Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಲಿತ ಎಂಬ ಕೀಳರಿಮೆ ತೆಗೆದು ಹಾಕುವಲ್ಲಿ ಒಗ್ಗಟ್ಟಾಗಬೇಕು : ಸಚಿವ ಪರಮೇಶ್ವರ್

Facebook
Twitter
Telegram
WhatsApp

ಮಂಗಳೂರು: ಪೀಳಿಗೆಗಳು ಬದಲಾದರೂ, ವಿದ್ಯಾವಂತರು ಹೆಚ್ಚಾದರೂ ಕೂಡ ಕೆಲವೊಂದು ಆಚಾರ – ವಿಚಾರಗಳನ್ನು ಜನ ಬದಲಾಯಿಸಿಕೊಂಡಿಲ್ಲ. ಅದರಲ್ಲಿ ದಲಿತ ಎಂಬ ಪದ್ದತಿ‌ ಕೂಡ. ಈ ಬಗ್ಗಡ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿ, ದಲಿತ ಎಂಬ ಕೀಳರಿಮೆ ತೆಗೆದು ಹಾಕುವುದಕ್ಕೆ ಎಲ್ಲರೂ ಒಗ್ಗಟ್ಟಾಗಬೇಕು. ಒಗ್ಗಟ್ಟಾಗದಿದ್ದಲ್ಲಿ ತುಳಿತಕ್ಕೊಳಗಾದ, ಶೋಷಿತ ಸಮಾಜ ಹಾಗೆಯೇ ಮುಂದುವರೆಯುತ್ತದೆ ಎಂದಿದ್ದಾರೆ.

ನಗರದಲ್ಲಿ ನಡೆದ ಆದಿ ದ್ರಾವಿಡ ಸಮಾವೇಶದಲ್ಲಿ ಮಾತನಾಡುತ್ತಾ, ನಮ್ಮ ರಕ್ಷಣೆಯನ್ನು ನಾವೇ ಮಾಡಿಕೊಳ್ಳಬೇಕು. ಯಾರೂ ಕೂಡ ನಮ್ಮ ರಕ್ಷಣೆಗೆ ಬರುವುದಿಲ್ಲ. ಬಲಯುತರಾಗಬೇಕು ಎಂದರೆ ಅಲ್ಲಿ ಶಿಕ್ಷಣ ಬಹಳ ಮುಖ್ಯ. ಆದ್ದರಿಂದ ಆದಿ ದ್ರಾವಿಡ ಸಮುದಾಯದವರ ಮನೆಗಳಲ್ಲಿ ಒಬ್ಬರಾದರೂ ಪದವೀಧರರಾಗಬೇಕು. ಈ ಸಂಕಲ್ಪವನ್ನು ಅಮುದಾಯದ ಪ್ರತಿಯೊಬ್ಬರು ತೆಗೆದುಕೊಳ್ಳಬೇಕು. ನಾನು ಕೂಡ ಆದಿ ದ್ರಾವಿಡ ಸಮುದಾಯದಿಂದ ಬಂದವನು. ನಮ್ಮ ತಂದೆ ಹೊರ ದೇಶಕ್ಕೆ ಕಳುಹಿಸಿ ವಿದ್ಯಾಭ್ಯಾಸ ಕೊಡಿಸುವ ಗುರಿ‌ ಇಟ್ಟುಕೊಂಡಿದ್ದರು. ಬಳಿಕ ರಾಜ್ಯ ರಾಜಕಾರಣಕ್ಕೆ ಬಂದು 35 ವರ್ಷಗಳ ಜರ್ನಿ ಪೂರೈಸಿದ್ದೀನಿ ಎಂದಿದ್ದಾರೆ.

ನಿಮ್ಮದೇ ಆದಿದ್ರಾವಿಡ ಸಮುದಾಯಕ್ಕೆ ಸೇರಿದವನು ಗೃಹಸಚಿವನಾಗಿ ಈ ರಾಜ್ಯದಲ್ಲಿ ನಿಮ್ಮ ಪ್ರತಿನಿಧಿಯಾಗಿ ಇದ್ದಾನೆ ಎಂದು ತಿಳಿಯಿರಿ. ಆ ಕಾರಣದಿಂದಲೇ ನಾನು ಈ ಸಮಾವೇಶಕ್ಕೆ ಬಂದಿದ್ದೇನೆ. ಈ ದೇಶದ ವರ್ಣಾಶ್ರಮ ವ್ಯವಸ್ಥೆಯಲ್ಲಿ ನಮ್ಮನ್ನು ಶೂದ್ರರು ಅತೀ ಶೂದ್ರರು ಎಂದು ಹೊರಗಿಟ್ಟಿದ್ದಾರೆ. ನಮ್ಮನ್ನು ಅತ್ಯಂತ ಕೀಳುಮಟ್ಟದಲ್ಲಿ ನೋಡಲಾಗುತ್ತಿದೆ‌. ಇಂದು ಒಂದಿಷ್ಟು, ಸ್ಥಾನಮಾನ ಗೌರವ ಅಂಥ ಹೇಳೋದಿಲ್ಲ, ಒಂದು ಗುರುತಿಸುವಿಕೆ ಇದೆಯೆಂದರೆ ಬಹುಶಃ ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದಲ್ಲಿ ಪರಿಶಿಷ್ಟ ಸಮಾಜಕ್ಕೆ ಮೀಸಲಾತಿ ನೀಡಿದ್ದೇ ಕಾರಣ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!