Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ : ಸಿಎಂ ಸಿದ್ದರಾಮಯ್ಯ ಅವರಿಗೆ ವಿಜಯೇಂದ್ರ ತಿರಗೇಟು

---Advertisement---

ರಾಜ್ಯ ಬಿಜೆಪಿ ಪಕ್ಷದ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದರು. ಅದಕ್ಕೆ ತಿರುಗೇಟು ನೀಡಿರುವ ಬಿ.ವೈ.ವಿಜಯೇಂದ್ರ ಅವರು, ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ ಎಂದಿದ್ದಾರೆ.

 

ಮಾನ್ಯ ಸಿದ್ದರಾಮಯ್ಯ ಅವರೇ,
ಭಾರತೀಯ ಜನತಾ ಪಾರ್ಟಿ ತತ್ವ, ಸಿದ್ದಾಂತ ಆಧರಿಸಿದ ಶಿಸ್ತಿನ ಪಕ್ಷ. ಕಳೆಯಿಲ್ಲದೆ ಬೆಳೆದು ನಿಂತಿರುವ ಸಮೃದ್ಧ ತೋಟ, ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ, ಅಧಿಕಾರಕ್ಕಾಗಿ ಹಪಾಹಪಿಸುವ ಕಳ್ಳಿ ಗಿಡಗಳಾವುವೂ ನಮ್ಮ ಪಕ್ಷದಲ್ಲಿ ತಲೆಯೆತ್ತಲು ಸಾಧ್ಯವಿಲ್ಲ. ತಲೆ ಎತ್ತಲು ಹೋದರೆ ಅದಕ್ಕೆ ಮದ್ದು ನೀಡುವಷ್ಟು ನಮ್ಮ ವರಿಷ್ಠ ಮಂಡಳಿಯು ಸಶಕ್ತವಾಗಿದೆ.

ಭಾರತದ ರಾಜಕೀಯ ಭೂಪಟದಲ್ಲಿ ಮಾಸಿ ಹೋಗುತ್ತಿರುವ ನಿಮ್ಮ ಕಾಂಗ್ರೆಸ್ ಪಕ್ಷ ಅಧಿಕಾರ ಕಬಳಿಸುವುದನ್ನಷ್ಟೇ ಕೇಂದ್ರೀಕರಿಸಿ ಸುಳ್ಳು ಭರವಸೆಗಳು ಹಾಗೂ ಆಮಿಷಗಳ ಬಲೆ ಹೆಣೆದು ಕರ್ನಾಟಕದಲ್ಲಿ ಅಧಿಕಾರ ದಕ್ಕಿಸಿಕೊಂಡಿದೆ. ಲೋಕಸಭಾ ಚುನಾವಣೆಯ ನಂತರ ಈ ಟೊಳ್ಳು ಬಲೆಯನ್ನು ಜನರೇ ತುಂಡರಿಸಲಿದ್ದಾರೆ, ನಿಮ್ಮ ಬಣ ರಾಜಕೀಯದ ಕಿತ್ತಾಟದ ಬಣ್ಣ ಶೀಘ್ರದಲ್ಲೇ ಬಯಲಿಗೆ ಬರಲಿದೆ.

ದೀಪ ಆರುವ ಮುನ್ನ ಜೋರಾಗಿ ಹೊತ್ತಿ ಉರಿಯುತ್ತದೆ, ಕಾಲವೇ ನಿಮಗೆ ಉತ್ತರ ಹೇಳಲಿದೆ. ಯಾರು ಯಾರ ವಿರುದ್ಧ ಮುಗಿ ಬೀಳುತ್ತಾರೆ? ಯಾರು ಎಲ್ಲಿರುತ್ತಾರೆ? ಎಂಬುದನ್ನು ಕೆಲವೇ ದಿನಗಳು ಕಾದುನೋಡಿ ನಿಮ್ಮ ಕಾಂಗ್ರೆಸ್ ಪಡಸಾಲೆಯಲ್ಲೇ ನಿಮಗೆ ಉತ್ತರ ಸಿಗಲಿದೆ.

ನೀವು ಮುಖ್ಯಮಂತ್ರಿಯಾಗುವ ವೇಳೆ ಡಿಕೆ ಶಿವಕುಮಾರ್ ಅವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆ ಬದಿಗೊತ್ತಿ ಹೈಕಮಾಂಡ್ ಸೂತ್ರ ಧಿಕ್ಕರಿಸುವ ನಿಮ್ಮ ತಂತ್ರದ ಜಾಡು ಹಿಡಿದಿರುವ ನಿಮ್ಮ ವಿರೋಧಿ ಬಣ ಸುಮ್ಮನೆ ಕುಳಿತಿಲ್ಲ, ಮುಖ್ಯಮಂತ್ರಿ ಅಧಿಕಾರ ಹಂಚಿಕೆಯ ಕಾಲ ಸನ್ನಿಹಿತವಾಗುವುದರೊಳಗೇ ಪರಿಸ್ಥಿತಿ ಯಾವ ರೀತಿ ಬಿಗಡಾಯಿಸುತ್ತದೆ ಎನ್ನುವುದನ್ನು ಕಾಂಗ್ರೆಸ್ ನಲ್ಲಿ ವ್ಯೂಹ ರಚಿಸುವ ಬಂಡೆಯೊಂದು ಈಗಾಗಲೇ ಸದ್ದು ಮಾಡುತ್ತಿದೆ ಎಂದು ಪ್ರತ್ಯುತ್ತರ ಕೊಟ್ಟಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment