Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮಗೆ ಉಪಚುನಾವಣೆ ಕ್ಷೇತ್ರಗಳು ಕೂಡಾ ಸವಾಲಿನ ಕ್ಷೇತ್ರಗಳು: ಸದಾನಂದ ಗೌಡ

Facebook
Twitter
Telegram
WhatsApp

ಬೆಂಗಳೂರು: ದಸರಾ ಉತ್ಸವ ಮುಗಿದ ಬಳಿಕ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೇವೆ ಎಂದು ಸಂಸದ ಸದಾನಂದ ಗೌಡ ಹೇಳಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷದ ನಿರ್ದೇಶನದ ಪ್ರಕಾರ ಹೋಗುತ್ತೇವೆ,ಉಪಚುನಾವಣೆ ಬರೆದೇ ಇರುತ್ತಿದ್ದರೆ ಕೋರ್ ಕಮಿಟಿಯಲ್ಲಿ ನಿರ್ಧಾರ ಆದಂತೆ ರಾಜ್ಯ ಪ್ರವಾಸಕ್ಕೆ ಹೋಗ ಬೇಕಿತ್ತು.

ನಮಗೆ ಉಪಚುನಾವಣೆ ಕ್ಷೇತ್ರಗಳು ಕೂಡಾ ಸವಾಲಿನ ಕ್ಷೇತ್ರಗಳು, ಉಪಚುನಾವಣೆ ಮುಗಿದ ಬಳಿಕ ಪ್ರವಾಸದ ದಿನಾಂಕ ನಿಗದಿಯಾಗುತ್ತದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಗ್ಗೆ ಉಗ್ರಪ್ಪ ಮತ್ತು ಸಲೀಂ ಮಾತುಕತೆ ವಿಚಾರವಾಗಿ ಮಾತನಾಡಿ,
ಇದನ್ನು ಸ್ವತಂತ್ರ ಏಜೆನ್ಸಿಯಿಂದ ತನಿಖೆ ಮಾಡಿಸಬೇಕು, ಅವರ ಪಕ್ಷದ ಆಂತರಿಕ ವಿಚಾರದ ಬಗ್ಗೆ ಮಾತಾಡಲು ಇಷ್ಟಪಡಲ್ಲ
ಡಿ.ಕೆ. ಶಿವಕುಮಾರ್ ಬಗ್ಗೆ ಅವರ ಪಕ್ಷದವರೇ ಮಾತಾಡುತ್ತುರುವುದು ನೋಡಿದರೆ ಅವರ ಪಕ್ಷದಲ್ಲೇ ಷಡ್ಯಂತ್ರ ನಡೆಯುತ್ತಿರುವುದು ಗೊತ್ತಾಗುತ್ತದೆ. ಕಾಂಗ್ರೆಸ್ ಈಗಾಗಲೇ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಂತಾ ವರ್ಟಿಕಲ್ ಆಗಿ ಡಿವೈಡ್ ಆಗಿದೆ. ಅದಕ್ಕೆ ಪ್ರೂಫ್ ಗಳು ದಿನಾ ಒಂದೊಂದು ಕಾಣ್ತಾ ಇದೆ.ಕಾಂಗ್ರೆಸ್ ಪಕ್ಷ ಈಗಾಗಲೇ ಅಧಪತನದ ಅಂಚಿಗೆ ಹೋಗಿದೆ, ಇದರ ಹಿಂದೆ ಯಾರಿದ್ದಾರೆ ಅಂತಾ ನಾನು ಹೇಳಲ್ಲ. ಪಕ್ಷದ ಕಚೇರಿಯಲ್ಲೇ ಕುಳಿತುಕೊಂಡು ಪಕ್ಷದ ನಾಯಕರ ವಿರುದ್ಧ ಮಾತಾಡಬೇಕಾದರೇ ಅದಕ್ಕೆ ಹಿಂದೆ ಸ್ವಲ್ಪ ಬಲಿಷ್ಠರಾದವರು ಯಾರಾದರೂ ಇರಲೇಬೇಕಲ್ವಾ..? ಅದು ಯಾರು ಏನು ಅಂತಾ ಅವರೇ ತಿಳಿದುಕೊಳ್ಳಲಿ ಎಂದರು.

ಬೆಂಗಳೂರು ನಗರ ಉಸ್ತುವಾರಿ ಸಚಿವರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಂತ್ರಿ ಸ್ಥಾನ, ಉಸ್ತುವಾರಿ ಸ್ಥಾನ ಕೊಡುವುದು ಸಿಎಂ ಪರಮಾಧಿಕಾರ, ಅವರು ಆಡಳಿತದ ಕ್ಯಾಪ್ಟನ್ ಯಾರ್ಯಾರು ಬ್ಯಾಟಿಂಗ್ ಮಾಡಬೇಕು, ಬೌಲಿಂಗ್ ಮಾಡಬೇಕು, ಫೀಲ್ಡಿಂಗ್ ಮಾಡಬೇಕು, ಅವರ ಸೀರೀಸ್ ಏನು ಅಂತಾ ಸಿಎಂ ಆಲೋಚನೆ ಮಾಡುತ್ತಾರೆ.ಬೆಂಗಳೂರು ಉಸ್ತುವಾರಿ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!