ನವದೆಹಲಿ: ಇಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ, ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ದಾಖಲೆಗಳನ್ನು ಮುರಿದು, ನಾವೂ ಮತ್ತೆ ಅಧಿಕಾರಕ್ಕೆ ಬರುತ್ತೀವಿ ಎಂದೇ ಖಡಕ್ ಉತ್ತರ ನೀಡಿದ್ದಾರೆ.
ಕಳೆದ ಮೂರು ದಿನದಿಂದ ಸಂಸತ್ ನಲ್ಲಿ ಹಲವರು ಮಾತನಾಡಿದ್ದಾರೆ. ದೇಶದ ಜನತೆ ನಮ್ಮ ಸರ್ಕಾರದ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದಾರೆ. ವಿರೋಧ ಪಕ್ಚಗಳು ಅಧಿಕಾರ ಪಡೆಯುವ ದಾಹದಲ್ಲಿವೆ. ಆದರೆ 2024ರಲ್ಲಿ ಎಲ್ಲಾ ದಾಖಲೆ ಮುರಿದು ಮತ್ತೆ ಅಧಿಕಾರಕ್ಕೆ ಬರುತ್ತೀವಿ.
ನಮಗೆ ಭಗವಂತನ ಮೇಲೆ ನಂಬಿಕೆ ಇದೆ. ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ನಮ್ಮ ವಿರೋಧವಿಲ್ಲ. 2018ರಲ್ಲೂ ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಇದು ನಿಮ್ಮ ನಡುವಿನ ವಿಶ್ವಾಸದ ಪ್ರಸ್ತಾವನೆಯಾಗಿದೆ. ಅವಿಶ್ವಾಸ ಪ್ರಸ್ತಾವನೆ ನಮ್ಮ ಪಾಲಿಗೆ ಶುಭವೇ ಆಗಲಿದೆ. ಎನ್ಡಿಎ ಬಲವೇ ಇಂಡಿಯಾದ ಬಲವಾಗಲಿದೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















