Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಡಿನೆಲ್ಲೆಡೆ ಆಯುಧ ಪೂಜಾ ಸಂಭ್ರಮ : ಮೈಸೂರಿನಲ್ಲಿ ಹೇಗಿದೆ..?

---Advertisement---

 

ಮೈಸೂರು: ಇಂದು ನಾಡಿನೆಲ್ಲೆಡೆ ಆಯುಧ ಪೂಜಾ ಸಂಭ್ರಮ ಮನೆ ಮಾಡಿದೆ. ತಮ್ಮ ತಮ್ಮ ಮನೆಯಲ್ಲಿರುವ ಆಯುಧ, ವಾಹನಗಳನ್ನು ಸ್ವಚ್ಛಗೊಳಿಸಿ, ಪೂಜೆಯಲ್ಲಿ ತೊಡಗಿಕೊಂಡಿದ್ದಾರೆ. ಇಂದು ಆಯುಧ ಪೂಜೆ ನಾಳೆ ದಸರಾ ಸಂಭ್ರಮ. ಹೀಗಾಗಿ ಹೂವು, ಹಣ್ಣು, ಕಾಯಿ ಹಣ್ಣುಗಳ ಬೆಲೆಯೂ ಗಗನಕ್ಕೇರಿದೆ.

ಇನ್ನು ಆಯುಧ ಪೂಜೆ ಎಂದರೆ ಮೈಸೂರಿನತ್ತ ಎಲ್ಲರ ಚಿತ್ತ ಹೋಗುತ್ತದೆ. ಹೇಗೆಲ್ಲಾ ಪೂಜೆ ನಡೆಯುತ್ತದೆ ಎಂಬ ಕುತೂಹಲವು ಇರುತ್ತದೆ. ಬೆಳಗ್ಗೆ 6 ಗಂಟೆಗೇನೆ ಚಂಡಿಕಾ ಹೋಮ ಆರಂಭವಾಗಿದೆ. ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಗಿದೆ. ಅಲ್ಲಿಂದ ಆಯುಧಗಳನ್ನು ಶುಚಿಗೊಳಿಸಿ, ಅರಮನೆಗೆ ತರಲಾಗಿದೆ. ಇದೇ ವೇಳೆ ಸಿಂಹಾಸನಕ್ಕೆ ಜೋಡಿಸಿದ್ದ ಸಿಂಹಗಳಿಗೂ ಪೂಜೆ ನೆರವೇರಿಸಿದ್ದಾರೆ.

ಯದುವೀರ್ ಕೃಷ್ಣದತ್ತ ಒಡೆಯರ್ ಅವರು ರಾಜಪುರೋಹಿತರ ಮಾರ್ಗದರ್ಶನದಂತೆ ಆಯುಧ ಪೂಜೆ ಮಾಡಿದ್ದಾರೆ. ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಒಂಟೆ, ಪಟ್ಟದ ಹಸು, ಅರಮನೆಯಲ್ಲಿರುವ ಐಷರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜೆ ಸಲ್ಲಿಸಿದ್ದಾರೆ. ಸಂಜೆ ವೇಳೆಗೆ ಖಾಸಗಿ ದರ್ಬಾರ್ ನಡೆಯಲಿದೆ. ಬೆಳ್ಳಿ ದ್ವಾರದಿಂದ ರಾಜರು ಪ್ರವೇಶ ಮಾಡುತ್ತಾರೆ. ಸಿಂಹಾಸನವೇರಿ ರಾಜರು ದರ್ಬಾರ್ ಮಾಡ್ತಾರೆ.

ಆನೆ ಪೂಜಾರಿ ಪ್ರಹ್ಲಾದ್ ಅವರು ಮಾಹಿತಿ ನೀಡುತ್ತಾ, ದಸರಾ ಹೊರಡುವಾಗ ಕುಶಾಲ ತೋಪು ನಡೆಸುತ್ತದೆ. ಆಗ ಪುಷ್ಪಾರ್ಚನೆ ಶುರುವಾಗುತ್ತೆ. ಆ ಸಮಯದಲ್ಲಿ ಆನೆಗೆ ವಿಶೇಷ ಪೂಜೆ ಆಗುತ್ತದೆ. ಕಾಡಿನಿಂದ ನಾಡಿಗೆ ಆನೆಗಳು ಬಂದಾಗ ಸೆಲೆಕ್ಟ್ ಮಾಡಿ, ಅರಮನೆಗೆ ಸೇರಿಸುತ್ತಾರೆ. ಶ್ರೀಕಂಠ, ಹೇಮಾವತಿ ಎಂಬ ಆನೆ ಬಂದಿದೆ. ಆ ಆನೆಗಳಿಗೆಲ್ಲಾ ಅರಣ್ಯ ಇಲಾಖೆ ಪೂಜೆಯನ್ನ ಸಲ್ಲಿಸುತ್ತದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...