Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯತ್ನಾಳ್ ಬಗ್ಗೆ ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ, ನಮಗೆ ಆ ಅಧಿಕಾರವಿಲ್ಲ : ಡಿವಿ ಸದಾನಂದಗೌಡ

Facebook
Twitter
Telegram
WhatsApp

ಬೆಂಗಳೂರು: ಶಾಸಕ ಯತ್ನಾಳ್ ತಮ್ಮದೇ ಪಕ್ಷದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಅದರಲ್ಲೂ ಕೊರೊನಾ ಸಮಯದಲ್ಲಿ 40 ಸಾವಿರ ಕೋಟಿ ಅವ್ಯವಹಾರ ನಡೆದಿರುವ ಬಗ್ಗೆ ಬಹಿರಂಗವಾಗಿಯೇ ತಿಳಿಸಿದ್ದಾರೆ‌. ಈ ಸಂಬಂಧ ಕಾಂಗ್ರೆಸ್ ನಾಯಕರು ಅದಕ್ಕೆ ದಾಖಲೆಗಳನ್ನು ನೀಡಿದರೆ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. ಇದು ಬಿಜೆಪಿ ನಾಯಕರಿಗೆ ಮುಜುಗರ ತಂದಿದೆ.

ಈ ಸಂಬಂಧ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇದೀಗ ಈ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ, ಶಾಸಕ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ನಮಗೆ ಅಧಿಕಾರವಿಲ್ಲ. ಆದರೆ ಈ ವಿಚಾರವಾಗಿ ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ. ನಿನ್ನೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದೆ. ಆ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳ ಬಗ್ಗೆಯೂ ತಿಳಿಸಲಾಗಿದೆ. ಇದೇ ವೇಳೆ ಯತ್ನಾಳ್ ಅವರ ಬಗ್ಗೆಯೂ ವಿಚಾರ ಮುಟ್ಟಿಸಲಾಗಿದೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಅಧಿಕಾರ ನಮಗೆ ಇಲ್ಲ.

ಶಾಸಕರು ಹಾಗೂ ಅದಕ್ಕೂ ಮೇಲ್ಪಟ್ಟ ಯಾರ ಬಗ್ಗೆಯೇ ಕ್ರಮ ತೆಗೆದುಕೊಳ್ಳುವುದಿದ್ದರು ಅದನ್ನು ಹೈಕಮಾಂಡ್ ಅವರೇ ತೆಗೆದುಕೊಳ್ಳಬೇಕು. ನಾವೂ ಏನೇ ಇದ್ದರು ಇಲ್ಲಿನ ಬೆಳವಣಿಗೆಯ ಬಗ್ಗೆ ಮಾಹಿಯನ್ನಷ್ಟೇ ನೀಡಬಹುದು. ಹೀಗಾಗಿ ಯತ್ನಾಳ್ ಅವೆ ಹೇಳಿಕೆಗಳ ಬಗ್ಗೆ ನಾವೂ ಯಾರೂ ಮಾತನಾಡುವುದಿಲ್ಲ. ಕಾಂಗ್ರೆಸ್ ನವರಿಗೆ ಈಗ ಅಧಿಕಾರ ಸಿಕ್ಕು ಆರು ತಿಂಗಳಾಗಿದೆ ಅಷ್ಟೇ. ಅಷ್ಟರಲ್ಲಿಯೇ ಅವರ ಹಣೆ ಬರಹ ಜಗಜ್ಜಾಹೀರಾಗಿದೆ. ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಪ್ರತಿಯೊಬ್ಬರು ಬೀದಿಗಿಳಿಯಿವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

error: Content is protected !!