Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಾವೂ ಯಾವುದೇ ಟೀಂನಲ್ಲಿದ್ದರೂ ಅಲ್ಪಸಂಖ್ಯಾತರ ಜೊತೆ ನಿಲ್ಲುತ್ತೇವೆ : ಮೈತ್ರಿ ಬಗ್ಗೆ ರೇವಣ್ಣ ರಿಯಾಕ್ಷನ್

---Advertisement---

 

ಹಾಸನ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಸಜ್ಜಾಗಿದೆ. ಈ ಬಗ್ಗೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನಾವೂ ಯಾವುದೇ ಟೀಂನಲ್ಲಿ ಇದ್ದರೂ ಕೂಡ ಅಲ್ಪಸಂಖ್ಯಾತರ ಜೊತೆಗೆ ನಿಲ್ಲುತ್ತೇವೆ ಎಂದಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ಜೊತೆಗೆ ಮೈತ್ರಿ ಆಗುತ್ತಿವೋ ಇಲ್ಲವೋ, ಅದು ಕಾಂಗ್ರೆಸ್ ನವರಿಗೆ ಯಾಕೆ ಬೇಕು..? ಹಿಂದೆ ಬಿಜೆಪಿ ಜೊತೆಗೆ ಸೇರಿ ಸರ್ಕಾರ ಮಾಡಿದ್ದೆವು. ಆಗ ಬಾಬಾ ಬುಡನ್ ಗಿರಿ ವಿಚಾರದಲ್ಲಿ ಕ್ರಮ ಕೈಗೊಳ್ಳಲಿಲ್ವಾ..? ಆಗ ನಾವೂ ಅಲ್ಪಸಂಖ್ಯಾತರ ಪರವಾಗಿ ನಿಲ್ಲಲಿಲ್ವಾ..? ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವುದಕ್ಕೆ ನಮ್ಮ ಪಕ್ಷ ಬೇಕಿತ್ತಾ..? ಕಾಂಗ್ರೆಸ್ ಅವರು ಮೀಸಲಾತಿ ಕೊಟ್ಟರಾ..? ಈಗ‌ ಕಣ್ಣಾ ಮುಚ್ಚಾಲೆ ಆಡ್ತಿಲ್ವಾ ಎಂದಿದ್ದಾರೆ.

ಯಾರ ಜೊತೆಗೆ ಹೋದ್ರೂ ಹಿಂದುಳಿದ ವರ್ಗಕ್ಕೆ ಮೋಸ ಮಾಡಲ್ಲ. ಏನೇ ಆದರೂ ಜಿಲ್ಲೆಯಲ್ಲಿ ಹಿಂದುಳಿದ, ಅಲ್ಪಸಂಖ್ಯಾತರಿಗೆ ಮೋಸ ಆಗಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗಲೂ ಎಲ್ಲಾ ರೀತಿಯ ಅನುಕೂಲ ಮಾಡಿದ್ದೇನೆ. ನಾವೂ ಕೋಮುವಾದಿಗಳನ್ನು ದೂರ ಇಟ್ಟಿದ್ದೆವು. ಆದರೆ ಕಾಂಗ್ರೆಸ್ ನಮ್ಮನ್ನೇ ಮುಗಿಸಲು ಹೊರಟಿತ್ತು. ದೇಶದಲ್ಲಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸಿದ್ದೆ ಕಾಂಗ್ರೆಸ್ ಎಂದು ವಾಗ್ದಾಳಿ ನಡೆಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment