Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾವಿಲ್ಲಿ ಕೇವಲ ಪ್ರಚಾರಕ್ಕಾಗಿ ಬಂದಿಲ್ಲ. ನಿಮ್ಮ ಜತೆ ನಾವಿದ್ದೇವೆ : ಡಿ ಕೆ ಶಿವಕುಮಾರ್

Facebook
Twitter
Telegram
WhatsApp

ಸಿಂದಗಿ: ಇದು ಕೇವಲ ಉಪ ಚುನಾವಣೆಯಲ್ಲ. ಇದು ಸುಳ್ಳು ಹಾಗೂ ಸತ್ಯದ ನಡುವಿನ ಯುದ್ಧ. ಬಿಜೆಪಿಯವರು ಸುಳ್ಳಿನ ಮೇಲೆ ಮನೆ ಕಟ್ಟಲು ಹೊರಟಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

ಈ ವೇಳೆ ಮಾತನಾಡಿದ ಅವರು, ಒಂದು ವೇಳೆ ಬಿಜೆಪಿಯವರು ಜನರಿಗೆ ಏನಾದರೂ ನೆರವು ನೀಡಿದ್ದರೆ ಅದರ ಪಟ್ಟಿ ನೀಡಲಿ.ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಅವರ ಸಂಪುಟದಲ್ಲಿ ಎಚ್. ಆಂಜನೇಯ ಅವರನ್ನು ಸಚಿವರನ್ನಾಗಿ ಮಾಡಿ ಭಾರತ ಸಂವಿಧಾನದ ಆಶಯದಂತೆ ನಡೆದುಕೊಂಡಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳಿಗೆ ಜನಗಣತಿ ಆಧಾರದ ಮೇಲೆ ಅನುದಾನ ನೀಡಬೇಕು ಎಂಬ ಕಾನೂನು ದೇಶದಲ್ಲಿ ತಂದಿದ್ದರೆ ಅದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾತ್ರ.

ಬಿಜೆಪಿಯವರು ಇಂತಹ ಒಂದು ತೀರ್ಮಾನ ಮಾಡಿದ್ದರೆ ಹೇಳಲಿ. ಒಂದು ವೇಳೆ ಅವರು ಮಾಡಿದ್ದರೆ ಚುನಾವಣಾ ಭಾಷಣವೇ ಅಗತ್ಯವಿಲ್ಲ. ಬಾಬು ಜಗಜೀವನ್ ರಾಮ್ ಅವರಂತಹ ಮಹಾನ್ ನಾಯಕರು ಕಾಂಗ್ರೆಸ್ ನಲ್ಲಿ ಬೆಳೆದವರು. ಅವರ ಪುತ್ರಿ ಮೀರಾ ಕುಮಾರ್ ಅವರು ಲೋಕಸಭೆ ಸ್ಪೀಕರ್ ಆಗಿದ್ದವರು. ನಾವು ಎಲ್ಲ ವರ್ಗದವರಿಗೆ ಅಧಿಕಾರ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸುತ್ತಿದ್ದೇವೆ.

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 7 ವರ್ಷವಾಗಿದ್ದು, ಕೇಂದ್ರ ಸರ್ಕಾರದ ಸಚಿವರು ನಿಮಗೆ ಕಷ್ಟದ ಸಮಯದಲ್ಲಿ ಏನಾದರೂ ಶ್ರಮ ವಹಿಸಿದ್ದಾರಾ? ಬಡವರಿಗಾಗಿ ಎಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ?. ಬಿಜೆಪಿ ಶಕ್ತಿ ಕೇವಲ ನೋಟಿನಲ್ಲಿದೆ. ನಿಮ್ಮನ್ನು ಖರೀದಿಸಲು ಮುಂದಾಗುತ್ತಾರೆ. ಅವರು ಉತ್ತಮ ಆಡಳಿತ ನೀಡಿಲ್ಲ. ಬಡವರು, ರೈತರಿಗೆ ನೆರವು ನೀಡಿಲ್ಲ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಮೊಟ್ಟೆ ತಿಂದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ. ಮೊಟ್ಟೆ ಸೇವನೆ ಆರೋಗ್ಯಕ್ಕೆ ತುಂಬಾ ಉಪಯುಕ್ತ ಎಂದು ಹೇಳುತ್ತಾರೆ. ಮೊಟ್ಟೆಗಳಲ್ಲಿ ವಿಟಮಿನ್ ಎ, ವಿಟಮಿನ್ ಬಿ12, ವಿಟಮಿನ್ ಡಿ, ಪ್ರೊಟೀನ್, ಕ್ಯಾಲ್ಸಿಯಂ, ಸತು, ಫೋಲೇಟ್ ಮತ್ತು

ಶ್ರೀರಾಮನವಮಿಯಂದು 40 ಲಕ್ಷ ಭಕ್ತರು : ಮದುವಣಗಿತ್ತಿಯಂತೆ ಸಿಂಗಾರಗೊಂಡ ಅಯೋಧ್ಯಾ

ಸುದ್ದಿಒನ್ : 500 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ನವಮಿ ಆಚರಣೆ ನಡೆಯುತ್ತಿದೆ. ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ಪ್ರಥಮ ಬಾರಿಗೆ ನಡೆಯುತ್ತಿರುವ ಶ್ರೀರಾಮ ಕಲ್ಯಾಣ ಮಹೋತ್ಸವವನ್ನು ಆಯೋಜಿಸಲು

ಈಗ ಈ ರಾಶಿಯವರು ಮದುವೆ ಸಾಲಾವಳಿ ಕೇಳುವ ಸಮಯ ಬಂದಿದೆ

ಈಗ ಈ ರಾಶಿಯವರು ಮದುವೆ ಸಾಲಾವಳಿ ಕೇಳುವ ಸಮಯ ಬಂದಿದೆ, ಈ ರಾಶಿಯವರಿಗೆ ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆಯಿಂದ ಸಂತಸ, ಮಂಗಳವಾರ ರಾಶಿ ಭವಿಷ್ಯ ಏಪ್ರಿಲ್-16,2024 ಸೂರ್ಯೋದಯ: 06:03, ಸೂರ್ಯಾಸ್ತ : 06:28 ಶಾಲಿವಾಹನ ಶಕೆ1945,

error: Content is protected !!