Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾವೆಲ್ಲರೂ ಸ್ನೇಹ, ಸೌಹಾರ್ದತೆ, ಸಹಬಾಳ್ವೆಯಿಂದ ಬದುಕಬೇಕು : ಡಾ.ಜ್ಞಾನಪ್ರಕಾಶ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 24 : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲಾ ಹೇಗೆ ಬದುಕಬೇಕು. ಯಾವ ರೀತಿ ವ್ಯವಹರಿಸಬೇಕೆನ್ನುವ ಅರಿವು ಎಲ್ಲರಲ್ಲಿಯೂ ಇರಬೇಕೆಂದು ಕರ್ನಾಟಕ ಮಾನವ ಹಕ್ಕುಗಳ ಜನಜಾಗೃತಿ ಸಮಿತಿ ಸಂಸ್ಥಾಪಕ ಅಧ್ಯಕ್ಷ ಡಾ.ಜ್ಞಾನಪ್ರಕಾಶ್ ತಿಳಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಾನವ ಹಕ್ಕುಗಳ ಬಗ್ಗೆ ಉಪನ್ಯಾಸ ನೀಡಿ ಮಾತನಾಡಿದರು.

ಸಮಾಜದಲ್ಲಿ ನಾವ್ಯಾರು ಬಂಧುಗಳು, ನೆಂಟರಿಷ್ಟರಲ್ಲ. ಎಲ್ಲರೂ ಮನುಷ್ಯರು. ಪರಸ್ಪರರು ಸ್ನೇಹ, ಸೌಹಾರ್ಧತೆ, ಸಹಬಾಳ್ವೆಯಿಂದ ಬದುಕುವುದನ್ನು ಕಲಿತಾಗ ಜೀವನದಲ್ಲಿ ಯಾವ ಸಮಸ್ಯೆಯೂ ಎದುರಾಗುವುದಿಲ್ಲ ಎಂದರು.

ಲೇಖಕ ಹೆಚ್.ಆನಂದ್‍ಕುಮಾರ್ ಮಾತನಾಡಿ ಚಲನೆ, ಸಂಚಲನೆ ಇದೇ ಮನುಷ್ಯನ ಅರಿವಿನ ಮುಖ್ಯ ಲಕ್ಷಣ. ಮತ್ತೊಬ್ಬರನ್ನು ಮೆಚ್ಚಿಸಿ ಖುಷಿ ಪಡುವುದು ಮನುಷ್ಯತ್ವವಲ್ಲ ಎಂದು ಹೇಳಿದರು.

ಲಕ್ಷ್ಮಿಕಾಂತ್, ಜ್ಯೋತಿ, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಬೂದಿ ಪಾಪಯ್ಯ, ಫೈಲ್ವಾನ್ ಮಲ್ಲಿಕಾರ್ಜುನ, ಬಿ.ಕೃಷ್ಣಪ್ಪ, ಪುಷ್ಪವತಿ, ವಿನೋಧಮ್ಮ,ಲತಾ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...