Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮಗೆ ಯಾಕಿಷ್ಟು ಹಿಂಸೆ ಕೊಡುತ್ತಿದ್ದಾರೋ ಗೊತ್ತಿಲ್ಲ : ರಾಜಮಾತೆ ಪ್ರಮೋದಾ ದೇವಿ ಬೇಸರ

Facebook
Twitter
Telegram
WhatsApp

ಮೈಸೂರು: ಪಾಂಡವಪುರ ತಾಲೂಕಿನ ಬೇಬಿಬೆಟ್ಟ ಸದ್ಯ ವಿವಾದದ ಕೇಂದ್ರ ಬಿಂದುವಾಗಿದೆ. ಅಲ್ಲಿನ ಟ್ರಯಲ್ ಬ್ಲಾಸ್ಟ್ ಮಾಡಲು ಯೋಜನೆ ನಡೆಯುತ್ತಿದೆ. ಇದಕ್ಕೆ ವಿರೋಧ ಕೂಡ ವ್ಯಕ್ತವಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಮಾತೆ ಪ್ರಮೋದಾ ದೇವಿ ಎಂಟ್ರಿಯಾಗಿದ್ದು, ಸುದ್ದಿಗೋಷ್ಟಿ ನಡೆಸಿ, ಬೇಸರ ಹೊರ ಹಾಕಿದ್ದಾರೆ.

ಬೇಬಿ ಬೆಟ್ಟದ 1,600 ಎಕರೆ ಪ್ರದೇಶ ರಾಜಮನೆತನಕ್ಕೆ ಸೇರಿದ್ದಾಗಿದೆ. ಆ ಜಾಗದಲ್ಲಿ ಯಾವುದೇ ಕಾರಣಕ್ಕೂ ಟ್ರಯಲ್ ಬ್ಲಾಸ್ಟ್ ನಡೆಸಬಾರದು. ಬ್ಲಾಸ್ಟ್ ಆದರೆ ಕೃಷ್ಣಸಾಗರ ಅಣೆಕಟ್ಟೆಗೆ ಅಪಾಯವಿದೆ. ನಮಗೆ ಯಾಕಿಷ್ಟು ಹಿಂಸೆ ಕೊಡುತ್ತಿದ್ದಾರೋ ಗೊತ್ತಿಲ್ಲ. ರಾಜ್ಯ ವಿಲೀನದ ಸಂದರ್ಭದಲ್ಲಿ ರಾಜ ವಂಶ ಮತ್ತು ಸರ್ಕಾರದ ನಡುವೆ ಒಪ್ಪಂದ ಏರ್ಪಟ್ಟಿತ್ತು. ರಾಜಮನೆತನಕ್ಕೆ ಒಂದಷ್ಟು ಆಸ್ತಿಯನ್ನು ಬಿಟ್ಟು ಇನ್ನುಳಿದ ಆಸ್ತಿಯನ್ನು ದೇಶದೊಂದಿಗೆ ವಿಲೀನ ಮಾಡಲಾಗಿತ್ತು.

ಹೀಗಾಗಿ ಯಾವುದು ನಮ್ಮ ಆಸ್ತಿ, ಯಾವುದು ಸರ್ಕಾರದ ಆಸ್ತಿ ಎಂಬುದು ಅಧಿಕಾರ ನಡೆಸುವವರಿಗೆ ಗೊತ್ತಿದೆ. ಬೇಬಿ ಬೆಟ್ಟದ ಸುತ್ತಮುತ್ತಲಿನ 1623 ಎಕರೆ ನಮ್ಮ ಖಾಸಗಿ ಆಸ್ತಿ. ಅದನ್ನು ಸರ್ಕಾರ ಬಿ ಕರಾಬು ಎಂದೇ ಘೋಷಣೆ ಮಾಡಿದೆ. ಅದರ ಪರಿಣಾಮವಾಗಿಯೇ ಅಲ್ಲಿ ಗಣಿಗಾರಿಕೆ ಆರಂಭವಾಯಿತು. ಈಗ ಟ್ರಯಲ್ ಬ್ಲಾಸ್ಟ್ ನಡೆಸಲು ಹೊರಟಿದ್ದಾರೆ. ಕನಿಷ್ಠ ಪಕ್ಷ ಅನುಮತಿಯನ್ನಾದರೂ ಪಡೆಯಬೇಕು. ಎಲ್ಲವೂ ಗೊತ್ತಿದ್ದರು ಬೇಕಂತಲೇ ಮಾಡುತ್ತಿದ್ದಾರೆ ಎಂದು ಬೇಸರ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು. ಈ ರಾಶಿಯವರು ಬಯಸಿದ್ದೆಲ್ಲಾ ಪಡೆಯುವ ಆಶಾವಾದಿಗಳು.   ಸೋಮವಾರ ರಾಶಿ ಭವಿಷ್ಯ -ಮೇ-13,2024 ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

error: Content is protected !!