ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಶಕ್ತಿ, ಗೃಹಜ್ಯೋತಿ ಈಗ ಗೃಹಲಕ್ಷ್ಮೀ ಯೋಜನೆ. ಹೊಸ ಸರ್ಕಾರ ರಚನೆಯಾದ ಮೇಲೆ ಮಹಿಳೆಯರೆಲ್ಲ ಹೆಚ್ಚು ಕಾಯುತ್ತಿದ್ದದ್ದು ಗೃಹಲಕ್ಷ್ಮೀ ಯೋಜನೆ ಯಾವಾಗಿಂದ ಬರುತ್ತೆ ಅಂತ. ಕಡೆಗೂ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದೆ. ಆದ್ರೆ ಮೂರು ದಿನದಿಂದ ಮಹಿಳೆಯರು ಅರ್ಜಿ ಸಲ್ಲಿಕೆಗೆ ಸಾಕಷ್ಟು ಹರಸಾಹಸ ಪಡುತ್ತಿದ್ದಾರೆ.
ಗೃಹಲಕ್ಷ್ಮೀ ಯೋಜನೆಗೆ ರೇಷನ್ ಕಾರ್ಡ್, ಆಧಾರ್ ಮಾರ್ಡ್, ಅಕೌಂಟ್ ಪಾಸ್ ಬುಕ್ ಬೇಕಾಗಿದೆ. ಮೂರು ದಿನದ ಹಿಂದೆಯೇ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿದೆ. ಆದ್ರೆ ಮೂರು ದಾಖಲೆಗಳನ್ನು ಹಿಡಿದುಕೊಂಡು ಮಹಿಳೆಯರು ಅರ್ಜಿ ಸಲ್ಲಿಸಲು ಬಂದರೆ ಅದೇ ಸರ್ವರ್ ಸಮಸ್ಯೆ ಎಲ್ಲರನ್ನು ಕಾಡುತ್ತಿದೆ. ಅರ್ಜಿಸಲ್ಲಿಸುವ ಸಮಯಕ್ಕೆ ಸರಿಯಾಗಿ ಸರ್ವರ್ ಡೌನ್ ಅನ್ನೋದು ಮಹಿಳೆಯರ ಎನರ್ಜಿಯನ್ನೇ ಡೌನ್ ಮಾಡಿಟ್ಟಿದೆ.
ಮೊಬೈಲ್ ನಂಬರ್ ಗೆ ಅರ್ಜಿ ಹಾಕಿದ ಮೇಲೆ ಒಂದು ಮೆಸೇಜ್ ಬರುತ್ತೆ. ಆದ್ರೆ ಸರ್ವರ್ ಸಮಸ್ಯೆಯಿಂದಾಗಿ ಆ ಮೆಸೇಜ್ ಬರುತ್ತಿಲ್ಲ, ಅರ್ಜಿ ಅಗ್ರೀ ಆಗುತ್ತಿಲ್ಲ. ಇದರ ಮಧ್ಯೆ ಮೊದಲ ದಿನವೇ 60 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್