ಕಾಂಗ್ರೆಸ್ ಮುಕ್ತ ಎನ್ನುತ್ತಿದ್ದೆವು.. ಈಗ ನಮ್ಮ ಪಕ್ಷಕ್ಕೆ ಆ ಪರಿಸ್ಥಿತಿ ಬಂದಿದೆ : ರೇಣುಕಾಚಾರ್ಯ

1 Min Read

ದಾವಣಗೆರೆ: ಕಳೆದ ಕೆಲವು ದಿನಗಳಿಂದ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಸ್ವಪಕ್ಷದ ವಿರುದ್ಧವೇ ಆಕ್ರೋಶ ಹೊರ ಹಾಕುತ್ತಿದ್ದಾರೆ. ಇದೀಗ ಮತ್ತೆ ವಾಗ್ದಾಳಿ ನಡೆಸಿದ್ದು, ಹಿಂದೆಲ್ಲಾ ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದು ಹೇಳುತ್ತಿದ್ದೆವು. ಈಗ ಆ ಪರಿಸ್ಥಿತಿ ನಮ್ಮ ಪಕ್ಷಕ್ಕೇನೆ ಬಂದಿದೆ ಎಂದು ಬೇಸರ ಹೊರ ಹಾಕಿದ್ದಾರೆ.

ನಾನು ಬಿಜೆಪಿ ಬಿಡುತ್ತೇನೆ ಎಂದು ಎಲ್ಲೂ ಹೇಳಿಲ್ಲ. ರೇಣುಕಾಚಾರ್ಯ ಕಾಂಗ್ರೆಸ್ ಸೇರುತ್ತಾರೆಂದು ಬಿಜೆಪಿ ಪಾರ್ಟಿಯಿಂದ ಅಫ್ರಚಾರ ಮಾಡುತ್ತಿದ್ದಾರೆ. ನಾನು ಕ್ಷೇತ್ರದ ಸಮಸ್ಯೆಗಾಗಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದೇನೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಪಕ್ಷ ನನಗೆ ತಾಯಿ ಸಮಾನ. ಪಕ್ಷ ಬಿಡುವ ಯೋಚನೆಯೇ ಇಲ್ಲ ಎಂದಿದ್ದಾರೆ.

ಇನ್ನು ಪಕ್ಷದ ನಡೆಯಿಂದಾಗಿ ಯಡಿಯೂರಪ್ಪ ಅವರಿಗೆ ಬೇಸರವಾಗಿದೆ ಎಂದ ರೇಣುಕಾಚಾರ್ಯ, ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಮುಕ್ತಾಯವಾಗಿದೆ. ಆದ್ರೆ ಇನ್ನೂ ಕೂಡ ನೇಮಕ ಮಾಡಿಲ್ಲ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಇದು ಯಡಿಯೂರಪ್ಪ ಅವರ ಮನಸ್ಸಿಗೆ ಬೇಸರವಾಗಿದೆ. ಇನ್ನು ಕೆಲವರು ಪತ್ರಿಕಾ ಹೇಳಿಕೆಯ ಟೈಗರ್ ಗಳಾಗಿದ್ದಾರೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *