ರಾಹುಲ್ ಗಾಂಧಿ ನಾಯಕತ್ವಕ್ಕೆ ನಮ್ಮ ಬೆಂಬಲವಿಲ್ಲ : ಅರವಿಂದ್ ಕೇಜ್ರಿವಾಲ್

ನವದೆಹಲಿ : ಇತ್ತೀಚೆಗೆ ಬಿಹಾರದಲ್ಲಿ ನಡೆದ ಪ್ರತಿಪಕ್ಷಗಳ ಸಭೆಯಲ್ಲಿ ಅರವಿಂದ್ ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿದರು.ಪ್ರತಿಪಕ್ಷಗಳು ರಾಹುಲ್ ಗಾಂಧಿ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದರೆ ಅದನ್ನು ಬೆಂಬಲಿಸುವುದಿಲ್ಲ ಎಂದು ಎಎಪಿ ನಾಯಕಿ ಪ್ರಿಯಾಂಕಾ ಕಕ್ಕರ್ ಹೇಳಿದ್ದಾರೆ.

ಕೇಂದ್ರ ಸರ್ಕಾರ ತಂದಿರುವ ಸುಗ್ರೀವಾಜ್ಞೆಗೆ ಕಾಂಗ್ರೆಸ್ ಬೆಂಬಲ ನೀಡದಿದ್ದರೆ. ಅವರ ನೇತೃತ್ವದ ಪ್ರತಿಪಕ್ಷಗಳೊಂದಿಗೆ ನಾವು ಪಾಲುದಾರರಾಗಲು ಸಾಧ್ಯವಿಲ್ಲ ಎಂದು ಪ್ರಿಯಾಂಕಾ ಕಕ್ಕರ್ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ದೇಶ ಸುಧಾರಣೆಯಾಗಬೇಕಾದರೆ ಕಾಂಗ್ರೆಸ್ ಮತ್ತೊಮ್ಮೆ ರಾಹುಲ್ ಗಾಂಧಿಯನ್ನು ನಾಯಕನನ್ನಾಗಿ ಮಾಡಿ ಪ್ರತಿಪಕ್ಷಗಳನ್ನು ಬೆಂಬಲಿಸುವಂತೆ ಕೇಳಬಾರದು.

ಬಿಹಾರದಲ್ಲಿ ನಡೆದ ವಿಪಕ್ಷಗಳ ಸಭೆಯಲ್ಲಿ ದೆಹಲಿಯಲ್ಲಿ ಕೇಂದ್ರ ಸರ್ಕಾರ ತಂದಿರುವ ಸುಗ್ರೀವಾಜ್ಞೆಗೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂಬ ಭರವಸೆಯೊಂದಿಗೆ ಬಂದಿದ್ದ ಅರವಿಂದ್ ಕೇಜ್ರಿವಾಲ್, ಅದರ ಬಗ್ಗೆ ಕೂಲಂಕುಷವಾಗಿ ಚರ್ಚಿಸದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದರು.

ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡದೇ ದೆಹಲಿಗೆ ತೆರಳಿದ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಕೇಂದ್ರ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ಬೆಂಬಲ ನೀಡದಿದ್ದರೆ ಅವರ ಜೊತೆಯಲ್ಲಿ ಪ್ರಯಾಣಿಸುವುದು ಕಷ್ಟ ಎಂಬ ಸಂದೇಶ ರವಾನಿಸಿದ್ದಾರೆ.

ಎಎಪಿ ಪರವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಸಂಸದ ಸಂಜಯ್ ಸಿಂಗ್ ಮತ್ತು ರಾಘವ್ ಚಡ್ಡಾ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಒಟ್ಟಾಗಿ ನಡೆಯುವಂತೆ ರಾಹುಲ್ ಗಾಂಧಿಗೆ ವಿನಂತಿಸಿದರು. ಆದರೆ ಸುಗ್ರೀವಾಜ್ಞೆಯ ಬಗ್ಗೆ ಚರ್ಚಿಸಲು ಒಂದು ಮಾರ್ಗವಿದೆ ಎಂದು ರಾಹುಲ್ ಹೇಳಿದರು. ಈ ವಿಚಾರವಾಗಿ ಅರವಿಂದ್ ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿದರು.

ಎಎಪಿ ನಾಯಕರು ಕಾಂಗ್ರೆಸ್ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಹಿಂದೆ 370ನೇ ವಿಧಿ ರದ್ದತಿಯನ್ನು ನೀವು ಬೆಂಬಲಿಸಿದಾಗಲೂ ನಾವು ಅದೇ ರೀತಿ ನೋವನ್ನು ಅನುಭವಿಸಿದ್ದೇವೆ ಎಂದು ಕಾಂಗ್ರೆಸ್ ಮೂಲಗಳು ಹೇಳುತ್ತವೆ.

Share This Article
Leave a Comment

Leave a Reply

Your email address will not be published. Required fields are marked *