Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಗೆ ಬೇಕಾಗಿದ್ದೆಲ್ಲಾ ನೀಡುವುದಕ್ಕೆ ಆಗಲ್ಲ

---Advertisement---

 

ಬೆಂಗಳೂರು: ಇಂದು ನಟ ದರ್ಶನ್ ಕೇಳಿದ್ದ ಹಾಸಿಗೆ, ದಿಂಬಿಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ನಡೆದಿದೆ. ನೀವೂ ಆರ್ಡರ್ ಮಾಡಿದ ರೀತಿಯಲ್ಲಿ ನಮಗೆ ಯಾವುದೇ ಸೌಲಭ್ಯವನ್ನು ಕೊಟ್ಟಿಲ್ಲ ಎಂಬ ಆರೋಪವನ್ನು ದರ್ಶನ್ ಮಾಡಿದ್ದರು. ಈ ಅರ್ಜಿಗೆ ಉತ್ತರ ಕೊಡುವುದಕ್ಕೆ ಕೋರ್ಟ್ ಗೆ , ಜೈಲಿನ ಸೂಪರಿಂಡೆಂಟ್ ಸುರೇಶ್ ಅವರು ವಿಚಾರಣೆಗೆ ಹಾಜರಾಗಿ ವಿವರಣೆಯನ್ನು ನೀಡಿದರು. ಸರ್ಕಾರದ ಪರವಾಗಿ ಎಸ್ಪಿಪಿ ಪ್ರಸನ್ನ ಕುಮಾರ್ ಅವರು ವಾದ ಮಂಡಿಸಿದ್ದಾರೆ.

ಜೈಲಿನ ನಿಯಮದ ಪ್ರಕಾರ ಎಲ್ಲವನ್ನು ನೀಡಲಾಗಿದೆ. ಅದನ್ನು ಬಿಟ್ಟು ಮಲಗುವುದಕ್ಕೆ ಪಲ್ಲಂಗವನ್ನೇ ಕೊಡಿ ಅಂದ್ರೆ ಹೇಗೆ ಕೊಡುವುದು. ಎಲ್ಲವನ್ನು ಕೊಡುವುದಕ್ಕೆ ನಮಗೆ ಪ್ರಾವಿಷನ್ ಇಲ್ಲ. ಬೆಳಗ್ಗೆ ಒಂದು ಗಂಟೆ ಸಂಜೆ ಒಂದು ಗಂಟೆ ವಾಕ್ ಮಾಡಲು ಅವಕಾಶ ನೀಡಲಾಗಿದೆ. ಆರೋಪಿ ಕೇಳಿದ ಬ್ಯಾರಕ್ ಕೊಡುವುದಕ್ಕೆ ಆಗಲ್ಲ ಎಂದು ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದಾರೆ.

ಸರ್ಕಾರದ ಪರ ವಕೀಲರ ವಾದಕ್ಕೆ ದರ್ಶನ್ ಪರ ವಕೀಲರಾದ ಸುನೀಲ್ ವಾದ ಮಂಡಿಸಿದ್ದಾರೆ. ತಟ್ಟೆ, ಲೋಟ, ಚಾಪೆ, ಮಗ್ಗು, ದಿಂಬು ನೀಡಿದ್ದಾರೆ. ಕೋರ್ಟ್ ಆದೇಶದ ಬಳಿಕ ಕಂಬಳಿ ಕೊಟ್ಟಿದ್ದಾರೆ. ಪಲ್ಲಂಗ ಅಂದ್ರೆ ಮಂಚ. ಚಿನ್ನದ ಮಂಚವನ್ನ ಕೊಡಿ ಅಂತ ಏನು ಕೇಳುತ್ತಿಲ್ಲ. ವಾಕಿಂಗ್ ಗೆ ಅವಕಾಶ ಕೊಡುತ್ತಿಲ್ಲ. ಸೆಲ್ ಒಳಗೆ ವಾಕ್ ಮಾಡಿ ಅಂತಿದ್ದಾರೆ. ದರ್ಶನ್ ಭೇಟಿಗೆ ಅವಕಾಶವನ್ನು ಕೊಡುತ್ತಿಲ್ಲ ಎಂದು ಸುನೀಲ್ ವಾದ ಮಂಡಿಸಿದ್ದಾರೆ. ಇದೆಲ್ಲವನ್ನು ಕೇಳಿದ ಜಡ್ಜ್ ಜೈಲಾಧಿಕಾರಿ ವಿರುದ್ಧ ಗರಂ ಆಗಿದ್ದಾರೆ. ಸದ್ಯ ಅಕ್ಟೋಬರ್ 9ಕ್ಕೆ ವಿಚಾರಣೆಯನ್ನು ಕೋರ್ಟ್ ಮುಂದೂಡಿಕೆ ಮಾಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now