ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಿರುವುದು ಹಲವರಿಗೆ ಅಸಮಾಧಾನ ತಂದಿದೆ. ಅದರಲ್ಲೂ ವಿ ಸೋಮಣ್ಣ ಕೂಡ ಅಸಮಾಧಾನಗೊಂಡು, ಕಾಂಗ್ರೆಸ್ ಗೆ ಸೇರಲಿದ್ದಾರೆ ಎಂಬ ಮಾತುಗಳು ಚರ್ಚೆಯಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಆಡಿರುವ ಮಾತುಗಳು ಆಶ್ಚರ್ಯವನ್ನುಂಟು ಮಾಡಿವೆ. ವಿ ಸೋಮಣ್ಣ ಹಾಗೂ ಬಸವರಾಜ್ ಬೊಮ್ಮಾಯಿ ಅವರ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಬಿಜೆಪಿ ನಾಯಕ ವಿ ಸೋಮಣ್ಣ ಅವರಿಗೆ ನನ್ನ ಮೇಲೆ ಪ್ರೀತಿ ಇದೆ. ಸೋಮಣ್ಣ ಹಾಗೂ ಬಸವರಾಜ್ ಬೊಮ್ಮಾಯಿ ನಾವೆಲ್ಲಾ ಒಟ್ಟಿಗೆ ಇದ್ದವರು. ನಮಗೆಲ್ಲ ವೈಯಕ್ತಿಕವಾಗಿ ಪ್ರೀತಿ ಇದೆ. ಆದರೆ ರಾಜಕೀಯವಾಗಿ ಬೇರೆ ಇದ್ದೇವೆ. ಬೊಮ್ಮಾಯಿ ಅವರ ತಂದೆ ರಾಜಕೀಯವಾಗಿ ನನಗೆ ಸಹಾಯ ಮಾಡಿದ್ದಾರೆ. ವಿ ಸೋಮಣ್ಣ ಅವರು ಹೈಕಮಾಂಡ್ ಹೇಳಿತ್ತು ಅಂತ ನನ್ನ ವಿರುದ್ಧ ಸ್ಪರ್ಧೆ ಮಾಡಿದ್ದರು. ಆದರೂ ವಿ ಸೋಮಣ್ಣ ಅವರಿಗೆ ನನ್ನ ಮೇಲೆ ಪ್ರೀತಿ ಇದೆ ಎಂದಿದ್ದಾರೆ.
ಸೋಮಣ್ಣ ಅವರು ವರುಣಾ ಹಾಗೂ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋತಿದ್ದರು. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸೋಲು ಕಂಡಿದ್ದರು. ಈ ನಡುವೆ ವಿ ಸೋಮಣ್ಣ ಅವರು ಮುನಿಸಿಕೊಂಡಿದ್ದು ಬಹಿರಂಗವಾಗಿಯೇ ಇತ್ತು. ಹೈಕಮಾಂಡ್ ಕೂಡ ಸಮಾಧಾನ ಮಾಡುವ ಪ್ರಯತ್ನ ನಡೆಸಿತ್ತು. ಇದೀಗ ಕಾಂಗ್ರೆಸ್ ಸೇರುವ ಎಲ್ಲಾ ಲಕ್ಚಣಗಳು ಕಾಣಿಸುತ್ತಿವೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್