವನ್ನು ಸಲ್ಲಿಸಿದರು. ಪೋಲಿಸ್ ತರಬೇತಿ ಶಾಲೆಯ ಪ್ರಾಂಶುಪಾಲರಾದ ಪಾಪಣ್ಣ, ಹೆಚ್ಚುವರಿ ರಕ್ಷಣಾಧಿಕಾರಿ ಮಹಾಲಿಂಗ ನಂದಗಾವಿ ಭಾಗವಹಿಸಿದ್ದರು. ಶಿವರಾಂ ಕಾರ್ಯಕ್ರಮ ನಿರೂಪಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ಜಾಮೀನು ಸಿಕ್ಕರೂ ರೇವಣ್ಣ ನಾಳೆ ಜೈಲಿಂದ ರಿಲೀಸ್..!

    ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಕೇಸಿನಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಸೇರಿದ್ದರು. ಇಂದು ಕಡೆಗೂ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕಿದರು ಮನೆಗೆ

ಸಿ.ಬಿ.ಎಸ್.ಇ 10ನೇ ತರಗತಿ ಫಲಿತಾಂಶ : ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ ಶೇಕಡ 100 ರಷ್ಟು ಫಲಿತಾಂಶ…!

ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಾಲೆ ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದೆ.

ರೇವಣ್ಣಗೆ ಸಿಕ್ತು ಷರತ್ತು ಬದ್ಧ ಜಾಮೀನು..!

    ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ಮಹಿಳೆಯಿಬ್ಬರನ್ನು ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ರೇವಣ್ಣ ಅರೆಸ್ಟ್ ಆಗಿದ್ದು, ಇಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಕೋರ್ಟ್ ನಲ್ಲಿ ರೇವಣ್ಣ

error: Content is protected !!