Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿನ್ನೆ ದರ್ಶನ್ ಹಾಕಿದ್ದದ್ದು ಸನ್ ಗ್ಲಾಸ್ ಅಲ್ಲ.. ಪವರ್ ಗ್ಲಾಸ್ : ಏನಂದ್ರು ಬಳ್ಳಾರಿ ಎಸ್ಪಿ..?

Facebook
Twitter
Telegram
WhatsApp

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಲಾಕ್ ಆಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿದ್ದರು. ಆದರೆ ಟೀ ಕುಡ್ಕಿಂಡು, ಸಿಗರೇಟು ಸೇದುತ್ತಾ ರೌಡಿಶೀಟರ್ ಗಳ ಅಡ್ಡದಲ್ಲಿ ಕೂತಿದ್ದ ಫೋಟೋ ವೈರಲ್ ಆಗುತ್ತಿದ್ದಂತೆ ಎಲ್ಲೆಡೆ ಜೈಲಿನ ವ್ಯವಸ್ಥೆಯ ಬಗ್ಗೆ ಚರ್ಚೆಯಾಗುವುದಕ್ಕೆ ಶುರುವಾಗಿತ್ತು. ಸದ್ಯ ದರ್ಶನ್ ಅವರನ್ನು ಸೇರಿದಂತೆ ಗ್ಯಾಂಗ್ ಅನ್ನೇ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಸದ್ಯ ನಟ ದರ್ಶನ್ ಅವರು ಬಳ್ಳಾರಿ ಜೈಲಿನಲ್ಲಿದ್ದಾರೆ.

ಬಳ್ಳಾರಿ ಜೈಲಿಗೆ ಬರುವಾಗಲೂ ಬಿಂದಾಸ್ ಆಗಿ ಬಂದಿದ್ದಾರೆ ಎಂಬುದು ಚರ್ಚೆಗೆ ಗ್ರಾಸವಾಗಿತ್ತು. ಸನ್ ಗ್ಲಾಸ್ ಹಾಕಿಕೊಂಡಿದ್ದಾರೆ ಎಂಬ ವಿಚಾರ ಜೋರು ಕೇಳಿ ಬಂದಿತ್ತು. ಟೀ ಶರ್ಟ್ ಕಾಲರ್ ಗೆ ಈ ಗ್ಲಾಸ್ ಅನ್ನು ದರ್ಶನ್ ತಗಲಾಕಿಕೊಂಡಿದ್ದರು. ಅದು ಎಲ್ಲರ ಕಣ್ಣಿಗೂ ಬಿದ್ದಿತ್ತು. ಚರ್ಚೆಯಾಗುತ್ತಿದ್ದಂತೆ ಗ್ಲಾಸ್ ಬಗ್ಗೆಯೂ ಬಳ್ಳಾರು ಎಸ್ಪಿ ಶೋಭರಾಣಿ ಸ್ಪಷ್ಟನೆ ನೀಡಿದ್ದಾರೆ.

‘ದರ್ಶನ್ ತಂದಿದ್ದು ಕೂಲಿಂಗ್ ಗ್ಲಾಸ್ ಅಲ್ಲ ಪವರ್ ಗ್ಲಾಸ್. ಅವರು ಜೈಲಿನ ನಿಯಮಗಳನ್ನು ಫಾಲೋ ಮಾಡುತ್ತಿದ್ದಾರೆ. ಪವರ್ ಗ್ಲಾಸ್ ಹಾಕುವವರಿಗೆ ಜೈಲಿನಲ್ಲೂ ಹಾಕುವುದಕ್ಕೆ ಅವಕಾಶವಿದೆ. ಯಾರಿಗಾದರೂ ಕಣ್ಣಿನ ಸಮಸ್ಯೆ ಇದ್ದರೆ ಪವರ್ ಗ್ಲಾಸ್ ಹಾಕುವುದಕ್ಕೆ ಅನುಮತಿ ನೀಡಲಾಗುತ್ತದೆ. ಆ ಪವರ್ ಎಷ್ಟರಮಟ್ಟಿಗೆ ಇದೆ ಎಂಬುದನ್ನು ಚೆಕ್ ಮಾಡುತ್ತೇವೆ. ಇಲ್ಲಿ ಎಲ್ಲರಿಗೂ ನಾರ್ಮಲ್ ಫುಡ್ ಇರುತ್ತದೆ. ಅದೇ ಫುಡ್ ಅನ್ನೇ ದರ್ಶನ್ ಅವರು ತಿಂದಿದ್ದಾರೆ. ಜೊತೆಗೆ ಬರುವಾಗ ಅವರಿಗೆ ಕೋಳವನ್ನೇನು ಹಾಕಿಸಿಕೊಂಡು ಬಂದಿಲ್ಲ. ಅದರ ಅವಶ್ಯಕತೆ ಬಂದಿಲ್ಲ. ದರ್ಶನ್ ಜೈಲಿನ ಎಲ್ಲಾ ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!