Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೈಲಿನಿಂದ ಮನೆಗೆ ಬಂದ ಅಲ್ಲು ಅರ್ಜುನ್ ಹೇಳಿದ್ದೇನು..?

---Advertisement---

ಪುಷ್ಪ-2 ಸಿನಿಮಾದ ಶೋ ದಿನ ನಡೆದ ಅನಾಹುತಕ್ಕೆ ಅಲ್ಲು ಅರ್ಜುನ್ ಅವರನ್ನು ಹೈದ್ರಾಬಾದ್ ಪೊಲೀಸರು ಅರೆಸ್ಟ್ ಮಾಡಿದ್ದರು. ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೂ ನೀಡಲಾಗಿತ್ತು. ಆದರೆ ನಿನ್ನೆಯೇ ಅಲ್ಲು ಅರ್ಜುನ್ ಗೆ ಜಾಮೀನು ಕೂಡ ಸಿಕ್ಕಿದೆ. ಇಂದು ಜೈಲಿನಿಂದ ಮನೆಗೆ ಬಂದ ಅಲ್ಲು ಅರ್ಜುನ್, ಅಭಿಮಾನಿಗಳಿಗೋಸ್ಕರ ಪ್ರತಿಕ್ರಿಯೆ ನೀಡಿದ್ದಾರೆ.

‘ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕಾಗಿ ಧನ್ಯವಾದಗಳನ್ನು ತಿಳಿಸುತ್ತೇನೆ. ನನ್ನ ಎಲ್ಲಾ ಅಭಿಮಾನಿಗಳಿಗೂ ನಾನು ಧನ್ಯವಾದ ಹೇಳಲು ಇಷ್ಟಪಡುತ್ತೇನೆ. ಚಿಂತೆ ಮಾಡುವುದಕ್ಕೆ ಏನು ಇಲ್ಲ. ನಾನು ಆರಾಮಾಗಿ ಇದ್ದೀನಿ. ಕಾನೂನು ವ್ಯವಸ್ಥೆ ಮೇಲೆ ತುಂಬಾ ನಂಬಿಕೆ ಇದೆ. ನಾನು ಕಾನೂನು ವ್ಯವಸ್ಥೆಯನ್ನು ಗೌರವಿಸುತ್ತೇನೆ. ಮೃತ ಕುಟುಂಬಕ್ಕೆ‌ಮತ್ತೊಮ್ಮೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಇದು ದುರದೃಷ್ಟಕರ ಘಟನೆ. ಸಂತ್ರಸ್ತ ಕುಟುಂಬಕ್ಕೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಈ ಘಟನೆಗೆ ವಿಷಾಧಿಸುತ್ತೇನೆ ಎಂದಿದ್ದಾರೆ.

ಅಲ್ಲು ಅರ್ಜುನ್ ಪೊಲೀಸರ ಜೊತೆಗೆ ಹೋದ ಕೂಡಲೇ ಮನೆಯಲ್ಲೆಲ್ಲಾ ಟೆನ್ಶನ್ ಆಗಿದ್ದರು. ಆದರೆ ಜೈಲಿನಿಂದ ಮನೆಗೆ ಬರುತ್ತಿದ್ದಂತೆ ಎಲ್ಲರೂ ಖುಷಿಯಿಂದ ಸ್ವಾಗತ ಮಾಡಿದರು. ಪತ್ನಿ ಸ್ನೇಹಾ ಆರತಿ ಬೆಳಗಿ, ದೃಷ್ಟಿ ತೆಗೆದರು‌. ಮಕ್ಕಳಂತು ಓಡಿ ಬಂದು ತಬ್ಬಿಕೊಂಡರು. ಅಲ್ಲು ಅರವಿಂದ್ ಅವರು ಮಗನನ್ನು ನೋಡಿ ಕಣ್ಣೀರು ಹಾಕಿದರು‌. ಉಷ್ಟಕ್ಕೆ ಮುಗಿಯತಲ್ಲ ಎಂಬ ಸಮಾಧಾನ ಅಲ್ಲು ಅರ್ಜುನ್ ಮನೆಯಲ್ಲಿದೆ. ಪುಷ್ಪ-2 ಕ್ರೇಜ್ ಏನು ಕಡಿಮೆ ಇರಲಿಲ್ಲ. ಹೀಗಾಗಿ ಥಿಯೇಟರ್ ಬಳಿ ಜನಸಂದಣಿ ಇತ್ತು. ಕಾಲ್ತುಳಿದಿಂದ ಆ ಮಹಿಳೆ ಸಾವನ್ನಪ್ಪಿದರು. ಸದ್ಯ ಪರಿಹಾರವನ್ನು ಘೋಷಿಸಿದ್ದಾರೆ. ಈಗ ಮತ್ತೊಮ್ಮೆ ಆಕೆಯ ಸಾವಿಗೆ ಸಂತಾಪ ಸೂಚಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...