Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

---Advertisement---

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ ಮೃತ್ಯುಂಜಯ ಸ್ವಾಮೀಜಿ ಕಾಲ್ನಡಿಗೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿರುವ ಜಯ ಮೃತ್ಯುಂಜಯ ಸ್ವಾಮೀಜಿ, ಮೀಸಲಾತಿ ಎಂಬುದು ಕಳೆದ ಮೂವತ್ತು ವರ್ಷದಿಂದ ನಮ್ಮ ಹಕ್ಕೊತ್ತಾಯ. ಮೂರು ವರ್ಷದಿಂದ ಇದಕ್ಕಾಗಿ ನಿರಂತರ ಹೋರಾಟ ಮಾಡಿಕೊಂಡು ಬಂದಿದ್ದೇವೆ‌. ನಮ್ಮ ಜನಾಂಗದವರು ಮನೆ, ಮಠ ಬಿಟ್ಟು ಹೋರಾಟ ಮಾಡಿದ್ದೇವೆ. ನಮಗೆ ಸಿಗಬೇಕಾದ ಮೀಸಲಾತಿ ಸ್ಪಷ್ಟತೆ ಇನ್ನು ಕೂಡ ಸಿಕ್ಕಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಕೊನೆ ಗಳಿಗೆಯಲ್ಲಿ 2D ಎಂಬ ಪ್ರವರ್ಗ ಸೃಷ್ಟಿ ಮಾಡಿತ್ತು. ಆದರೆ ಅದು ಇಂಪ್ಲಿಮೆಂಟ್ ಆಗಿರಲಿಲ್ಲ. ಈಗಿನ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡ್ತೀವಿ, ನಮ್ಮ ಹೋರಾಟದ ಪರಿಣಾಮ ಇಂದು ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಮ್ಮ ಸಮಾಜದ ಋಣ ನಿಮ್ಮ ಮೇಲಿದೆ‌. ಬೇರೆ ಬೇರೆ ಸಮುದಾಯದವರು ವೋಟ್ ಹಾಕಿರಬಹುದು. ಆದರೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ತೆಗೆದುಕೊಂಡ ನಿರ್ಧಾರ ತಡವಾಗಿದ್ದಕ್ಕೆ ನಮ್ಮ ಜನ ನೀವೂ ಮಾಡ್ತೀರ ಎಂಬ ಕಾರಣಕ್ಕೆ ಆಶೀರ್ವಾದ ಮಾಡಿದ್ದಾರೆ.

ನಿಮ್ಮ ಸರ್ಕಾರ ರಚನೆಯಾಗಿ ಒಂದು ವರ್ಷ ಎಂಟು ತಿಂಗಳಾಗಿದೆ. ಇಲ್ಲಿವರೆಗೂ ಒಂದು ಸಭೆ ಮಾಡಿಲ್ಲ. ಸಭೆ ಮಾಡ್ತೀವಿ ಅಂತ ಹೇಳಿ ಎರಡು ಬಾರೀ ಮಾತು ಕೊಟ್ಟಿದ್ರಿ. ಈಗ ಸಿಎಂ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ನಾವೂ ಬೇರೆ ಏನು ಕೇಳುವುದಕ್ಕೆ ಹೋಗಲ್ಲ‌. ನಮ್ಮ ವರದಿ ನಿಮ್ಮ ಕೈಲಿದೆ. ನಮ್ಮ ಸಮುದಾಯದವರಿಗೆ 2A ಮೀಸಲಾತಿಗೆ ಸೇರಿಸಬೇಕು. ಎಲ್ಲಾ ಲಿಂಗಾಯತರನ್ನು ಸಹ ಒಬಿಸಿಗೆ ಶಿಫಾರಸು ಮಾಡಬೇಕು ಎಂಬ ಎರಡು ಬೇಡಿಕೆ ಇದಾವೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment