Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹವಮಾನ ವರದಿ : ಮುಂದಿನ 4 ದಿನ ಈ ಜಿಲ್ಲೆಗಳಲ್ಲಿ ಜೋರು ಮಳೆ

---Advertisement---

ಬೆಂಗಳೂರು; ಮುಂಗಾರು ಮಳೆ ಆರಂಭವಾಗಿದ್ದು, ಎಲ್ಲೆಲ್ಲೂ ಮಳೆಯ ಅಬ್ಬರವಿದೆ. ಆರಂಭದಲ್ಲಿಯೇ ರಾಜ್ಯದ ಜಲಾಶಯಗಳು ಭರ್ತಿಯಾಗಿವೆ‌‌. ಹವಮಾನ ವರದಿ ನೀಡಿರುವ ವರದಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಜೋರು ಮಳೆಯಾಗಲಿದೆ ಎನ್ನಲಾಗಿದೆ. ಹಾಗಾದ್ರೆ ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯಾಗಲಿದೆ ಎಂಬುದನ್ನು ನೋಡೋಣಾ ಬನ್ನಿ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಜೂನ್ 23ರಿಂದ ಸಾಧಾರಣ ಮಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಕ್ಕೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಜೋರು ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ.

ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ದಾವಣಗೆರೆ, ಧಾರವಾಡ, ಶಿವಮೊಗ್ಗ, ಕೋಲಾರ, ಬಳ್ಳಾರಿ, ಹಾವೇರಿ, ಗದಗ, ಬೆಳಗಾವಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಬೀದರ್, ಯಾದಗಿರಿ, ಕಲಬುರಗಿ ಸೇರಿದಂತೆ ಹಲವು ಭಾಗದಲ್ಲಿ ಬೆಳಗ್ಗೆಯಿಂದ ಕೊಂಚ ಬಿಸಿಲು ಕಾಣಿಸಿಕೊಂಡಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಉಷ್ಣಾಂಶವನ್ನು ನೋಡುವುದಾದರೆ, ಚಿತ್ರುದುರ್ಗದಲ್ಲಿ ತಲಾ 32ಡಿಗ್ರಿ ಸೆಲ್ಸಿಯಸ್ ತಾಪಮಾನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ 30 ಡಿಗ್ರಿ ಸೆಲ್ಸಿಯಸ್, ಮೈಸೂರು 30 ಡಿಗ್ರಿ ಸೆಲ್ಸಿಯಸ್, ಗದಗ 30 ಮತ್ತು ಹಾವೇರಿ ಭಾಗದಲ್ಲಿ 30 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಸದ್ಯಕ್ಕೆ ಕರಾವಳಿ ಭಾಗದಲ್ಲಿ ಬಿಟ್ಟರೆ ಉಳಿದ ಭಾಗದಲ್ಲಿ ಜೋರು ಮಳೆಯ ಸೂಚನೆಯನ್ನೇನು ನೀಡಿಲ್ಲ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment