Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಗದೀಶ್ ಶೆಟ್ಟರ್ ಬಗ್ಗೆ ಸಿಎಂ-ಡಿಸಿಎಂ ಹೇಳಿದ್ದೇನು..?

---Advertisement---

 

ಬೆಂಗಳೂರು: ಇಂದು ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಜಗದೀಶ್ ಶೆಟ್ಟರ್ ಇದ್ದಕ್ಕಿದ್ದ ಹಾಗೇ ಬಿಜೆಪಿ ಪಕ್ಷಕ್ಕೆ ಮರಳಿ ಹೋಗಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಶಾಕಿಂಗ್ ವಿಚಾರ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ನನಗೆ ಇನ್ನೂ ರಾಜೀನಾಮೆ ಪತ್ರ ತಲುಪಿಲ್ಲ. ಕಾಂಗ್ರೆಸ್ ಪಕ್ಷ ಮರುಜೀವ ಕೊಟ್ಟಿದೆ ಎಂದು ಹೇಳುತ್ತಿದ್ದರು‌. ಯಾವತ್ತಿಗೂ ಪಕ್ಷ ಬಿಟ್ಟು ಹೋಗಲ್ಲ ಎಂದಿದ್ದರು. ಬಿಜೆಪಿ ವಿರುದ್ಧ ಬಹಳಷ್ಟು ಹೇಳಿಕೆಗಳನ್ನು ನೀಡಿದ್ದರು. ಹೇಗೆಲ್ಲಾ ದುರುಪಯೋಗ ಪಡಿಸಿಕೊಂಡಿದ್ದಾರೆಂಬುದನ್ನು ತಿಳಿಸಿದ್ದರು‌. ಚುನಾವಣೆಯಲ್ಲಿ 35 ಸಾವಿರ ಮತಗಳ ಅಂತರದಿಂದ ಸೋತಾಗಲೂ ಅವರನ್ನು ಪಕ್ಷ ಗೌರವಿಸಿದೆ. ಎಂಎಲ್ಸಿ ಮಾಡಿದ್ದೇವೆ. ಬಿಜೆಪಿ ಪಕ್ಷಕ್ಕೆ ಮತ್ತೆ ಹೋಗಿದ್ದು ಒತ್ತಡದಿಂದಾನಾ ಗೊತ್ತಿಲ್ಲ. ಯಾಕೆ ಅಂದು ಟಿಕೆಟ್ ಕೈತಪ್ಪಿದಾಗ ದೇಶದ ಹಿತ ನೆನಪಾಗಲಿಲ್ಲವಾ ಎಂದು ಪ್ರಶ್ನಿಸಿದ್ದಾರೆ‌.

ಇನ್ನು ಇದೇ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಮಾತನಾಡಿ, ನಿನ್ನೆ ಬೆಳಗ್ಗೆ ಕೂಡ ಅವರ ಜೊತೆಗೆ ಮಾತನಾಡಿದ್ದೆ. ಆದರೆ ದೆಹಲಿಯಲ್ಲಿ ಏನು ಮಾಡಿದ್ದಾರೋ ಗೊತ್ತಿಲ್ಲ. ಬಿಜೆಪಿಯವರು ಅವರಿಗೆ ಟಿಕೆಟ್ ಕೊಟ್ಟಿರಲಿಲ್ಲ. ಬಿಜೆಪಿಯಲ್ಲಿ ಅವಮಾನ ಆಗಿದೆ ಎಂದು ಕಾಂಗ್ರೆಸ್ ಗೆ ಬಂದರು. ಇಲ್ಲಿ ಅವರನ್ನು ಎಂಎಲ್ಸಿ ಮಾಡಿದೆವು. ಏನು ನಿರ್ಧಾರ ಮಾಡಿದ್ದಾರೆಂಬುದು ಗೊತ್ತಿಲ್ಲ. ನೋಡಿ ಹೇಳುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಜಗದೀಶ್ ಶೆಟ್ಟರ್ ತೊರೆಯುತ್ತಾರೆ ಎಂಬ ಅಭಿಪ್ರಾಯಗಳು ಕೇಳಿ ಬಂದಾಗಲೂ, ಯಾವುದೇ ಕಾರಣಕ್ಕೂ ವಾಪಾಸ್ ಬಿಜೆಪಿಗೆ ಹೋಗಲ್ಲ ಎಂದೇ ಜಗದೀಶ್ ಶೆಟ್ಟರ್ ಗಟ್ಟಿಯಾಗಿ ಹೇಳುತ್ತಿದ್ದರು. ಆದರೆ ಈಗ ಇದ್ದಕ್ಕಿದ್ದಂತೆ ಬಿಜೆಪಿಗೆ ಮರು ಸೇರ್ಪಡೆಯಾಗಿ, ಶಾಕ್ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...