Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದರ್ಶನ್ ಗೆ ಬೇಕಾಗಿದ್ದೆಲ್ಲಾ ನೀಡುವುದಕ್ಕೆ ಆಗಲ್ಲ

---Advertisement---

 

ಬೆಂಗಳೂರು: ಇಂದು ನಟ ದರ್ಶನ್ ಕೇಳಿದ್ದ ಹಾಸಿಗೆ, ದಿಂಬಿಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ನಡೆದಿದೆ. ನೀವೂ ಆರ್ಡರ್ ಮಾಡಿದ ರೀತಿಯಲ್ಲಿ ನಮಗೆ ಯಾವುದೇ ಸೌಲಭ್ಯವನ್ನು ಕೊಟ್ಟಿಲ್ಲ ಎಂಬ ಆರೋಪವನ್ನು ದರ್ಶನ್ ಮಾಡಿದ್ದರು. ಈ ಅರ್ಜಿಗೆ ಉತ್ತರ ಕೊಡುವುದಕ್ಕೆ ಕೋರ್ಟ್ ಗೆ , ಜೈಲಿನ ಸೂಪರಿಂಡೆಂಟ್ ಸುರೇಶ್ ಅವರು ವಿಚಾರಣೆಗೆ ಹಾಜರಾಗಿ ವಿವರಣೆಯನ್ನು ನೀಡಿದರು. ಸರ್ಕಾರದ ಪರವಾಗಿ ಎಸ್ಪಿಪಿ ಪ್ರಸನ್ನ ಕುಮಾರ್ ಅವರು ವಾದ ಮಂಡಿಸಿದ್ದಾರೆ.

ಜೈಲಿನ ನಿಯಮದ ಪ್ರಕಾರ ಎಲ್ಲವನ್ನು ನೀಡಲಾಗಿದೆ. ಅದನ್ನು ಬಿಟ್ಟು ಮಲಗುವುದಕ್ಕೆ ಪಲ್ಲಂಗವನ್ನೇ ಕೊಡಿ ಅಂದ್ರೆ ಹೇಗೆ ಕೊಡುವುದು. ಎಲ್ಲವನ್ನು ಕೊಡುವುದಕ್ಕೆ ನಮಗೆ ಪ್ರಾವಿಷನ್ ಇಲ್ಲ. ಬೆಳಗ್ಗೆ ಒಂದು ಗಂಟೆ ಸಂಜೆ ಒಂದು ಗಂಟೆ ವಾಕ್ ಮಾಡಲು ಅವಕಾಶ ನೀಡಲಾಗಿದೆ. ಆರೋಪಿ ಕೇಳಿದ ಬ್ಯಾರಕ್ ಕೊಡುವುದಕ್ಕೆ ಆಗಲ್ಲ ಎಂದು ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದಾರೆ.

ಸರ್ಕಾರದ ಪರ ವಕೀಲರ ವಾದಕ್ಕೆ ದರ್ಶನ್ ಪರ ವಕೀಲರಾದ ಸುನೀಲ್ ವಾದ ಮಂಡಿಸಿದ್ದಾರೆ. ತಟ್ಟೆ, ಲೋಟ, ಚಾಪೆ, ಮಗ್ಗು, ದಿಂಬು ನೀಡಿದ್ದಾರೆ. ಕೋರ್ಟ್ ಆದೇಶದ ಬಳಿಕ ಕಂಬಳಿ ಕೊಟ್ಟಿದ್ದಾರೆ. ಪಲ್ಲಂಗ ಅಂದ್ರೆ ಮಂಚ. ಚಿನ್ನದ ಮಂಚವನ್ನ ಕೊಡಿ ಅಂತ ಏನು ಕೇಳುತ್ತಿಲ್ಲ. ವಾಕಿಂಗ್ ಗೆ ಅವಕಾಶ ಕೊಡುತ್ತಿಲ್ಲ. ಸೆಲ್ ಒಳಗೆ ವಾಕ್ ಮಾಡಿ ಅಂತಿದ್ದಾರೆ. ದರ್ಶನ್ ಭೇಟಿಗೆ ಅವಕಾಶವನ್ನು ಕೊಡುತ್ತಿಲ್ಲ ಎಂದು ಸುನೀಲ್ ವಾದ ಮಂಡಿಸಿದ್ದಾರೆ. ಇದೆಲ್ಲವನ್ನು ಕೇಳಿದ ಜಡ್ಜ್ ಜೈಲಾಧಿಕಾರಿ ವಿರುದ್ಧ ಗರಂ ಆಗಿದ್ದಾರೆ. ಸದ್ಯ ಅಕ್ಟೋಬರ್ 9ಕ್ಕೆ ವಿಚಾರಣೆಯನ್ನು ಕೋರ್ಟ್ ಮುಂದೂಡಿಕೆ ಮಾಡಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...