Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೌಡ್ಯಗಳಿಂದ ಹೊರಬಂದು ಬುದ್ಧನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಿದೆ : ಪ್ರೊ.ಸಿಕೆ ಮಹೇಶ್ವರಪ್ಪ ಅಭಿಮತ 

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ,
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಮೇ.23 :  ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಶಾತವಾಹನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ವಿಜಯ ಸಂಕಲ್ಪ ದಿನಪತ್ರಿಕೆ ವತಿಯಿಂದ ಬುದ್ಧ ಪೂರ್ಣಿಮಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಗೌತಮ ಬುದ್ಧನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಈ ವೇಳೆ ಮಾತನಾಡಿದ ಚಿಂತಕ ಬರಹಗಾರ ಮೈತ್ರಿ ದ್ಯಾಮಣ್ಣ ಗೌತಮ ಬುದ್ಧನ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತವಾಗಿರುತ್ತವೆ ಅವುಗಳನ್ನು ಅಳವಡಿಸಿಕೊಂಡು ಜೀವನ ಸಾಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಬುದ್ಧನ ಅಷ್ಟಾಂಗ ಮಾರ್ಗಗಳನ್ನು ಅನುಸರಿಸಿದಾಗ ಮಾತ್ರ ಉತ್ತಮ ಜೀವನ ಕಂಡುಕೊಳ್ಳಲು ಸಾಧ್ಯ ಯುವ ಜನತೆ ಬುದ್ಧ ಪ್ರಜ್ಞೆಯನ್ನು ಅಳವಡಿಸಿಕೊಂಡಾಗ ಮಾತ್ರ ಬುದ್ಧನ ಸತ್ಸಂಗ ಮಾರ್ಗವನ್ನು ಅನುಸರಿಸುವ ಮೂಲಕ ಬೆಳಕಿನೆಡೆಗೆ ಸಾಗೋಣ ಎಂದು ತಿಳಿಸಿದರು.

ಸಾಹಿತಿ ಹಾಗೂ ಪತ್ರಕರ್ತ ಕೊರ್ಲಕುಂಟೆ ತಿಪ್ಪೇಸ್ವಾಮಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಸಮಾಜವು ಕಲುಷಿತಗೊಳ್ಳುತ್ತಿದ್ದು ವಿಕೃತಿ ಮನಸ್ಥಿತಿಯನ್ನು ಹೊಂದುತ್ತಿದೆ ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂಬ ಹೀನ ಮನಸ್ಥಿತಿಯವರಿಗೆ ಬುದ್ಧ ಪ್ರಜ್ಞೆಯ ಅವಶ್ಯಕತೆ ಇದೆ ಬುದ್ದನ ನುಡಿಗಳು ಇಂದಿಗೂ ಪ್ರಸ್ತುತವಾಗಿದ್ದು ದ್ವೇಷ ಭಾವನೆಯಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ ಅಷ್ಟಾಂಗ ಮಾರ್ಗಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಮಾಜವನ್ನು ಶುದ್ಧೀಕರಣ ಗೊಳಿಸಲು ಸಾಧ್ಯ ಎಂದು ತಿಳಿಸಿದರು.

ಪ್ರೋ.ಸಿ ಕೆ ಮಹೇಶ್ವರಪ್ಪ ಮಾತಾಡಿ ಬುದ್ಧನ ಬಗ್ಗೆ ಮಾತನಾಡುವ ಬದಲು ಅವನ ನೀತಿಗಳನ್ನು ಅಳವಡಿಸಿಕೊಂಡು ಬಾಳುವುದು ಎಲ್ಲರ ಧರ್ಮವಾಗಿದೆ ಹಿಂದೂ ಧರ್ಮದಿಂದ ಮಾದಿಗ ಸಮುದಾಯ ಹೊರಬಂದು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವ ಪರಿಸ್ಥಿತಿ ಇಂದು ನಿರ್ಮಾಣವಾಗಿದೆ ಮಾದಿಗ ಸಮುದಾಯವು ರಾಜ್ಯದಲ್ಲಿ ಅತಿ ಹೆಚ್ಚಿನ ಜನಸಂಖ್ಯೆಯಲ್ಲಿದ್ದರೂ ಸಹ ನಮ್ಮ ಮೂಲಭೂತ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಮಾದಿಗ ಸಮುದಾಯ ಬೌದ್ಧ ಧರ್ಮದ ಕಡೆಗೆ ತಮ್ಮ ಮನಸ್ಥಿತಿಯನ್ನು ಬದಲಿಸಿಕೊಳ್ಳಬೇಕಿದೆ ಹಿಂದೂ ಧರ್ಮದಲ್ಲಿ ಬುದ್ಧನ ಪಂಚಶೀಲ ತತ್ವಗಳಿಗೆ ಬೆಲೆ ಇಲ್ಲದಂತಾಗಿದ್ದು ನಮ್ಮ ಸಮುದಾಯವು ಹಿಂದೂ ಧರ್ಮದಲ್ಲಿ ಇರುವವರೆಗೂ ಅಭಿವೃದ್ಧಿ ಕಾಣಲು ಸಾಧ್ಯವಾಗುವುದಿಲ್ಲ ಹಾಗಾಗಿ ಮಾದಿಗ ಸಮುದಾಯ ಮುಂದಿನ ದಿನಗಳಲ್ಲಿ ಬೌದ್ಧ ಧರ್ಮಕ್ಕೆ ಮರಳುವ ಬಗ್ಗೆ ಚಿಂತಿಸಬೇಕಿದೆ ಎಂದು ತಿಳಿಸಿದರು.

ಇದೇ ವೇಳೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ಎನ್ ಪಲ್ಲವಿ ಅಮಿತ್ ಸ್ಪೂರ್ತಿ ಸುಜಿತ್ ರವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು

ಕಾರ್ಯಕ್ರಮದಲ್ಲಿ ಸಾಹಿತಿ ಮೂಗೂರು ತೇಜ ನಿವೃತ್ತ ತಹಸಿಲ್ದಾರ್ ನಾಗರಾಜ್ ಮಾತನಾಡಿದರು.

ಈ ಸಂದರ್ಭದಲ್ಲಿ ಶಾತವಾಹನ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಕೃಷ್ಣಮೂರ್ತಿ ನಾಗರಾಜ್ ಮಲ್ಲಿಕಾರ್ಜುನ ಸಿಕೆ ಮಹೇಶ್ ಕುಮಾರ್ ಚಿಕ್ಕಣ್ಣ ತಿಪ್ಪೇಸ್ವಾಮಿ ಜಯಣ್ಣ ಶಿವಣ್ಣ ಪಿಡಿಒ ಇನಾಯಕ್ ಪಾಷಾ ರೈತ ಮುಖಂಡ ದಯಾನಂದ ಮೂರ್ತಿ ಹನುಮಂತಪ್ಪ ಆರ್ ದ್ಯಾಮರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವೀರೇಶನ್ ನಿಧನ : ಕಣ್ಣು ಮತ್ತು ದೇಹದಾನ

ಸುದ್ದಿಒನ್, ಚಿತ್ರದುರ್ಗ, ಜೂ.16 : ನೆಹರು ನಗರ ನಿವಾಸಿ, ಕಂದಾಯ ಇಲಾಖೆ ನಿವೃತ್ತ ರಾಜಸ್ವ ನಿರೀಕ್ಷಕ ವೀರೇಶನ್ ಎಂ.ಎನ್ (82) ಭಾನುವಾರ ಬೆಳಗ್ಗೆ 6 ಗಂಟೆಗೆ ನಿಧನರಾದರು. ಪತ್ನಿ ನಿವೃತ್ತ ಶಿಕ್ಷಕಿ ಅನ್ನಪೂರ್ಣಮ್ಮ, ಪುತ್ರರಾದ

ರೇಣುಕಾ ಸ್ವಾಮಿ ಮನೆಗೆ ಬಾಳೆಹೊನ್ನೂರು ರಂಭಾಪುರಿ ಶ್ರೀಗಳು ಭೇಟಿ : ಸಾಂತ್ವನ

ಸುದ್ದಿಒನ್, ಚಿತ್ರದುರ್ಗ, ಜೂನ್. 26 : ಇತ್ತೀಚೆಗೆ ಭೀಕರವಾಗಿ ಹತ್ಯೆ ಆಗಿರುವ ರೇಣುಕಸ್ವಾಮಿ ಅವರ ಮನೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಭೇಟಿಯಾದ

ಬ್ರಾಹ್ಮಣರಿಂದ ಹಿಡಿದು ದಲಿತರವರೆಗೆ ಎಲ್ಲರಿಗೂ ಸಮಾಜವನ್ನು ಪರಿವರ್ತಿಸುವ ಹೊಣೆಗಾರಿಕೆಯಿದೆ : ಪ್ರೊ.ಕಾಳೇಗೌಡ ನಾಗವಾರ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜೂ.16 : ಆರೋಗ್ಯಪೂರ್ಣ ಸಮಾಜವನ್ನು ಕಟ್ಟುವ ಜವಾಬ್ದಾರಿ ಬರಹಗಾರನ ಮೇಲಿದೆ ಎಂದು ಖ್ಯಾತ ಸಾಹಿತಿ ಹಾಗೂ

error: Content is protected !!