ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ರಾಜ್ಯದಲ್ಲಿ ಮಳೆಯೇ ಇಲ್ಲ ಆದರೂ ಕಾವೇರಿಯ ನೀರನ್ನು ತಮಿಳುನಾಡಿಗೆ ಬಿಡಬೇಕು ಎಂದೇ ಪ್ರತಿ ಸಲ ನಿರ್ಧಾರವಾಗುತ್ತಿದೆ. ಹೀಗಾಗಿ ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದೆ. ಈ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಅವರು ನೀರು ಬಿಡುವುದಕ್ಕೆ ಸಾಧ್ಯವೇ ಇಲ್ಲ ಎಂಬ ರೀತಿಯಲ್ಲಿಯೇ ಮಾತನಾಡಿದ್ದಾರೆ.
ತಮಿಳುನಾಡಿಗೆ ಪ್ರತಿದಿನ 5000 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಸೂಚನೆ ನೀಡಿದೆ. ಆದರೆ ನೀರು ಹರಿಸಿವ ಪರಿಸ್ಥಿತಿಯಲ್ಲಿ ನಾವಿಲ್ಲ. ಹೀಗಾಗಿ ಇದನ್ನು ಮರುಪರಿಶೀಲನೆ ಮಾಡುವಂತೆ ಮನವಿ ಮಾಡಲು ಸಿದ್ದರಿದ್ದೇವೆ. ವಸ್ತುಸ್ಥಿತಿ ವಿವರಿಸಿ, ಪ್ರಧಾನಿ ಮೋದಿ ಅವರಿಗೆ ಮತ್ತೆ ಪತ್ರ ಬರೆಯುತ್ತೇನೆ. ಸರ್ವಪಕ್ಷ ನಿಯೋಗದ ಭೇಟಿಗೂ ಪ್ರಧಾನಿ ಮೋದಿ ಅವರು ಈವರೆಗೂ ಸಮಯ ಕೊಟ್ಟಿಲ್ಲ ಎಂದಿದ್ದಾರೆ.
ನೆಲ, ಜಲ, ಭಾಷೆ ವಿಚಾರದಲ್ಲಿ ನಾವ್ಯಾರು ರಾಜಕೀಯ ಮಾಡಿಲ್ಲ. ಎಲ್ಲರೂ ಒಟ್ಟಾಗಿಯೇ ಹೋಗಿದ್ದೇವೆ. ಸೆ.18ರಿಂದ ಸಂಸತ್ ವಿಶೇಷ ಅಧಿವೇಶನ ಆರಂಭವಾಗಲಿದೆ. ಎಲ್ಲಾ ಸಂಸದರು, ಸಚಿವರ ಜೊತೆಗೆ ಹೋಗಿ ಚರ್ಚೆ ಮಾಡುತ್ತೇವೆ. ಸಮಿತಿಯ ಮುಂದೆ ಮತ್ತೊಂದಹ ಅರ್ಜಿ ಹಾಕುತ್ತೇವೆ. ನೀರು ಬಿಡಬೇಕಾ..? ಬೇಡವಾ ಎಂಬುದರ ಬಗ್ಗೆ ಕಾನೂನು ತಜ್ಞರ ಸಲಹೆಗಳನ್ನು ಪಡೆಯುತ್ತೇವೆ. ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ಕಾನೂನು ತಜ್ಞರ ಜೊತೆಗೆ ಚರ್ಚೆ ಮಾಡಲಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿಯೂ ವಾಸ್ತವಾಂಶ ತಿಳಿಸುವ ಪ್ರಯತ್ನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್