Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೀಟು ಹಂಚಿಕೆ ಕಗ್ಗಂಟ್ಟಿಗೆ ದೊಡ್ಡ ಗೌಡ್ರು ಎಂಟ್ರಿ : ಮೋದಿಗೆ ಕೊಟ್ಟ ಸಲಹೆ ಏನು..? ಆ ಬಗ್ಗೆ ಪ್ರಧಾನಿ ಏನಂದ್ರು..?

Facebook
Twitter
Telegram
WhatsApp

 

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿವೆ. ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಉರುಳಿಸಲು ಸಜ್ಜಾಗಿವೆ. ಆದರೆ ಇದರ ನಡುವೆ ಗೊಂದಲ ಉಂಟು ಮಾಡಿರುವುದೇ ಕ್ಷೇತ್ರ ಹಂಚಿಕೆ ವಿಚಾರ. ಜೆಡಿಎಸ್ ಮತ್ತು ಬಿಜೆಪಿ ನಡುವೆ ಕೆಲವೊಂದು ಕ್ಷೇತ್ರಗಳು ಬಹಳ ಮುಖ್ಯವಾಗುತ್ತದೆ. ಈ ಮೂಲಕ ಕ್ಷೇತ್ರ ಹಂಚಿಕೆಯೇ ಕಗ್ಗಂಟಾಗಿ ಉಳಿದಿತ್ತು. ಇದಕ್ಕೆ ಮಾಜಿ ಪ್ರಧಾನಿ ದೇವೇಗೌಡ ಅವರೇ ಸಲಹೆ ನೀಡಿದ್ದು, ಆ ಸಲಹೆಗೆ ಪ್ರಧಾನಿ ಮೋದಿ ಕೂಡ ಅಸ್ತು ಎಂದಿದ್ದಾರಂತೆ.

ದೋಸ್ತಿ ರಾಜಕಾರಣದಲ್ಲಿ ಬಿಜೆಪಿಯ ಅಂದಾಜಿನ ಪ್ರಕಾರ ಜೆಡಿಎಸ್ ಗೆ ಮೂರು ಮತ್ತೊಂದು ಕೊಡುವುದಕ್ಕೆ ರೆಡಿಯಾಗಿತ್ತು. ಆದರೆ ಈಗ ಜೆಡಿಎಸ್ ಕನಿಷ್ಠ ಆರು ಕ್ಷೇತ್ರ ಆದರೂ ಬೇಕು ಅಂತಿದೆ. ಹೀಗಾಗಿ ಮೋದಿ ಅವರಿಗೆ ದೇವೇಗೌಡ್ರೆ ಸಲಹೆ ನೀಡಿದ್ದು, ಎಲೆಕ್ಷನ್ ಗೂ ಮುನ್ನ ಸರ್ವೇ ನಡೆಸಲು ಸೂಚಿಸಿದ್ದಾರೆ.

ಜೆಡಿಎಸ್ ಗೆಲ್ಲುವ ಕ್ಷೇತ್ರಗಳಲ್ಲಿ ನಾನು ಸಮೀಕ್ಷೆ ಮಾಡಿಸುತ್ತೇನೆ. ಬಿಜೆಪಿ ಗೆಲ್ಲುವ ಕ್ಷೇತ್ರಗಳಲ್ಲಿ ನೀವು ಸರ್ವೇ ಮಾಡಿಸಿ ಅಂತ ಸಲಹೆ‌ ನೀಡಿದ್ದಾರೆ. ಈ ಸರ್ವೇ ಬಳಿಕ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಮಾಡೋಣ ಅಂತ ಗೌಡರು ಸಜೆಸ್ಟ್​​ ಮಾಡಿದ್ದಾರೆ. ಈ ಮಾತಿಗೆ ಒಪ್ಪಿಗೆ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ನಾಯಕರಿಗೆ ಸರ್ವೇ ಮಾಡಿಸಲು ಆರ್ಡರ್​​​ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಹಣ ಬಿಡುಗಡೆ : ಕೇಳಿದ್ದು ಎಷ್ಟು ಕೋಟಿ, ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ..?

ಬೆಂಗಳೂರು: ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ 3,454 ಕೋಟಿ ಹಣ ಬಿಡುಗಡೆ

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

error: Content is protected !!