Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡಕ್ಕಾಗಿ ನಾವು ಅಭಿಯಾನ: ಅಚ್ಚ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ

Facebook
Twitter
Telegram
WhatsApp

ಚಿತ್ರದುರ್ಗ, (ಅಕ್ಟೋಬರ್. 24) : ಪ್ರಸಕ್ತ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಲಾಗಿರುವ “ಕನ್ನಡಕ್ಕಾಗಿ ನಾವು” ಅಭಿಯಾನದಲ್ಲಿ ಅಚ್ಚ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ ನಡೆಸಲಾಗುತ್ತಿದ್ದು, ಸ್ಪರ್ಧೆಯಲ್ಲಿ ಎಲ್ಲ ಸಾರ್ವಜನಿಕರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಜಿಲ್ಲಾ ಹಂತದ ಹಾಗೂ ಹೊರನಾಡಿನವರಿಗಾಗಿ ಇರುವ ಮೊದಲ ಹಂತದ ಸ್ಪರ್ಧೆಯಲ್ಲಿ ಅಕ್ಟೋಬರ್ 24ರ ಬೆಳಿಗ್ಗೆ 8 ಗಂಟೆಯಿಂದ ಅಕ್ಟೋಬರ್ 26ರ ರಾತ್ರಿ 10 ಗಂಟೆಯೊಳಗೆ ಸಾರ್ವಜನಿಕರು ತಮ್ಮ ಮಾಹಿತಿಯೊಂದಿಗೆ ವಿಡಿಯೋ ಕೊಂಡಿಯನ್ನು https://forms.gle/CRfQAZonSGQh83Sf7 ಈ ಗೂಗಲ್ ಲಿಂಕ್ ನಮೂನೆಯಲ್ಲಿ ನಮೂದಿಸಬಹುದಾಗಿದೆ.

ಜಿಲ್ಲಾ ಹಂತದಲ್ಲಿ ಮೊದಲನೇ, ಎರಡನೇ ಹಾಗೂ ಮೂರನೇ ಸ್ಥಾನದಲ್ಲಿನ ವಿಜೇತರಿಗೆ ಕ್ರಮವಾಗಿ ಐದು ಸಾವಿರ, ಮೂರು ಸಾವಿರ ಮತ್ತು ಎರಡು ಸಾವಿರ ಬಹುಮಾನ ನೀಡಲಾಗುತ್ತದೆ. ಸ್ಪರ್ಧೆಯ ಮೌಲ್ಯಮಾಪನಕ್ಕಾಗಿ ಜಿಲ್ಲೆಯಲ್ಲಿ ಮೂರು ಜನ ತಜ್ಞರನ್ನು ಕಾರ್ಯಕ್ರಮ ಸಮಿತಿಯು ಈಗಾಗಲೇ ಆಯ್ಕೆ ಮಾಡಿದ್ದು, ಮೌಲ್ಯಮಾಪನವನ್ನು ಸಮಿತಿಗೆ ಸಲ್ಲಿಸಲಾಗುತ್ತದೆ. ಮೌಲ್ಯಮಾಪನದ ಆಯ್ಕೆಮೇರೆಗೆ ಆಯ್ಕೆಗೊಂಡವರ ವಿವರಗಳನ್ನು ಅಕ್ಟೋಬರ್ 28 ರಂದು ಅವರ ಇಮೇಲ್ ಅಥವಾ ದೂರವಾಣಿ ಪಠ್ಯ ಸಂದೇಶದ ಮೂಲಕ ಮಾಹಿತಿ ನೀಡಲಾಗುವುದು.
ಬೆಂಗಳೂರಿನಲ್ಲಿ ಅಕ್ಟೋಬರ್ 30ರಂದು ಅಂತಿಮ ಹಂತದ ಸ್ಪರ್ಧೆಯನ್ನು ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಧನಂಜಯ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿ.ಬಿ.ಎಸ್.ಈ 10ನೇ ತರಗತಿ ಫಲಿತಾಂಶ | ಎಸ್.ಆರ್.ಎಸ್. ಹೆರಿಟೇಜ್ ಶಾಲೆಗೆ ಸತತ 7ನೇ ವರ್ಷವೂ ಶೇಕಡ 100 ರಷ್ಟು  ಫಲಿತಾಂಶ

  ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಎಸ್.ಆರ್.ಎಸ್. ಹೆರಿಟೇಜ್ ಶಾಲೆಯು ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಈ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ

ರಾಷ್ಟ್ರೀಯ ಶಿಕ್ಷಣ ನೀತಿ-2020 : ರಾಜ್ಯ ಸರ್ಕಾರದ ನಿಲುವಿಗೆ ಎಬಿವಿಪಿ ಖಂಡನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 13 :  ಭಾರತ ದೇಶದಲ್ಲಿ ಭಾರತೀಯ ಶಿಕ್ಷಣ ನೀತಿಜಾರಿಗೆ ಬರಬೇಕು ಅದು ಮುಂದಿನ ಹತ್ತಾರು ವಷಗಳ

ಮೇ 26 ರಂದು ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಸಮಾರಂಭ

ಚಿತ್ರದುರ್ಗ ಮೇ. 13 : ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘ (ರಿ.) ಇವರ ವತಿಯಿಂದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ 2023-24 ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ (ಶೇ. 85ಕ್ಕೂ

error: Content is protected !!